Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಮುಸ್ಲಿಮರು ಹಿಂದೂ ದೇವಾಲಯವನ್ನು ಕೆಡವಿದ್ದಾರೆ ಎಂದು ಬರೆದುಕೊಂಡು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ. ವಿಡಿಯೋದಲ್ಲಿ ಮುಸ್ಲಿಮರ ಟೋಪಿ ಧರಿಸಿ ಕೆಲ ವ್ಯಕ್ತಿಗಳು ಸುತ್ತಿಗೆ ಹಿಡಿದು ಪ್ರವೇಶ ದ್ವಾರವೊಂದನ್ನು ಕೆಡವುವ ದೃಶ್ಯವಿದೆ.

ಆಂಧ್ರ ಪ್ರದೇಶದ ಗುಂಟೂರಿನ 17ನೇ ವಾರ್ಡ್‌ನಲ್ಲಿ 40 ವರ್ಷ ಹಳೆಯ ನಾಗ ದೇವಸ್ಥಾನವನ್ನು ಶಾಂತಿಪ್ರಿಯರು ಕಡೆವಿದ್ದಾರೆ. ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಮುಸ್ಲಿಮರು ಹಿಂದೂ ದೇವಸ್ಥಾನ ಕೆಡವಿದ್ದಾರೆ ಎಂಬ ಆರೋಪ ಸುಳ್ಳು ಎಂದು ಗೊತ್ತಾಗಿದೆ.

ಅಸಲಿಗೆ, ಆಂಧ್ರ ಪ್ರದೇಶದ ಗುಂಟೂರಿನಲ್ಲಿ ದರ್ಗಾ ಒಂದರ ಜಮೀನು ವಿಚಾರಕ್ಕೆ ಎರಡು ಮುಸ್ಲಿಂ ಗುಂಪುಗಳ ನಡುವೆ ಜಗಳ ನಡೆದಿದೆ. ಒಂದು ಗುಂಪು ದರ್ಗಾ ಕಟ್ಟಡ ಕೆಡವಿ ಹೊಸತು ನಿರ್ಮಿಸಲು ಮುಂದಾಗಿತ್ತು. ಈ ವೇಳೆ ಏಕಾಏಕಿ ಆಗಮಿಸಿದ ಇನ್ನೊಂದು ಗುಂಪು ಅಡ್ಡಿಪಡಿಸಿದೆ. ಈ ವೇಳೆ ವಾಗ್ವಾದ ನಡೆದು ಒಂದು ಗುಂಪು ದರ್ಗಾದ ಪ್ರವೇಶ ದ್ವಾರ ಕೆಡವಲು ಮುಂದಾಗಿದೆ.

ಈ ಪ್ರಕರಣ ಮುಸ್ಲಿಂ ಸಮುದಾಯದ ಜನರ ಎರಡು ಗುಂಪುಗಳ ನಡುವೆ ನಡೆದಿರುವುದೇ ಹೊರತು, ಇದರಲ್ಲಿ ಹಿಂದೂ-ಮುಸ್ಲಿಂ ಎಂಬ ಯಾವುದೇ ಕೋಮು ವೈಷಮ್ಯದ ವಿಷಯವಿಲ್ಲ. ವೈರಲ್ ವಿಡಿಯೋ ಹಳೆಯದ್ದಾಗಿದ್ದು, ಮತ್ತೆ ಹಂಚಿಕೊಳ್ಳಲಾಗಿದೆ.

ದರ್ಗಾದ ಪ್ರವೇಶ ದ್ವಾರ ಕೆಡವಿದ ಘಟನೆಗೆ ಸಂಬಂಧಿಸಿದಂತೆ ಅಕ್ಟೋಬರ್ 14,2022ರಂದು ಅಂಡಮಾನ್ & ನಿಕೋಬಾರ್ ದ್ವೀಪ ಬಿಜೆಪಿ ರಾಷ್ಟ್ರೀಯ ಉಸ್ತುವಾರಿ ಕಾರ್ಯದರ್ಶಿ ಸತ್ಯ ಕುಮಾರ್ ಯಾದವ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದರು.

ಇನ್ನು ಈ ಘಟನೆಯ ಕುರಿತು ಅಕ್ಟೋಬರ್ 17, 2022ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಅದರಲ್ಲಿ “ಅಕ್ಟೋಬರ್ 12, 2022ರಂದು ಗುಂಟೂರಿನ ಎಲ್‌ಆರ್‌ ನಗರ ಪ್ರದೇಶದ ಭಾಜಿ ಭಾಷಾ ನಿಶಾನಿ ದರ್ಗಾವನ್ನು ಕೆಲವು ಅಪರಿಚಿತ ಜನರು ಧ್ವಂಸಗೊಳಿಸಲು ಪ್ರಯತ್ನಿಸಿದ್ದಾರೆ ಎಂದಿತ್ತು.

ವರದಿಯ ಪ್ರಕಾರ, ದರ್ಗಾ ಇರುವ ಜಮೀನಿನ ಮಾಲೀಕ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹಾಗಾಗಿ, ಅವರ ಮಗಳು ದರ್ಗಾದಲ್ಲಿ ಪ್ರಾರ್ಥನೆ ಮುಂದುವರೆಸುವಂತೆ ಸ್ಥಳೀಯರನ್ನು ಕೋರಿದ್ದರು. ದರ್ಗಾ ಕಟ್ಟಡ ಶಿಥಿಲಗೊಂಡಿದ್ದರಿಂದ ಸ್ಥಳೀಯರು ಹಣ ಸಂಗ್ರಹಿಸಿ ಕಟ್ಟಡ ನವೀಕರಣ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಏಕಾಏಕಿ ಸ್ಥಳಕ್ಕೆ ಬಂದ ಅಪರಿಚಿತರ ಗುಂಪು, “ನಾವು ಹೊಸ ಕಟ್ಟಡ ಕಟ್ಟುತ್ತೇವೆ” ಎಂದು ಎಂದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ಶರುವಾಗಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದ ಲಾಲ್‌ಪೇಟ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಭಾಕರ್ ” ಘಟನೆ ಕುರಿತು ನಾವು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಪರಿಶೀಲಿಸಿ ಜಮೀನಿನ ನಿಜವಾದ ಮಾಲೀಕರು ಯಾರು ಎಂದು ಪತ್ತೆ ಹಚ್ಚಲಿದ್ದಾರೆ. ವಿವಾದ ಬಗೆ ಹರಿಯುವವರೆಗೆ ದರ್ಗಾ ಬಂದ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಗುಂಟೂರಿನಲ್ಲಿ ಹಿಂದು ದೇವಾಲಯವನ್ನು ಮುಸ್ಲಿಮರು ಕೆಡವಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ಸಂದೇಶ ಸುಳ್ಳು. ವಿಡಿಯೋದಲ್ಲಿ ಕಾಣುವ ಪ್ರವೇಶ ದ್ವಾರದಲ್ಲಿ ನಾಗನ ಆಕೃತಿ ಕಂಡು ಜನರು ಅದು ಹಿಂದೂ ದೇವಾಲಯ ಎಂದು ಪ್ರತಿಪಾದಿಸಿರಬಹುದು.

ಇದನ್ನೂ ಓದಿ : FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...