Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ...

FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ, ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬಳಿಕ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂದು ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

“ಹಿಂದೂ ಮಹಿಳೆಯರ ಮೇಲೆ ಮುಸ್ಲಿಮರು ಅತ್ಯಾಚಾರ ಎಸಗಿದ್ದಾರೆ. ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಿದ್ದಾರೆ. ಹಿಂದೂ ವೃದ್ದರೊಬ್ಬರನ್ನು ಕೊಂದು ನೇತು ಹಾಕಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿದ್ದಾರೆ ಇತ್ಯಾದಿ ವಿಡಿಯೋ, ಫೋಟೋಗಳು ಕಳೆದೆರಡು ದಿನಗಳಿಂದ ವ್ಯಾಪಕವಾಗಿ ವೈರಲ್ ಆಗಿವೆ.

ಇದೀಗ ಹೊಸದಾಗಿ ಯುವತಿಯೊಬ್ಬಳ ಕೈಕಾಲುಗಳನ್ನು ಕಟ್ಟಿ, ಆಕೆಯ ಬಾಯಿಗೆ ಗಮ್‌ಟೇಪ್ ಹಾಕಿರುವ ವಿಡಿಯೋ ಕಾಣಿಸಿಕೊಂಡಿದೆ.

ಬಲಪಂಥೀಯ ಸುದ್ದಿ ಸಂಸ್ಥೆ “ದಿ ಜೈಪುರ್ ಡೈಲಾಗ್ಸ್” ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ! ಅವರನ್ನು ಅತ್ಯಾಚಾರವೆಸಗಲಾಗಿದೆ ಮತ್ತು ಕೊಲ್ಲಲಾಗಿದೆ. ಹಿಂದೂಗಳನ್ನು ಗುರಿಯಾಗಿಸಿ ಬಾಂಗ್ಲಾದೇಶದಲ್ಲಿ ಹತ್ಯಾಕಾಂಡ ನಡೆಯುತ್ತಿದೆ” ಎಂದು ಬರೆದುಕೊಂಡಿದೆ.

ಉತ್ತರ ಕರ್ನಾಟಕ ಲೆಜೆಂಡ್ಸ್‘ ಎಂಬ ಇನ್‌ಸ್ಟಾಗ್ರಾಂ ಪೇಜ್‌ ಒಂದರಲ್ಲೂ ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದಲ್ಲಿ ಶಾಂತಿ ದೂತರಿಂದ ಹಿಂದೂ ಮಹಿಳೆಯರ ಮೇಲೆ ದಾಳಿ ಮತ್ತು ಹಿಂದೂ ದೇವಾಲಯಗಳನ್ನು ಸುಟ್ಟು ಹಾಕಿದ್ದಾರೆ. All Eyes on Rafa ಎಂದು ಹಾಕಿದವರು ಯಾರೂ ಬಾಂಗ್ಲಾದ ಹಿಂದೂಗಳ ಮೇಲಿನ ದಾಳಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ? “ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಾಂಗ್ಲಾದೇಶದ ಜಗನ್ನಾಥ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪ್ರತಿಭಟನೆಯೊಂದರ ದೃಶ್ಯ ಎಂದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ ಜುಲೈ 26ರಂದು ‘Jnu Short Stories’ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ “ವಿಡಿಯೋದಲ್ಲಿರುವುದು ಜಗನ್ನಾಥ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿಯಾಗಿದ್ದು, ಆಕೆ ಆವಂತಿಕ ಎಂಬ ಮತ್ತೋರ್ವ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ವಿಶಿಷ್ಟವಾಗಿ ಪ್ರತಿಭಟಿಸಿದ ದೃಶ್ಯ ಇದಾಗಿದೆ. ಈಗ ದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆಯುತ್ತಿರುವುದರಿಂದ, ಈಕೆ ಛಾತ್ರಾ ಲೀಗ್ ನಾಯಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ”

“ಸುಳ್ಳು ಸುದ್ದಿಯಿಂದ ಆಕೆಗೆ ಬಹಳಷ್ಟು ನೋವಾಗಿದೆ. ಇದು ಆಕೆಗೆ ಆಘಾತಕ್ಕೆ ಕಾರಣವಾಗಬಹುದು. ಈ ಪೋಸ್ಟ್ ಆವಂತಿಕಾಳ ಆತ್ಮಹತ್ಯೆ ಮತ್ತು ಅದರ ಸಂಬಂಧ ವಿದ್ಯಾರ್ಥಿನಿ ನಡೆಸಿದ ಪ್ರತಿಭಟನೆಯ ಬಗ್ಗೆ ಗಮನ ಸೆಳೆಯುತ್ತದೆ. ವದಂತಿಗಳನ್ನು ಹರಡುವುದನ್ನು ನಿಲ್ಲಿಸಲು ಜನರಲ್ಲಿ ಕೋರುತ್ತೇವೆ” ಎಂದು ವಿವರಿಸಲಾಗಿದೆ.

ಈ ಪೋಸ್ಟ್‌ ಆಧರಿಸಿ ನಾವು ಆವಂತಿಕಾ ಎಂಬ ವಿದ್ಯಾರ್ಥಿನಿಯ ಆತ್ಮಹತ್ಯೆ ಮತ್ತು ಪ್ರತಿಭಟನೆಯ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬೆಂಗಾಳಿ ಸುದ್ದಿ ವೆಬ್‌ಸೈಟ್ ಡೈಲಿ ಇತ್ತೆಫಾಕ್ ಮಾರ್ಚ್ 17ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಆ ವರದಿಯಲ್ಲಿ ” ವಿದ್ಯಾರ್ಥಿನಿ ಫೈರೂಝ್ ಸದಾಫ್ ಆವಂತಿಕಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಆಗ್ರಹಿಸಿ ಜಗನ್ನಾಥ ವಿವಿಯ ವಿದ್ಯಾರ್ಥಿಗಳು ಪಂಜಿನ ಮೆರವಣಿಗೆ ನಡೆಸಿದರು. ಮೊಂಬತ್ತಿ ಹೊತ್ತಿಸಿ, ಬೀದಿ ನಾಟಕ ಮಾಡಿ ಪ್ರತಿಭಟಿಸಿದರು” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಬಾಂಗ್ಲಾದೇಶದ ಜಗನ್ನಾಥ ವಿವಿಯ ವಿದ್ಯಾರ್ಥಿನಿಯ ಪ್ರತಿಭಟನೆಯದ್ದೇ ಹೊರತು, ಹಿಂದೂ ಮಹಿಳೆಯರ ಮೇಲಿನ ದಾಳಿಯದ್ದಲ್ಲ. ಜಗನ್ನಾಥ ವಿವಿಯ ಆವಂತಿಕ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯೊಬ್ಬಳು ಕೈ ಕಾಲಿಗೆ ಹಗ್ಗಕಟ್ಟಿ, ಬಾಯಿಗೆ ಗಮ್‌ಟೇಪ್ ಹಾಕಿ ವಿಶಿಷ್ಟವಾಗಿ ಪ್ರತಿಭಟಿಸಿದ್ದಾಳೆ. ಅದನ್ನು ಹಿಂದೂ ಮಹಿಳೆಯರ ಮೇಲೆ ದಾಳಿ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ, ಈ ವಿಡಿಯೋ ಬಾಂಗ್ಲಾದ ಇತ್ತೀಚಿನ ಸರ್ಕಾರದ ವಿರುದ್ದದ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...