Homeಫ್ಯಾಕ್ಟ್‌ಚೆಕ್FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

- Advertisement -
- Advertisement -

ರಸ್ತೆಯ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ರಚಿಸಿ ಅದರ ಮೇಲೆ ವಾಹನ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

“ವಾಹನ ಸಂಖ್ಯೆ. ಕೆಎಲ್‌-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ” ಎಂಬ ಬರಹದೊಂದಿಗೆ ವಿಡಿಯೋವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ ಎಂದೂ ಹೇಳಿಕೊಂಡಿದ್ದಾರೆ.

ಒಟ್ಟು 4 ನಿಮಿಷ 50 ಸೆಕೆಂಡ್ ಅವಧಿಯ ವೈರಲ್ ವಿಡಿಯೋದಲ್ಲಿ, 3 ನಿಮಿಷ 8 ಸೆಕೆಂಡ್‌ನಿಂದ ಕೆಲವರು ಕೈಯಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಘೋಷಣೆ ಕೂಗುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಕೇರಳದ ವಯನಾಡಿನಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಂತಹ ಯಾವುದೇ ಘಟನೆ ನಿಜವಾಗಿಯೂ ನಡೆದಿದ್ದರೆ, ಮಾಧ್ಯಮಗಳಲ್ಲಿ ಅದು ಸುದ್ದಿಯಾಗುತ್ತಿತ್ತು. ಆದರೆ, ಅಂತಹ ಯಾವುದೇ ವರದಿಗಳು ನಮಗೆ ಕಂಡು ಬಂದಿಲ್ಲ.

ಅಲ್ಲದೆ, ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ದೃಶ್ಯಗಳು ಕೇರಳಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ನಡೆದಿರುವುದು ಪಾಕಿಸ್ತಾನದ ಕರಾಚಿಯಲ್ಲಿ ಎಂಬ ಅನೇಕ ಸುಳಿವುಗಳನ್ನು ವಿಡಿಯೋದಲ್ಲೇ ನೋಡಬಹುದು.

ಇದು ಪಾಕಿಸ್ತಾನದ ಕರಾಚಿಗೆ ಸಂಬಂಧಿಸಿದ ವಿಡಿಯೋ ಎಂದು ‘ಇಂಡಿಯಾ ಟುಡೇ‘ ವರದಿ ಮಾಡಿದೆ.  ವಿಡಿಯೋದಲ್ಲಿ ಕಾಣುವ ವಾಹನವೊಂದರ ಮೇಲೆ ಬರೆಯಲಾಗಿರುವ ‘ಹುನಾರ್ ಫೌಂಡೇಷನ್’ ಎಂಬ ಹೆಸರು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಗೆ ಸಂಬಂಧಿಸಿದ್ದಾಗಿದೆ. ವಿಡಿಯೋದಲ್ಲಿ ಕಾಣಿಸುವ ಆಟೋ ರಿಕ್ಷಾಗಳು ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುತ್ತಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ ಎಂದು ಇಂಡಿಯಾ ಟುಡೇ ಹೇಳಿದೆ.

ವೈರಲ್ ವಿಡಿಯೋದಲ್ಲಿ 3 ನಿಮಿಷ 38 ಸೆಕೆಂಡ್ ಅವಧಿಯಲ್ಲಿ ‘ದಿ ಹುನಾರ್ ಫೌಂಡೇಶನ್’ ಎಂದು ಬರೆದಿರುವ ಬಿಳಿ ವ್ಯಾನ್ ಹಾದು ಹೋಗುವುದನ್ನು ಕಾಣಬಹುದು. ದಿ ಹುನಾರ್ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಮಾಹಿತಿಯ ಪ್ರಕಾರ, ಸಂಸ್ಥೆಯು ಕರಾಚಿಯಲ್ಲಿದೆ ಮತ್ತು ಇದು ಪಾಕಿಸ್ತಾನದ ಯುವಕರಿಗೆ ಕೌಶಲ್ಯ ಅಭಿವೃದ್ಧಿ, ತಾಂತ್ರಿಕ ತರಬೇತಿಯನ್ನು ನೀಡುವ ಸಂಸ್ಥೆಯಾಗಿದೆ. ಇದು ಕರಾಚಿಯ ದೆಹಲಿ ಮರ್ಕೆಂಟೈಲ್ ಸೊಸೈಟಿ ಪ್ರದೇಶದಲ್ಲಿ ತನ್ನ ಮೊದಲ ಬ್ಯಾಚ್ ಅನ್ನು ಪ್ರಾರಂಭಿಸಿತು. ಕರಾಚಿ ಮೂಲದ ಪ್ರಿಂಟಿಂಗ್ ಅಂಗಡಿಯ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ವಾಹನಗಳ ಚಿತ್ರಗಳನ್ನು ಕಾಣಬಹುದು.

ವಿಡಿಯೋದಲ್ಲಿ 3 ನಿಮಿಷ 44 ಸೆಕೆಂಡ್‌ಗಳಲ್ಲಿ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಕಾರನ್ನು ಗುರುತಿಸಬಹುದು. ಅದರ ಮೇಲೆ ‘BFK-625’ಎಂದು ಬರೆಯಲಾಗಿದೆ. ಗೂಗಲ್ ಮೂಲಕ ಸರ್ಚ್ ಮಾಡಿದಾಗ ಅಂತಹ ನಂಬರ್ ಪ್ಲೇಟ್‌ಗಳು ಪಾಕಿಸ್ತಾನದ ಸಿಂಧ್ ಪ್ರಾಂತ್ಯಕ್ಕೆ ಸಂಬಂಧಿಸಿವೆ ಎಂದು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ ಧ್ವಜವನ್ನು ಅವಮಾನಿಸುವ ಪಾಕಿಸ್ತಾನದ ದೃಶ್ಯಗಳನ್ನು ಕೇರಳದ ವಯನಾಡ್‌ನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಾಣಿಸುವ ರಿಕ್ಷಾಗಳು ಕೇರಳ ಅಥವಾ ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುವುದಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...