Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಮುಸ್ಲಿಮರು ಹಿಂದೂ ದೇವಾಲಯವನ್ನು ಕೆಡವಿದ್ದಾರೆ ಎಂದು ಬರೆದುಕೊಂಡು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ. ವಿಡಿಯೋದಲ್ಲಿ ಮುಸ್ಲಿಮರ ಟೋಪಿ ಧರಿಸಿ ಕೆಲ ವ್ಯಕ್ತಿಗಳು ಸುತ್ತಿಗೆ ಹಿಡಿದು ಪ್ರವೇಶ ದ್ವಾರವೊಂದನ್ನು ಕೆಡವುವ ದೃಶ್ಯವಿದೆ.

ಆಂಧ್ರ ಪ್ರದೇಶದ ಗುಂಟೂರಿನ 17ನೇ ವಾರ್ಡ್‌ನಲ್ಲಿ 40 ವರ್ಷ ಹಳೆಯ ನಾಗ ದೇವಸ್ಥಾನವನ್ನು ಶಾಂತಿಪ್ರಿಯರು ಕಡೆವಿದ್ದಾರೆ. ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಮುಸ್ಲಿಮರು ಹಿಂದೂ ದೇವಸ್ಥಾನ ಕೆಡವಿದ್ದಾರೆ ಎಂಬ ಆರೋಪ ಸುಳ್ಳು ಎಂದು ಗೊತ್ತಾಗಿದೆ.

ಅಸಲಿಗೆ, ಆಂಧ್ರ ಪ್ರದೇಶದ ಗುಂಟೂರಿನಲ್ಲಿ ದರ್ಗಾ ಒಂದರ ಜಮೀನು ವಿಚಾರಕ್ಕೆ ಎರಡು ಮುಸ್ಲಿಂ ಗುಂಪುಗಳ ನಡುವೆ ಜಗಳ ನಡೆದಿದೆ. ಒಂದು ಗುಂಪು ದರ್ಗಾ ಕಟ್ಟಡ ಕೆಡವಿ ಹೊಸತು ನಿರ್ಮಿಸಲು ಮುಂದಾಗಿತ್ತು. ಈ ವೇಳೆ ಏಕಾಏಕಿ ಆಗಮಿಸಿದ ಇನ್ನೊಂದು ಗುಂಪು ಅಡ್ಡಿಪಡಿಸಿದೆ. ಈ ವೇಳೆ ವಾಗ್ವಾದ ನಡೆದು ಒಂದು ಗುಂಪು ದರ್ಗಾದ ಪ್ರವೇಶ ದ್ವಾರ ಕೆಡವಲು ಮುಂದಾಗಿದೆ.

ಈ ಪ್ರಕರಣ ಮುಸ್ಲಿಂ ಸಮುದಾಯದ ಜನರ ಎರಡು ಗುಂಪುಗಳ ನಡುವೆ ನಡೆದಿರುವುದೇ ಹೊರತು, ಇದರಲ್ಲಿ ಹಿಂದೂ-ಮುಸ್ಲಿಂ ಎಂಬ ಯಾವುದೇ ಕೋಮು ವೈಷಮ್ಯದ ವಿಷಯವಿಲ್ಲ. ವೈರಲ್ ವಿಡಿಯೋ ಹಳೆಯದ್ದಾಗಿದ್ದು, ಮತ್ತೆ ಹಂಚಿಕೊಳ್ಳಲಾಗಿದೆ.

ದರ್ಗಾದ ಪ್ರವೇಶ ದ್ವಾರ ಕೆಡವಿದ ಘಟನೆಗೆ ಸಂಬಂಧಿಸಿದಂತೆ ಅಕ್ಟೋಬರ್ 14,2022ರಂದು ಅಂಡಮಾನ್ & ನಿಕೋಬಾರ್ ದ್ವೀಪ ಬಿಜೆಪಿ ರಾಷ್ಟ್ರೀಯ ಉಸ್ತುವಾರಿ ಕಾರ್ಯದರ್ಶಿ ಸತ್ಯ ಕುಮಾರ್ ಯಾದವ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದರು.

ಇನ್ನು ಈ ಘಟನೆಯ ಕುರಿತು ಅಕ್ಟೋಬರ್ 17, 2022ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಅದರಲ್ಲಿ “ಅಕ್ಟೋಬರ್ 12, 2022ರಂದು ಗುಂಟೂರಿನ ಎಲ್‌ಆರ್‌ ನಗರ ಪ್ರದೇಶದ ಭಾಜಿ ಭಾಷಾ ನಿಶಾನಿ ದರ್ಗಾವನ್ನು ಕೆಲವು ಅಪರಿಚಿತ ಜನರು ಧ್ವಂಸಗೊಳಿಸಲು ಪ್ರಯತ್ನಿಸಿದ್ದಾರೆ ಎಂದಿತ್ತು.

ವರದಿಯ ಪ್ರಕಾರ, ದರ್ಗಾ ಇರುವ ಜಮೀನಿನ ಮಾಲೀಕ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಹಾಗಾಗಿ, ಅವರ ಮಗಳು ದರ್ಗಾದಲ್ಲಿ ಪ್ರಾರ್ಥನೆ ಮುಂದುವರೆಸುವಂತೆ ಸ್ಥಳೀಯರನ್ನು ಕೋರಿದ್ದರು. ದರ್ಗಾ ಕಟ್ಟಡ ಶಿಥಿಲಗೊಂಡಿದ್ದರಿಂದ ಸ್ಥಳೀಯರು ಹಣ ಸಂಗ್ರಹಿಸಿ ಕಟ್ಟಡ ನವೀಕರಣ ಕೆಲಸ ಪ್ರಾರಂಭಿಸಿದ್ದರು. ಈ ವೇಳೆ ಏಕಾಏಕಿ ಸ್ಥಳಕ್ಕೆ ಬಂದ ಅಪರಿಚಿತರ ಗುಂಪು, “ನಾವು ಹೊಸ ಕಟ್ಟಡ ಕಟ್ಟುತ್ತೇವೆ” ಎಂದು ಎಂದಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ಶರುವಾಗಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದ ಲಾಲ್‌ಪೇಟ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಭಾಕರ್ ” ಘಟನೆ ಕುರಿತು ನಾವು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಪರಿಶೀಲಿಸಿ ಜಮೀನಿನ ನಿಜವಾದ ಮಾಲೀಕರು ಯಾರು ಎಂದು ಪತ್ತೆ ಹಚ್ಚಲಿದ್ದಾರೆ. ವಿವಾದ ಬಗೆ ಹರಿಯುವವರೆಗೆ ದರ್ಗಾ ಬಂದ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಗುಂಟೂರಿನಲ್ಲಿ ಹಿಂದು ದೇವಾಲಯವನ್ನು ಮುಸ್ಲಿಮರು ಕೆಡವಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ಸಂದೇಶ ಸುಳ್ಳು. ವಿಡಿಯೋದಲ್ಲಿ ಕಾಣುವ ಪ್ರವೇಶ ದ್ವಾರದಲ್ಲಿ ನಾಗನ ಆಕೃತಿ ಕಂಡು ಜನರು ಅದು ಹಿಂದೂ ದೇವಾಲಯ ಎಂದು ಪ್ರತಿಪಾದಿಸಿರಬಹುದು.

ಇದನ್ನೂ ಓದಿ : FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...