Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...