Homeಫ್ಯಾಕ್ಟ್‌ಚೆಕ್FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

- Advertisement -
- Advertisement -

ರಸ್ತೆಯ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ರಚಿಸಿ ಅದರ ಮೇಲೆ ವಾಹನ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

“ವಾಹನ ಸಂಖ್ಯೆ. ಕೆಎಲ್‌-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ” ಎಂಬ ಬರಹದೊಂದಿಗೆ ವಿಡಿಯೋವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ ಎಂದೂ ಹೇಳಿಕೊಂಡಿದ್ದಾರೆ.

ಒಟ್ಟು 4 ನಿಮಿಷ 50 ಸೆಕೆಂಡ್ ಅವಧಿಯ ವೈರಲ್ ವಿಡಿಯೋದಲ್ಲಿ, 3 ನಿಮಿಷ 8 ಸೆಕೆಂಡ್‌ನಿಂದ ಕೆಲವರು ಕೈಯಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಘೋಷಣೆ ಕೂಗುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಕೇರಳದ ವಯನಾಡಿನಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಂತಹ ಯಾವುದೇ ಘಟನೆ ನಿಜವಾಗಿಯೂ ನಡೆದಿದ್ದರೆ, ಮಾಧ್ಯಮಗಳಲ್ಲಿ ಅದು ಸುದ್ದಿಯಾಗುತ್ತಿತ್ತು. ಆದರೆ, ಅಂತಹ ಯಾವುದೇ ವರದಿಗಳು ನಮಗೆ ಕಂಡು ಬಂದಿಲ್ಲ.

ಅಲ್ಲದೆ, ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ದೃಶ್ಯಗಳು ಕೇರಳಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ನಡೆದಿರುವುದು ಪಾಕಿಸ್ತಾನದ ಕರಾಚಿಯಲ್ಲಿ ಎಂಬ ಅನೇಕ ಸುಳಿವುಗಳನ್ನು ವಿಡಿಯೋದಲ್ಲೇ ನೋಡಬಹುದು.

ಇದು ಪಾಕಿಸ್ತಾನದ ಕರಾಚಿಗೆ ಸಂಬಂಧಿಸಿದ ವಿಡಿಯೋ ಎಂದು ‘ಇಂಡಿಯಾ ಟುಡೇ‘ ವರದಿ ಮಾಡಿದೆ.  ವಿಡಿಯೋದಲ್ಲಿ ಕಾಣುವ ವಾಹನವೊಂದರ ಮೇಲೆ ಬರೆಯಲಾಗಿರುವ ‘ಹುನಾರ್ ಫೌಂಡೇಷನ್’ ಎಂಬ ಹೆಸರು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಗೆ ಸಂಬಂಧಿಸಿದ್ದಾಗಿದೆ. ವಿಡಿಯೋದಲ್ಲಿ ಕಾಣಿಸುವ ಆಟೋ ರಿಕ್ಷಾಗಳು ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುತ್ತಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ ಎಂದು ಇಂಡಿಯಾ ಟುಡೇ ಹೇಳಿದೆ.

ವೈರಲ್ ವಿಡಿಯೋದಲ್ಲಿ 3 ನಿಮಿಷ 38 ಸೆಕೆಂಡ್ ಅವಧಿಯಲ್ಲಿ ‘ದಿ ಹುನಾರ್ ಫೌಂಡೇಶನ್’ ಎಂದು ಬರೆದಿರುವ ಬಿಳಿ ವ್ಯಾನ್ ಹಾದು ಹೋಗುವುದನ್ನು ಕಾಣಬಹುದು. ದಿ ಹುನಾರ್ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಮಾಹಿತಿಯ ಪ್ರಕಾರ, ಸಂಸ್ಥೆಯು ಕರಾಚಿಯಲ್ಲಿದೆ ಮತ್ತು ಇದು ಪಾಕಿಸ್ತಾನದ ಯುವಕರಿಗೆ ಕೌಶಲ್ಯ ಅಭಿವೃದ್ಧಿ, ತಾಂತ್ರಿಕ ತರಬೇತಿಯನ್ನು ನೀಡುವ ಸಂಸ್ಥೆಯಾಗಿದೆ. ಇದು ಕರಾಚಿಯ ದೆಹಲಿ ಮರ್ಕೆಂಟೈಲ್ ಸೊಸೈಟಿ ಪ್ರದೇಶದಲ್ಲಿ ತನ್ನ ಮೊದಲ ಬ್ಯಾಚ್ ಅನ್ನು ಪ್ರಾರಂಭಿಸಿತು. ಕರಾಚಿ ಮೂಲದ ಪ್ರಿಂಟಿಂಗ್ ಅಂಗಡಿಯ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ವಾಹನಗಳ ಚಿತ್ರಗಳನ್ನು ಕಾಣಬಹುದು.

ವಿಡಿಯೋದಲ್ಲಿ 3 ನಿಮಿಷ 44 ಸೆಕೆಂಡ್‌ಗಳಲ್ಲಿ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಕಾರನ್ನು ಗುರುತಿಸಬಹುದು. ಅದರ ಮೇಲೆ ‘BFK-625’ಎಂದು ಬರೆಯಲಾಗಿದೆ. ಗೂಗಲ್ ಮೂಲಕ ಸರ್ಚ್ ಮಾಡಿದಾಗ ಅಂತಹ ನಂಬರ್ ಪ್ಲೇಟ್‌ಗಳು ಪಾಕಿಸ್ತಾನದ ಸಿಂಧ್ ಪ್ರಾಂತ್ಯಕ್ಕೆ ಸಂಬಂಧಿಸಿವೆ ಎಂದು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ ಧ್ವಜವನ್ನು ಅವಮಾನಿಸುವ ಪಾಕಿಸ್ತಾನದ ದೃಶ್ಯಗಳನ್ನು ಕೇರಳದ ವಯನಾಡ್‌ನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಾಣಿಸುವ ರಿಕ್ಷಾಗಳು ಕೇರಳ ಅಥವಾ ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುವುದಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...