Homeಫ್ಯಾಕ್ಟ್‌ಚೆಕ್FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

- Advertisement -
- Advertisement -

ರಸ್ತೆಯ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ರಚಿಸಿ ಅದರ ಮೇಲೆ ವಾಹನ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

“ವಾಹನ ಸಂಖ್ಯೆ. ಕೆಎಲ್‌-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ” ಎಂಬ ಬರಹದೊಂದಿಗೆ ವಿಡಿಯೋವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ ಎಂದೂ ಹೇಳಿಕೊಂಡಿದ್ದಾರೆ.

ಒಟ್ಟು 4 ನಿಮಿಷ 50 ಸೆಕೆಂಡ್ ಅವಧಿಯ ವೈರಲ್ ವಿಡಿಯೋದಲ್ಲಿ, 3 ನಿಮಿಷ 8 ಸೆಕೆಂಡ್‌ನಿಂದ ಕೆಲವರು ಕೈಯಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಘೋಷಣೆ ಕೂಗುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಕೇರಳದ ವಯನಾಡಿನಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಂತಹ ಯಾವುದೇ ಘಟನೆ ನಿಜವಾಗಿಯೂ ನಡೆದಿದ್ದರೆ, ಮಾಧ್ಯಮಗಳಲ್ಲಿ ಅದು ಸುದ್ದಿಯಾಗುತ್ತಿತ್ತು. ಆದರೆ, ಅಂತಹ ಯಾವುದೇ ವರದಿಗಳು ನಮಗೆ ಕಂಡು ಬಂದಿಲ್ಲ.

ಅಲ್ಲದೆ, ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ದೃಶ್ಯಗಳು ಕೇರಳಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ನಡೆದಿರುವುದು ಪಾಕಿಸ್ತಾನದ ಕರಾಚಿಯಲ್ಲಿ ಎಂಬ ಅನೇಕ ಸುಳಿವುಗಳನ್ನು ವಿಡಿಯೋದಲ್ಲೇ ನೋಡಬಹುದು.

ಇದು ಪಾಕಿಸ್ತಾನದ ಕರಾಚಿಗೆ ಸಂಬಂಧಿಸಿದ ವಿಡಿಯೋ ಎಂದು ‘ಇಂಡಿಯಾ ಟುಡೇ‘ ವರದಿ ಮಾಡಿದೆ.  ವಿಡಿಯೋದಲ್ಲಿ ಕಾಣುವ ವಾಹನವೊಂದರ ಮೇಲೆ ಬರೆಯಲಾಗಿರುವ ‘ಹುನಾರ್ ಫೌಂಡೇಷನ್’ ಎಂಬ ಹೆಸರು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಗೆ ಸಂಬಂಧಿಸಿದ್ದಾಗಿದೆ. ವಿಡಿಯೋದಲ್ಲಿ ಕಾಣಿಸುವ ಆಟೋ ರಿಕ್ಷಾಗಳು ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುತ್ತಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ ಎಂದು ಇಂಡಿಯಾ ಟುಡೇ ಹೇಳಿದೆ.

ವೈರಲ್ ವಿಡಿಯೋದಲ್ಲಿ 3 ನಿಮಿಷ 38 ಸೆಕೆಂಡ್ ಅವಧಿಯಲ್ಲಿ ‘ದಿ ಹುನಾರ್ ಫೌಂಡೇಶನ್’ ಎಂದು ಬರೆದಿರುವ ಬಿಳಿ ವ್ಯಾನ್ ಹಾದು ಹೋಗುವುದನ್ನು ಕಾಣಬಹುದು. ದಿ ಹುನಾರ್ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಮಾಹಿತಿಯ ಪ್ರಕಾರ, ಸಂಸ್ಥೆಯು ಕರಾಚಿಯಲ್ಲಿದೆ ಮತ್ತು ಇದು ಪಾಕಿಸ್ತಾನದ ಯುವಕರಿಗೆ ಕೌಶಲ್ಯ ಅಭಿವೃದ್ಧಿ, ತಾಂತ್ರಿಕ ತರಬೇತಿಯನ್ನು ನೀಡುವ ಸಂಸ್ಥೆಯಾಗಿದೆ. ಇದು ಕರಾಚಿಯ ದೆಹಲಿ ಮರ್ಕೆಂಟೈಲ್ ಸೊಸೈಟಿ ಪ್ರದೇಶದಲ್ಲಿ ತನ್ನ ಮೊದಲ ಬ್ಯಾಚ್ ಅನ್ನು ಪ್ರಾರಂಭಿಸಿತು. ಕರಾಚಿ ಮೂಲದ ಪ್ರಿಂಟಿಂಗ್ ಅಂಗಡಿಯ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ವಾಹನಗಳ ಚಿತ್ರಗಳನ್ನು ಕಾಣಬಹುದು.

ವಿಡಿಯೋದಲ್ಲಿ 3 ನಿಮಿಷ 44 ಸೆಕೆಂಡ್‌ಗಳಲ್ಲಿ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಕಾರನ್ನು ಗುರುತಿಸಬಹುದು. ಅದರ ಮೇಲೆ ‘BFK-625’ಎಂದು ಬರೆಯಲಾಗಿದೆ. ಗೂಗಲ್ ಮೂಲಕ ಸರ್ಚ್ ಮಾಡಿದಾಗ ಅಂತಹ ನಂಬರ್ ಪ್ಲೇಟ್‌ಗಳು ಪಾಕಿಸ್ತಾನದ ಸಿಂಧ್ ಪ್ರಾಂತ್ಯಕ್ಕೆ ಸಂಬಂಧಿಸಿವೆ ಎಂದು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ ಧ್ವಜವನ್ನು ಅವಮಾನಿಸುವ ಪಾಕಿಸ್ತಾನದ ದೃಶ್ಯಗಳನ್ನು ಕೇರಳದ ವಯನಾಡ್‌ನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಾಣಿಸುವ ರಿಕ್ಷಾಗಳು ಕೇರಳ ಅಥವಾ ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುವುದಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...