Homeಫ್ಯಾಕ್ಟ್‌ಚೆಕ್FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

- Advertisement -
- Advertisement -

ರಸ್ತೆಯ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ರಚಿಸಿ ಅದರ ಮೇಲೆ ವಾಹನ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

“ವಾಹನ ಸಂಖ್ಯೆ. ಕೆಎಲ್‌-12 ವಯನಾಡ್ ಕೇರಳದಿಂದ ಈ ವೀಡಿಯೊವನ್ನು ವೀಕ್ಷಿಸಿ” ಎಂಬ ಬರಹದೊಂದಿಗೆ ವಿಡಿಯೋವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ ಎಂದೂ ಹೇಳಿಕೊಂಡಿದ್ದಾರೆ.

ಒಟ್ಟು 4 ನಿಮಿಷ 50 ಸೆಕೆಂಡ್ ಅವಧಿಯ ವೈರಲ್ ವಿಡಿಯೋದಲ್ಲಿ, 3 ನಿಮಿಷ 8 ಸೆಕೆಂಡ್‌ನಿಂದ ಕೆಲವರು ಕೈಯಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಘೋಷಣೆ ಕೂಗುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಕೇರಳದ ವಯನಾಡಿನಲ್ಲಿ ಭಾರತದ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಂತಹ ಯಾವುದೇ ಘಟನೆ ನಿಜವಾಗಿಯೂ ನಡೆದಿದ್ದರೆ, ಮಾಧ್ಯಮಗಳಲ್ಲಿ ಅದು ಸುದ್ದಿಯಾಗುತ್ತಿತ್ತು. ಆದರೆ, ಅಂತಹ ಯಾವುದೇ ವರದಿಗಳು ನಮಗೆ ಕಂಡು ಬಂದಿಲ್ಲ.

ಅಲ್ಲದೆ, ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ದೃಶ್ಯಗಳು ಕೇರಳಕ್ಕೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ. ಈ ಘಟನೆ ನಡೆದಿರುವುದು ಪಾಕಿಸ್ತಾನದ ಕರಾಚಿಯಲ್ಲಿ ಎಂಬ ಅನೇಕ ಸುಳಿವುಗಳನ್ನು ವಿಡಿಯೋದಲ್ಲೇ ನೋಡಬಹುದು.

ಇದು ಪಾಕಿಸ್ತಾನದ ಕರಾಚಿಗೆ ಸಂಬಂಧಿಸಿದ ವಿಡಿಯೋ ಎಂದು ‘ಇಂಡಿಯಾ ಟುಡೇ‘ ವರದಿ ಮಾಡಿದೆ.  ವಿಡಿಯೋದಲ್ಲಿ ಕಾಣುವ ವಾಹನವೊಂದರ ಮೇಲೆ ಬರೆಯಲಾಗಿರುವ ‘ಹುನಾರ್ ಫೌಂಡೇಷನ್’ ಎಂಬ ಹೆಸರು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಗೆ ಸಂಬಂಧಿಸಿದ್ದಾಗಿದೆ. ವಿಡಿಯೋದಲ್ಲಿ ಕಾಣಿಸುವ ಆಟೋ ರಿಕ್ಷಾಗಳು ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುತ್ತಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ ಎಂದು ಇಂಡಿಯಾ ಟುಡೇ ಹೇಳಿದೆ.

ವೈರಲ್ ವಿಡಿಯೋದಲ್ಲಿ 3 ನಿಮಿಷ 38 ಸೆಕೆಂಡ್ ಅವಧಿಯಲ್ಲಿ ‘ದಿ ಹುನಾರ್ ಫೌಂಡೇಶನ್’ ಎಂದು ಬರೆದಿರುವ ಬಿಳಿ ವ್ಯಾನ್ ಹಾದು ಹೋಗುವುದನ್ನು ಕಾಣಬಹುದು. ದಿ ಹುನಾರ್ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಮಾಹಿತಿಯ ಪ್ರಕಾರ, ಸಂಸ್ಥೆಯು ಕರಾಚಿಯಲ್ಲಿದೆ ಮತ್ತು ಇದು ಪಾಕಿಸ್ತಾನದ ಯುವಕರಿಗೆ ಕೌಶಲ್ಯ ಅಭಿವೃದ್ಧಿ, ತಾಂತ್ರಿಕ ತರಬೇತಿಯನ್ನು ನೀಡುವ ಸಂಸ್ಥೆಯಾಗಿದೆ. ಇದು ಕರಾಚಿಯ ದೆಹಲಿ ಮರ್ಕೆಂಟೈಲ್ ಸೊಸೈಟಿ ಪ್ರದೇಶದಲ್ಲಿ ತನ್ನ ಮೊದಲ ಬ್ಯಾಚ್ ಅನ್ನು ಪ್ರಾರಂಭಿಸಿತು. ಕರಾಚಿ ಮೂಲದ ಪ್ರಿಂಟಿಂಗ್ ಅಂಗಡಿಯ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ವಾಹನಗಳ ಚಿತ್ರಗಳನ್ನು ಕಾಣಬಹುದು.

ವಿಡಿಯೋದಲ್ಲಿ 3 ನಿಮಿಷ 44 ಸೆಕೆಂಡ್‌ಗಳಲ್ಲಿ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಕಾರನ್ನು ಗುರುತಿಸಬಹುದು. ಅದರ ಮೇಲೆ ‘BFK-625’ಎಂದು ಬರೆಯಲಾಗಿದೆ. ಗೂಗಲ್ ಮೂಲಕ ಸರ್ಚ್ ಮಾಡಿದಾಗ ಅಂತಹ ನಂಬರ್ ಪ್ಲೇಟ್‌ಗಳು ಪಾಕಿಸ್ತಾನದ ಸಿಂಧ್ ಪ್ರಾಂತ್ಯಕ್ಕೆ ಸಂಬಂಧಿಸಿವೆ ಎಂದು ಮಾಹಿತಿ ಲಭ್ಯವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ ಧ್ವಜವನ್ನು ಅವಮಾನಿಸುವ ಪಾಕಿಸ್ತಾನದ ದೃಶ್ಯಗಳನ್ನು ಕೇರಳದ ವಯನಾಡ್‌ನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಾಣಿಸುವ ರಿಕ್ಷಾಗಳು ಕೇರಳ ಅಥವಾ ತಮಿಳುನಾಡಿನ ರಿಕ್ಷಾಗಳಿಗೆ ಹೋಲಿಕೆಯಾಗುವುದಿಲ್ಲ. ವಿಡಿಯೋದಲ್ಲಿ ಕಾಣಿಸುವ ಬೀದಿ ಬದಿಯ ಅಂಗಡಿಗಳ ಕೆಲವು ಹೆಸರುಗಳನ್ನು ಪರಿಶೀಲಿಸಿದಾಗ, ಅವು ಕರಾಚಿಯ ತಾರಿಕ್ ರಸ್ತೆಯಲ್ಲಿರುವ ಅಂಗಡಿಗಳು ಎಂಬುವುದು ದೃಢಪಟ್ಟಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...