Homeಫ್ಯಾಕ್ಟ್‌ಚೆಕ್FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

- Advertisement -
- Advertisement -

ರಸ್ತೆಯ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ರಚಿಸಿ ಅದರ ಮೇಲೆ ವಾಹನ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

“ವಾಹನ ಸಂಖ್ಯೆ. ಕೆಎಲ್‌-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ” ಎಂಬ ಬರಹದೊಂದಿಗೆ ವಿಡಿಯೋವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ ಎಂದೂ ಹೇಳಿಕೊಂಡಿದ್ದಾರೆ.

ಒಟ್ಟು 4 ನಿಮಿಷ 50 ಸೆಕೆಂಡ್ ಅವಧಿಯ ವೈರಲ್ ವಿಡಿಯೋದಲ್ಲಿ, 3 ನಿಮಿಷ 8 ಸೆಕೆಂಡ್‌ನಿಂದ ಕೆಲವರು ಕೈಯಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಘೋಷಣೆ ಕೂಗುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಕೇರಳದ ವಯನಾಡಿನಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಂತಹ ಯಾವುದೇ ಘಟನೆ ನಿಜವಾಗಿಯೂ ನಡೆದಿದ್ದರೆ, ಮಾಧ್ಯಮಗಳಲ್ಲಿ ಅದು ಸುದ್ದಿಯಾಗುತ್ತಿತ್ತು. ಆದರೆ, ಅಂತಹ ಯಾವುದೇ ವರದಿಗಳು ನಮಗೆ ಕಂಡು ಬಂದಿಲ್ಲ.

ಅಲ್ಲದೆ, ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ದೃಶ್ಯಗಳು ಕೇರಳಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ನಡೆದಿರುವುದು ಪಾಕಿಸ್ತಾನದ ಕರಾಚಿಯಲ್ಲಿ ಎಂಬ ಅನೇಕ ಸುಳಿವುಗಳನ್ನು ವಿಡಿಯೋದಲ್ಲೇ ನೋಡಬಹುದು.

ಇದು ಪಾಕಿಸ್ತಾನದ ಕರಾಚಿಗೆ ಸಂಬಂಧಿಸಿದ ವಿಡಿಯೋ ಎಂದು ‘ಇಂಡಿಯಾ ಟುಡೇ‘ ವರದಿ ಮಾಡಿದೆ.  ವಿಡಿಯೋದಲ್ಲಿ ಕಾಣುವ ವಾಹನವೊಂದರ ಮೇಲೆ ಬರೆಯಲಾಗಿರುವ ‘ಹುನಾರ್ ಫೌಂಡೇಷನ್’ ಎಂಬ ಹೆಸರು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಗೆ ಸಂಬಂಧಿಸಿದ್ದಾಗಿದೆ. ವಿಡಿಯೋದಲ್ಲಿ ಕಾಣಿಸುವ ಆಟೋ ರಿಕ್ಷಾಗಳು ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುತ್ತಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ ಎಂದು ಇಂಡಿಯಾ ಟುಡೇ ಹೇಳಿದೆ.

ವೈರಲ್ ವಿಡಿಯೋದಲ್ಲಿ 3 ನಿಮಿಷ 38 ಸೆಕೆಂಡ್ ಅವಧಿಯಲ್ಲಿ ‘ದಿ ಹುನಾರ್ ಫೌಂಡೇಶನ್’ ಎಂದು ಬರೆದಿರುವ ಬಿಳಿ ವ್ಯಾನ್ ಹಾದು ಹೋಗುವುದನ್ನು ಕಾಣಬಹುದು. ದಿ ಹುನಾರ್ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಮಾಹಿತಿಯ ಪ್ರಕಾರ, ಸಂಸ್ಥೆಯು ಕರಾಚಿಯಲ್ಲಿದೆ ಮತ್ತು ಇದು ಪಾಕಿಸ್ತಾನದ ಯುವಕರಿಗೆ ಕೌಶಲ್ಯ ಅಭಿವೃದ್ಧಿ, ತಾಂತ್ರಿಕ ತರಬೇತಿಯನ್ನು ನೀಡುವ ಸಂಸ್ಥೆಯಾಗಿದೆ. ಇದು ಕರಾಚಿಯ ದೆಹಲಿ ಮರ್ಕೆಂಟೈಲ್ ಸೊಸೈಟಿ ಪ್ರದೇಶದಲ್ಲಿ ತನ್ನ ಮೊದಲ ಬ್ಯಾಚ್ ಅನ್ನು ಪ್ರಾರಂಭಿಸಿತು. ಕರಾಚಿ ಮೂಲದ ಪ್ರಿಂಟಿಂಗ್ ಅಂಗಡಿಯ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ವಾಹನಗಳ ಚಿತ್ರಗಳನ್ನು ಕಾಣಬಹುದು.

ವಿಡಿಯೋದಲ್ಲಿ 3 ನಿಮಿಷ 44 ಸೆಕೆಂಡ್‌ಗಳಲ್ಲಿ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಕಾರನ್ನು ಗುರುತಿಸಬಹುದು. ಅದರ ಮೇಲೆ ‘BFK-625’ಎಂದು ಬರೆಯಲಾಗಿದೆ. ಗೂಗಲ್ ಮೂಲಕ ಸರ್ಚ್ ಮಾಡಿದಾಗ ಅಂತಹ ನಂಬರ್ ಪ್ಲೇಟ್‌ಗಳು ಪಾಕಿಸ್ತಾನದ ಸಿಂಧ್ ಪ್ರಾಂತ್ಯಕ್ಕೆ ಸಂಬಂಧಿಸಿವೆ ಎಂದು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ ಧ್ವಜವನ್ನು ಅವಮಾನಿಸುವ ಪಾಕಿಸ್ತಾನದ ದೃಶ್ಯಗಳನ್ನು ಕೇರಳದ ವಯನಾಡ್‌ನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಾಣಿಸುವ ರಿಕ್ಷಾಗಳು ಕೇರಳ ಅಥವಾ ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುವುದಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...