Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

FACT CHECK : ಮುಂಬೈನಲ್ಲಿ ಮುಸ್ಲಿಮರಿಂದ ಶಕ್ತಿ ಪ್ರದರ್ಶನ ಎಂದು ಸಂಬಂಧವಿಲ್ಲದ ವಿಡಿಯೋ

- Advertisement -
- Advertisement -

ರಸ್ತೆಯೊಂದರಲ್ಲಿ ಸಾವಿರಾರು ಜನರು ಮತ್ತು ವಾಹನಗಳು ತೆರಳುತ್ತಿರುವ ವಿಡಿಯೋವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲ ಹರಿದಾಡುತ್ತಿದೆ.

ಕೆಲವರು ಅದನ್ನು ಮುಂಬೈನಲ್ಲಿ ನಡೆದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಸಮಾವೇಶ ಎಂದು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಪ್ರವಾದಿ ವಿರುದ್ದ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಮರು ಮುಂಬೈನಲ್ಲಿ ಒಟ್ಟು ಸೇರಿ ಪ್ರತಿಭಟಿಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂದಿದ್ದಾರೆ.

ಶ್ರವಣ್ ಬಿಷ್ಣೋಯ್ (@SharwanKumarBi7) ಎಂಬ ಎಕ್ಸ್ ಬಳಕೆದಾರ ಸೆಪ್ಟೆಂಬರ್ 23ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ. ಇದು ಇರಾಕ್, ಇರಾನ್ ಅಥವಾ ಅಫ್ಘಾನಿಸ್ತಾನವೂ ಅಲ್ಲ. ಇದು ಮುಂಬೈ, ನಾವು ಹಿಂದೂಗಳು ನಿದ್ದೆಯಲ್ಲಿರುವಾಗ ಮುಸ್ಲಿಮರು ತಮ್ಮ ಶಕ್ತಿ ಪ್ರದರ್ಶಿಸಲು ಬೀದಿಗೆ ಬಂದಿದ್ದಾರೆ. ಇದು ಚಲೋ ಮುಂಬೈನ ಬೆಂಗಾವಲು ಪಡೆ. ಎಐಎಂಐಎಂನ ಕರೆಗೆ ಇಡೀ ಭಾರತೀಯ ಮುಸ್ಲಿಮರು ಮುಂಬೈಗೆ ಬಂದಿದ್ದಾರೆ” ಎಂದು ಬರೆದುಕೊಂಡಿದ್ದರು.

ಹಾಗೆಯೇ ಫೇಸ್‌ಬುಕ್ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡು “ಸಾಧುವಿನ ವೇಷದಲ್ಲಿದ್ದ ಹಿಂದುತ್ವ ಉಗ್ರನೊಬ್ಬ ನಮ್ಮ ಪ್ರವಾದಿ (ಸ)ಬಗ್ಗೆ ಕೀಳಾಗಿ ಮಾತನಾಡಿದ, ಪ್ರತಿಭಟಿಸುತ್ತಾ ಪೈಗಂಬ‌ರ್ ಪ್ರೇಮಿಗಳು ಮುಂಬೈ ಎಡೆಗೆ ದೌಡಾಯಿಸಿ ಬಂದಿರುವ ದೃಶ್ಯವಿದು” ಎಂದು ಬರೆದುಕೊಂಡಿದ್ದರು.

ಸಂತ ರಾಮಗಿರಿ ಮತ್ತು ಬಿಜೆಪಿ ಶಾಸಕ ನಿತೀಶ್ ರಾಣೆ ಅವರ ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷದ ನಾಯಕ ಇಮ್ತಿಯಾಝ್ ಜಲೀಲ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆಸಿದ ಐತಿಹಾಸಿಕ ರ್‍ಯಾಲಿ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ಮುಂಬೈನಲ್ಲಿ ಅಂತಹದ್ದೊಂದು ರ್‍ಯಾಲಿ ನಡೆದಿರುವುದು, ಅದರಲ್ಲಿ ಭಾರೀ ಸಂಖ್ಯೆಯ ಜನರು ಪಾಲ್ಗೊಂಡಿರುವುದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ಸೆಪ್ಟೆಂಬರ್ 12,2024ರಂದು ನೈಜೀರಿಯನ್ ಕ್ಯಾಥೋಲಿಕ್ಸ್ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿ “ಶೇ.100ರಷ್ಟು ಕ್ಯಾಥೋಲಿಕ್ ಕ್ರೈಸ್ತರು ಇರುವ ಟಿಮೊಲೆಸ್ಟೆ ದೇಶದಲ್ಲಿ ಪೋಪ್ ಫ್ರಾನ್ಸಿನ್‌ ಅವರಿಗೆ ಐತಿಹಾಸಿಕ ಸ್ವಾಗತ ಕೋರಿಲಾಯಿತು”ಎಂದು ಬರೆದುಕೊಂಡಿರುವುದು ಕಂಡು ಬಂದಿದೆ.

ಸೆಪ್ಟೆಂಬರ್ 16,2024ರಂದು ಮೊರಾಕೊ ನ್ಯೂಸ್ (@Moroccolitik)ಎಂಬ ಎಕ್ಸ್‌ ಖಾತೆಯಲ್ಲೂ ವೈರಲ್ ವಿಡಿಯೋವನ್ನು ಪೋಸ್ಟ್‌ ಮಾಡಿ ಪೋಪ್ ಫ್ರಾನ್ಸಿಸ್ ಟಿಮೋರ್-ಲೆಸ್ಟೆಗೆ ಭೇಟಿ ನೀಡಿರುವುದು ಎಂದು ಬರೆಯಲಾಗಿತ್ತು.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಸೆಪ್ಟೆಂಬರ್ 10, 2024ರಂದು ಅಸೋಸಿಯೇಟೆಡ್ ಪ್ರೆಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲೂ ಪೋಪ್ ಫ್ರಾನ್ಸಿಸ್ ಟಿಮೋರ್-ಲೆಸ್ಟೆನಲ್ಲಿ ಹಮ್ಮಿಕೊಂಡಿದ್ದ ಪ್ರಾರ್ಥನೆಯಲ್ಲಿ ಸುಮಾರು 60 ಸಾವಿರ ಜನರು ಪಾಲ್ಗೊಂಡಿದ್ದರು ಎಂದು ವಿವರಿಸಲಾಗಿದೆ.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಮುಂಬೈನಲ್ಲಿ ನಡೆದ ಯಾವುದೇ ಕಾರ್ಯಕ್ರಮದಲ್ಲ. ಅದು ಕ್ಯಾಥೋಲಿಕ್ ದೇಶ ಟಿಮೋರ್ ಲೆಸ್ಟ್‌ಗೆ ಕ್ರೈಸ್ತ ಧರ್ಮದ ಗುರು ಪೋಪ್ ಫ್ರಾನ್ಸಿಸ್ ಭೇಟಿ ನೀಡಿದ್ದಾಗ ಅಲ್ಲಿನ ಜನರು ಸ್ವಾಗತಿಸಿದ ದೃಶ್ಯವಾಗಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...