Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

- Advertisement -
- Advertisement -

ರಸ್ತೆಯೊಂದರಲ್ಲಿ ಸಾವಿರಾರು ಜನರು ಮತ್ತು ವಾಹನಗಳು ತೆರಳುತ್ತಿರುವ ವಿಡಿಯೋವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲ ಹರಿದಾಡುತ್ತಿದೆ.

ಕೆಲವರು ಅದನ್ನು ಮುಂಬೈನಲ್ಲಿ ನಡೆದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಸಮಾವೇಶ ಎಂದು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಪ್ರವಾದಿ ವಿರುದ್ದ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಮರು ಮುಂಬೈನಲ್ಲಿ ಒಟ್ಟು ಸೇರಿ ಪ್ರತಿಭಟಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂದಿದ್ದಾರೆ.

ಶ್ರವಣ್ ಬಿಷ್ಣೋಯ್ (@SharwanKumarBi7) ಎಂಬ ಎಕ್ಸ್ ಬಳಕೆದಾರ ಸೆಪ್ಟೆಂಬರ್ 23ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ. ಇದು ಇರಾಕ್, ಇರಾನ್ ಅಥವಾ ಅಫ್ಘಾನಿಸ್ತಾನವೂ ಅಲ್ಲ. ಇದು ಮುಂಬೈ, ನಾವು ಹಿಂದೂಗಳು ನಿದ್ದೆಯಲ್ಲಿರುವಾಗ ಮುಸ್ಲಿಮರು ತಮ್ಮ ಶಕ್ತಿ ಪ್ರದರ್ಶಿಸಲು ಬೀದಿಗೆ ಬಂದಿದ್ದಾರೆ. ಇದು ಚಲೋ ಮುಂಬೈನ ಬೆಂಗಾವಲು ಪಡೆ. ಎಐಎಂಐಎಂನ ಕರೆಗೆ ಇಡೀ ಭಾರತೀಯ ಮುಸ್ಲಿಮರು ಮುಂಬೈಗೆ ಬಂದಿದ್ದಾರೆ” ಎಂದು ಬರೆದುಕೊಂಡಿದ್ದರು.

ಹಾಗೆಯೇ ಫೇಸ್‌ಬುಕ್ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡು “ಸಾಧುವಿನ ವೇಷದಲ್ಲಿದ್ದ ಹಿಂದುತ್ವ ಉಗ್ರನೊಬ್ಬ ನಮ್ಮ ಪ್ರವಾದಿ (ಸ)ಬಗ್ಗೆ ಕೀಳಾಗಿ ಮಾತನಾಡಿದ, ಪ್ರತಿಭಟಿಸುತ್ತಾ ಪೈಗಂಬ‌ರ್ ಪ್ರೇಮಿಗಳು ಮುಂಬೈ ಎಡೆಗೆ ದೌಡಾಯಿಸಿ ಬಂದಿರುವ ದೃಶ್ಯವಿದು” ಎಂದು ಬರೆದುಕೊಂಡಿದ್ದರು.

ಸಂತ ರಾಮಗಿರಿ ಮತ್ತು ಬಿಜೆಪಿ ಶಾಸಕ ನಿತೀಶ್ ರಾಣೆ ಅವರ ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷದ ನಾಯಕ ಇಮ್ತಿಯಾಝ್ ಜಲೀಲ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆಸಿದ ಐತಿಹಾಸಿಕ ರ್‍ಯಾಲಿ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ಮುಂಬೈನಲ್ಲಿ ಅಂತಹದ್ದೊಂದು ರ್‍ಯಾಲಿ ನಡೆದಿರುವುದು, ಅದರಲ್ಲಿ ಭಾರೀ ಸಂಖ್ಯೆಯ ಜನರು ಪಾಲ್ಗೊಂಡಿರುವುದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ಸೆಪ್ಟೆಂಬರ್ 12,2024ರಂದು ನೈಜೀರಿಯನ್ ಕ್ಯಾಥೋಲಿಕ್ಸ್ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ “ಶೇ.100ರಷ್ಟು ಕ್ಯಾಥೋಲಿಕ್ ಕ್ರೈಸ್ತರು ಇರುವ ಟಿಮೊಲೆಸ್ಟೆ ದೇಶದಲ್ಲಿ ಪೋಪ್ ಫ್ರಾನ್ಸಿನ್‌ ಅವರಿಗೆ ಐತಿಹಾಸಿಕ ಸ್ವಾಗತ ಕೋರಿಲಾಯಿತು”ಎಂದು ಬರೆದುಕೊಂಡಿರುವುದು ಕಂಡು ಬಂದಿದೆ.

ಸೆಪ್ಟೆಂಬರ್ 16,2024ರಂದು ಮೊರಾಕೊ ನ್ಯೂಸ್ (@Moroccolitik)ಎಂಬ ಎಕ್ಸ್‌ ಖಾತೆಯಲ್ಲೂ ವೈರಲ್ ವಿಡಿಯೋವನ್ನು ಪೋಸ್ಟ್‌ ಮಾಡಿ ಪೋಪ್ ಫ್ರಾನ್ಸಿಸ್ ಟಿಮೋರ್-ಲೆಸ್ಟೆಗೆ ಭೇಟಿ ನೀಡಿರುವುದು ಎಂದು ಬರೆಯಲಾಗಿತ್ತು.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಸೆಪ್ಟೆಂಬರ್ 10, 2024ರಂದು ಅಸೋಸಿಯೇಟೆಡ್ ಪ್ರೆಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲೂ ಪೋಪ್ ಫ್ರಾನ್ಸಿಸ್ ಟಿಮೋರ್-ಲೆಸ್ಟೆನಲ್ಲಿ ಹಮ್ಮಿಕೊಂಡಿದ್ದ ಪ್ರಾರ್ಥನೆಯಲ್ಲಿ ಸುಮಾರು 60 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ವಿವರಿಸಲಾಗಿದೆ.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಮುಂಬೈನಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲ. ಅದು ಕ್ಯಾಥೋಲಿಕ್ ದೇಶ ಟಿಮೋರ್ ಲೆಸ್ಟ್‌ಗೆ ಕ್ರೈಸ್ತ ಧರ್ಮದ ಗುರು ಪೋಪ್ ಫ್ರಾನ್ಸಿಸ್ ಭೇಟಿ ನೀಡಿದ್ದಾಗ ಅಲ್ಲಿನ ಜನರು ಸ್ವಾಗತಿಸಿದ ದೃಶ್ಯವಾಗಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...