Homeಫ್ಯಾಕ್ಟ್‌ಚೆಕ್FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

- Advertisement -
- Advertisement -

ವ್ಯಕ್ತಿಗಳಿಬ್ಬರು ರಸ್ತೆ ಬದಿಯಲ್ಲಿರುವ ಅಂಗಡಿಯೊಂದರ ಬಾಗಿಲನ್ನು ಆಯಧಗಳನ್ನು ಬಳಸಿ ಒಡೆದು ಹಾಕುತ್ತಿರುವ ಸಂದರ್ಭದಲ್ಲಿ ಇಬ್ಬರು ಸೇನಾ ಸಿಬ್ಬಂದಿ ತಮ್ಮ ವಾಹನವನ್ನು ನಿಲ್ಲಿಸಿ ಅವರ ಮೇಲೆ ಗನ್‌ಪಾಯಿಂಟ್‌ ತೋರಿಸಿ ನೆಲದ ಮೇಲೆ ಕುಳಿತುಕೊಳ್ಳಲು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ಭಾರತೀಯ ಸೈನಿಕರು ಎಷ್ಟು ಪ್ರಾಮುಖ್ಯತೆ ಪಡೆದಿದೆ ಎಂಬುದನ್ನು ತಪ್ಪದೆ ಅರ್ಥ ಮಾಡಿಕೊಳ್ಳಿ. ಏಕೆಂದರೆ ಜಿಹಾದಿಗಳಿಗೆ ನಮ್ಮ ಹೆಮ್ಮೆಯ ಖಡಕ್ ಸೈನಿಕರು ಮಾತ್ರ ಬುದ್ಧಿ ಕಲಿಸಬಲ್ಲರು. ಜಾಗೋ ಭಾರತ್ ಭಾರತೀಯ ಸನಾತನ ಹಿಂದೂ ನಾವೆಲ್ಲ ಒಂದು. ಜಿಹಾದಿಗಳ ಹುಟ್ಟಡಗಿಸಲು ಬಿಜೆಪಿ ಭಾರತ ದೇಶಕ್ಕೆ, ಬಹಳ ಮುಖ್ಯವಾಗಿ ಬೇಕಾಗಿದೆ”ಎಂಬ ಬರಹದೊಂದಿಗೆ 17, ಸೆಪ್ಟೆಂಬರ್ 2024 ರಂದು ಮಲ್ಲಿಕಾರ್ಜುನ ಎಂಬ ಎಕ್ಸ್ ಖಾತೆ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಘಟನೆ ಭಾರತದಲ್ಲಿ ನಡೆದಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋದಲ್ಲಿ ನಡೆದ ಘಟನೆ ಭಾರತದಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಹುಡುಕಿದಾಗ, ಆಗಸ್ಟ್ 17, 2024 ರಂದು ಬಾಂಗ್ಲಾದೇಶದ ಮಾಧ್ಯಮ ಜಮುನಾ ಟಿವಿ ತನ್ನ ಯೂಟ್ಯೂಬ್‌ ಚಾನಲ್‌ನಲ ಅಪ್ಲೋಡ್ ಮಾಡಿರುವ ವಿಡಿಯೋವೊಂದು ಕಂಡು ಬಂದಿದೆ. ವಿಡಿಯೋಗೆ ನೀಡಿದ ವಿವರಣೆಯ ಪ್ರಕಾರ ಬಾಂಗ್ಲಾದೇಶದ ಫರೀದ್‌ಪುರದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸೇನೆಯು ವ್ಯಕ್ತಿಗಳನ್ನು ಬಂಧಿಸಿದೆ.

ಆಗಸ್ಟ್ 17, 2024 ರಂದು ಬಾಂಗ್ಲಾದೇಶದ ವೆಬ್​ಸೈಟ್ ಢಾಕಾ ಪೋಸ್ಟ್  ಪ್ರಕಟಿಸಿದ ವರದಿ ಪ್ರಕಾರ, ಆಗಸ್ಟ್ 14 ರಂದು ಫರೀದ್‌ಪುರದ ಬೋಲ್ಮರಿಯಲ್ಲಿ ಬಿಎನ್​​ಪಿ ಬಣಗಳ ನಡುವಿನ ಗಲಾಟೆಯ ಸಂದರ್ಭ ಬಾಂಗ್ಲಾದೇಶ ಸೇನೆಯು ಈ ವ್ಯಕ್ತಿಗಳನ್ನು ಬಂಧಿಸಿದೆ. ಒಂದು ಪಕ್ಷದ ಕಾರ್ಯಕರ್ತರು ಇನ್ನೊಂದು ಪಕ್ಷದ ಅಂಗಡಿಗಳನ್ನು ಧ್ವಂಸಗೊಳಿಸಲು ಮುಂದಾಗಿದ್ದರು. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ತುತುಲ್ ಹೊಸೈನ್ (28) ಮತ್ತು ದುಖು ಮಿಯಾ (30) ಎಂದು ಗುರುತಿಸಲಾಗಿದೆ. ವೈರಲ್ ವಿಡಿಯೋದಲ್ಲಿರುವ ಇಬ್ಬರನ್ನು ಸೇನೆಯು ಬಂಧಿಸಿ ಪೊಲೀಸರಿಗೆ ಒಪ್ಪಿಸಿದೆ ಎಂದು ಬೋಲ್ಮರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಶಾಹಿದುಲ್ ಇಸ್ಲಾಂ ಹೇಳಿದ್ದಾರೆ’ ಎಂದು ವರದಿಯಲ್ಲಿದೆ.

ಒಟ್ಟಿನಲ್ಲಿ, ಅಂಗಡಿ ಬಾಗಿಲುಗಳನ್ನು ಒಡೆಯುತ್ತಿದ್ದ ಇಬ್ಬರು ಜಿಹಾದಿಗಳನ್ನು ಭಾರತೀಯ ಸೈನಿಕರು ಬಂಧಿಸಿದ್ದಾರೆ ಎಂದು ಬಾಂಗ್ಲಾದೇಶದ ಫರೀದ್‌ಪುರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...