Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...