Homeಫ್ಯಾಕ್ಟ್‌ಚೆಕ್FACT CHECK : ಉತ್ತರ ಪ್ರದೇಶದ ಪೇಂಟರ್‌ನನ್ನು ಕೇರಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಬ್ರೆಝಿಲ್‌ನ...

FACT CHECK : ಉತ್ತರ ಪ್ರದೇಶದ ಪೇಂಟರ್‌ನನ್ನು ಕೇರಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಬ್ರೆಝಿಲ್‌ನ ವಿಡಿಯೋ ಹಂಚಿಕೆ

- Advertisement -
- Advertisement -

ಉತ್ತರ ಪ್ರದೇಶದ ರಾಮ್‌ಪುರ ಮೂಲದ ಪೇಂಟರ್‌ನನ್ನು ಕೇರಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂಬ ಸಂದೇಶದೊಂದಿಗೆ ವಿಡಿಯೋವೊಂದು ವೈರಲ್ ಆಗಿದೆ.

ಕೆಲವರು ಈ ಘಟನೆ ಉತ್ತರಾಖಂಡದದಲ್ಲಿ ನಡೆದಿದೆ ಎಂದರೆ, ಮತ್ತೆ ಕೆಲವರು ಈ ಘಟನೆ ನೋಯ್ಡಾದಲ್ಲಿ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ.

ಗೋಡೆಗೆ ಪೇಂಟ್ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ಮಳೆಗರೆಯುವ ಭಯಾನಕ ವಿಡಿಯೋ ಇದಾಗಿದೆ. ಮರದ ಬೆಂಚಿನ ಮೇಲೆ ನಿಂತುಕೊಂಡು ಗೋಡೆಗೆ ಪೇಂಟಿಂಗ್ ಮಾಡುತ್ತಿರುವಂತೆ ಕಾಣುವ ವ್ಯಕ್ತಿಯ ಮೇಲೆ, 13 ಸೆಕೆಂಡ್‌ಗಳ ಅಂತರದಲ್ಲಿ ಕನಿಷ್ಠ ಹದಿನೇಳು ಬಾರಿ ಗುಂಡು ಹಾರಿಸಲಾಗಿದೆ.

ಫ್ಯಾಕ್ಟ್‌ಚೆಕ್‌ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಪರಿಶೀಲಿಸಿದ್ದೇವೆ. ಈ ವೇಳೆ 30 ಜೂನ್ 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ಮೂಲ ವಿಡಿಯೋ ದೊರೆತಿದೆ. ಎಕ್ಸ್‌ ಪೋಸ್ಟ್‌ನಲ್ಲಿ ಪೋರ್ಚ್‌ಗೀಸ್ ಭಾಷೆಯಲ್ಲಿ ಬರೆದುಕೊಂಡಿರುವುದರಿಂದ ನಾವು ಅದನ್ನು ಇಂಗ್ಲಿಷ್‌ಗೆ ಭಾಷಾಂತರಿಸಿ ಅರ್ಥ ಕಂಡುಕೊಂಡಿದ್ದೇವೆ.

ಹುಚ್ಚ ಕ್ರಿಮಿನಲ್ ಓರ್ವ ಮನೌಸ್‌ನ ನೊವೊ ಅಲೆಕ್ಸೊದಲ್ಲಿ ಓಲ್ಹಾವೊ ಎಂಬ ವ್ಯಕ್ತಿಯನ್ನು ಕೊಲೆ ಮಾಡಿ ಅದನ್ನು ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಳ್ಳಲಾಗಿದೆ.

ನಾವು ಘಟನೆ ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 28 ಜೂನ್ 2024 ರಂದು ಪೋರ್ಚುಗೀಸ್‌ ಭಾಷೆಯ portaltucuma.com.br ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ವರದಿಯೊಂದು ಪತ್ತೆಯಾಗಿದೆ. ಆ ವರದಿಯಲ್ಲಿ ಬ್ರೆಝಿಲ್‌ನ ಮನೌಸ್ ನಗರದ ನೊವೊ ಅಲೆಕ್ಸೊ ಎಂಬಲ್ಲಿನ ಮನೆಯೊಂದರಲ್ಲಿ ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ಲ್ಯೂಕಾಸ್ ಪೆರೇರಾ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವಿವರಿಸಲಾಗಿದೆ.

ಪೋರ್ಟಾಲ್‌ ಡೊ ಹೋಲಾಂಡ ಎಂಬ ಯೂಟ್ಯೂಬ್ ಚಾನೆಲ್‌ನಲ್ಲೂ ಜೂನ್ 29, 2024ರಂದು ಘಟನೆ ಕುರಿತು ವಿಡಿಯೋ ವರದಿ ಪ್ರಕಟಿಸಲಾಗಿದ್ದು, ಅದರಲ್ಲಿ ಹತ್ಯೆಗೊಳಗಾದ ಲ್ಯೂಕಾಸ್ ಪೆರೇರಾ ಮಾದಕ ವಸ್ತು ಕಳ್ಳ ಸಾಗಾಟದ ಆರೋಪ ಹೊಂದಿದ್ದು, ಈತ ಈ ವಿಚಾರದಲ್ಲಿ ಗುಂಪೊಂದರ ಜೊತೆ ಜಗಳವಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಇದೇ ಕಾರಣಕ್ಕೆ ಆತನ ಹತ್ಯೆ ನಡೆದಿರಬಹುದು ಎಂದು ಉಲ್ಲೇಖಿಸಲಾಗಿದೆ. ಈ ಅಂಶಗಳಿಂದ ವೈರಲ್‌ ವಿಡಿಯೋ ಭಾರತಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ.

ಒಟ್ಟಿನಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋ ಕೇರಳದಲ್ಲಿ ನಡೆದ ಘಟನೆಯದ್ದಲ್ಲ. ಅಸಲಿಗೆ ಆ ವಿಡಿಯೋ ಭಾರತಕ್ಕೇ ಸಂಬಂಧಿಸಿಲ್ಲ. ಅದು ಬ್ರೆಝಿಲ್‌ನಲ್ಲಿ ನಡೆದ ಘಟನೆಯದ್ದಾಗಿದೆ. ಹಾಗಾಗಿ, ವೈರಲ್‌ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...