Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಮುಸ್ಲಿಮರು ಹಿಂದೂ ದೇವಾಲಯವನ್ನು ಕೆಡವಿದ್ದಾರೆ ಎಂದು ಬರೆದುಕೊಂಡು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ. ವಿಡಿಯೋದಲ್ಲಿ ಮುಸ್ಲಿಮರ ಟೋಪಿ ಧರಿಸಿ ಕೆಲ ವ್ಯಕ್ತಿಗಳು ಸುತ್ತಿಗೆ ಹಿಡಿದು ಪ್ರವೇಶ ದ್ವಾರವೊಂದನ್ನು ಕೆಡವುವ ದೃಶ್ಯವಿದೆ.

ಆಂಧ್ರ ಪ್ರದೇಶದ ಗುಂಟೂರಿನ 17ನೇ ವಾರ್ಡ್‌ನಲ್ಲಿ 40 ವರ್ಷ ಹಳೆಯ ನಾಗ ದೇವಸ್ಥಾನವನ್ನು ಶಾಂತಿಪ್ರಿಯರು ಕಡೆವಿದ್ದಾರೆ. ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಮುಸ್ಲಿಮರು ಹಿಂದೂ ದೇವಸ್ಥಾನ ಕೆಡವಿದ್ದಾರೆ ಎಂಬ ಆರೋಪ ಸುಳ್ಳು ಎಂದು ಗೊತ್ತಾಗಿದೆ.

ಅಸಲಿಗೆ, ಆಂಧ್ರ ಪ್ರದೇಶದ ಗುಂಟೂರಿನಲ್ಲಿ ದರ್ಗಾ ಒಂದರ ಜಮೀನು ವಿಚಾರಕ್ಕೆ ಎರಡು ಮುಸ್ಲಿಂ ಗುಂಪುಗಳ ನಡುವೆ ಜಗಳ ನಡೆದಿದೆ. ಒಂದು ಗುಂಪು ದರ್ಗಾ ಕಟ್ಟಡ ಕೆಡವಿ ಹೊಸತು ನಿರ್ಮಿಸಲು ಮುಂದಾಗಿತ್ತು. ಈ ವೇಳೆ ಏಕಾಏಕಿ ಆಗಮಿಸಿದ ಇನ್ನೊಂದು ಗುಂಪು ಅಡ್ಡಿಪಡಿಸಿದೆ. ಈ ವೇಳೆ ವಾಗ್ವಾದ ನಡೆದು ಒಂದು ಗುಂಪು ದರ್ಗಾದ ಪ್ರವೇಶ ದ್ವಾರ ಕೆಡವಲು ಮುಂದಾಗಿದೆ.

ಈ ಪ್ರಕರಣ ಮುಸ್ಲಿಂ ಸಮುದಾಯದ ಜನರ ಎರಡು ಗುಂಪುಗಳ ನಡುವೆ ನಡೆದಿರುವುದೇ ಹೊರತು, ಇದರಲ್ಲಿ ಹಿಂದೂ-ಮುಸ್ಲಿಂ ಎಂಬ ಯಾವುದೇ ಕೋಮು ವೈಷಮ್ಯದ ವಿಷಯವಿಲ್ಲ. ವೈರಲ್ ವಿಡಿಯೋ ಹಳೆಯದ್ದಾಗಿದ್ದು, ಮತ್ತೆ ಹಂಚಿಕೊಳ್ಳಲಾಗಿದೆ.

ದರ್ಗಾದ ಪ್ರವೇಶ ದ್ವಾರ ಕೆಡವಿದ ಘಟನೆಗೆ ಸಂಬಂಧಿಸಿದಂತೆ ಅಕ್ಟೋಬರ್ 14,2022ರಂದು ಅಂಡಮಾನ್ & ನಿಕೋಬಾರ್ ದ್ವೀಪ ಬಿಜೆಪಿ ರಾಷ್ಟ್ರೀಯ ಉಸ್ತುವಾರಿ ಕಾರ್ಯದರ್ಶಿ ಸತ್ಯ ಕುಮಾರ್ ಯಾದವ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದರು.

ಇನ್ನು ಈ ಘಟನೆಯ ಕುರಿತು ಅಕ್ಟೋಬರ್ 17, 2022ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಅದರಲ್ಲಿ “ಅಕ್ಟೋಬರ್ 12, 2022ರಂದು ಗುಂಟೂರಿನ ಎಲ್‌ಆರ್‌ ನಗರ ಪ್ರದೇಶದ ಭಾಜಿ ಭಾಷಾ ನಿಶಾನಿ ದರ್ಗಾವನ್ನು ಕೆಲವು ಅಪರಿಚಿತ ಜನರು ಧ್ವಂಸಗೊಳಿಸಲು ಪ್ರಯತ್ನಿಸಿದ್ದಾರೆ ಎಂದಿತ್ತು.

ವರದಿಯ ಪ್ರಕಾರ, ದರ್ಗಾ ಇರುವ ಜಮೀನಿನ ಮಾಲೀಕ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹಾಗಾಗಿ, ಅವರ ಮಗಳು ದರ್ಗಾದಲ್ಲಿ ಪ್ರಾರ್ಥನೆ ಮುಂದುವರೆಸುವಂತೆ ಸ್ಥಳೀಯರನ್ನು ಕೋರಿದ್ದರು. ದರ್ಗಾ ಕಟ್ಟಡ ಶಿಥಿಲಗೊಂಡಿದ್ದರಿಂದ ಸ್ಥಳೀಯರು ಹಣ ಸಂಗ್ರಹಿಸಿ ಕಟ್ಟಡ ನವೀಕರಣ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಏಕಾಏಕಿ ಸ್ಥಳಕ್ಕೆ ಬಂದ ಅಪರಿಚಿತರ ಗುಂಪು, “ನಾವು ಹೊಸ ಕಟ್ಟಡ ಕಟ್ಟುತ್ತೇವೆ” ಎಂದು ಎಂದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ಶರುವಾಗಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದ ಲಾಲ್‌ಪೇಟ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಭಾಕರ್ ” ಘಟನೆ ಕುರಿತು ನಾವು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಪರಿಶೀಲಿಸಿ ಜಮೀನಿನ ನಿಜವಾದ ಮಾಲೀಕರು ಯಾರು ಎಂದು ಪತ್ತೆ ಹಚ್ಚಲಿದ್ದಾರೆ. ವಿವಾದ ಬಗೆ ಹರಿಯುವವರೆಗೆ ದರ್ಗಾ ಬಂದ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಗುಂಟೂರಿನಲ್ಲಿ ಹಿಂದು ದೇವಾಲಯವನ್ನು ಮುಸ್ಲಿಮರು ಕೆಡವಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ಸಂದೇಶ ಸುಳ್ಳು. ವಿಡಿಯೋದಲ್ಲಿ ಕಾಣುವ ಪ್ರವೇಶ ದ್ವಾರದಲ್ಲಿ ನಾಗನ ಆಕೃತಿ ಕಂಡು ಜನರು ಅದು ಹಿಂದೂ ದೇವಾಲಯ ಎಂದು ಪ್ರತಿಪಾದಿಸಿರಬಹುದು.

ಇದನ್ನೂ ಓದಿ : FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...