Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ...

FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ, ಅಲ್ಲಿನ ಪ್ರಧಾನಿ ಶೇಖ್ ಹಸೀನಾ ಪಲಾಯನ ಮಾಡಿದ ಬಳಿಕ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂದು ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

“ಹಿಂದೂ ಮಹಿಳೆಯರ ಮೇಲೆ ಮುಸ್ಲಿಮರು ಅತ್ಯಾಚಾರ ಎಸಗಿದ್ದಾರೆ. ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಿದ್ದಾರೆ. ಹಿಂದೂ ವೃದ್ದರೊಬ್ಬರನ್ನು ಕೊಂದು ನೇತು ಹಾಕಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿದ್ದಾರೆ ಇತ್ಯಾದಿ ವಿಡಿಯೋ, ಫೋಟೋಗಳು ಕಳೆದೆರಡು ದಿನಗಳಿಂದ ವ್ಯಾಪಕವಾಗಿ ವೈರಲ್ ಆಗಿವೆ.

ಇದೀಗ ಹೊಸದಾಗಿ ಯುವತಿಯೊಬ್ಬಳ ಕೈಕಾಲುಗಳನ್ನು ಕಟ್ಟಿ, ಆಕೆಯ ಬಾಯಿಗೆ ಗಮ್‌ಟೇಪ್ ಹಾಕಿರುವ ವಿಡಿಯೋ ಕಾಣಿಸಿಕೊಂಡಿದೆ.

ಬಲಪಂಥೀಯ ಸುದ್ದಿ ಸಂಸ್ಥೆ “ದಿ ಜೈಪುರ್ ಡೈಲಾಗ್ಸ್” ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆ! ಅವರನ್ನು ಅತ್ಯಾಚಾರವೆಸಗಲಾಗಿದೆ ಮತ್ತು ಕೊಲ್ಲಲಾಗಿದೆ. ಹಿಂದೂಗಳನ್ನು ಗುರಿಯಾಗಿಸಿ ಬಾಂಗ್ಲಾದೇಶದಲ್ಲಿ ಹತ್ಯಾಕಾಂಡ ನಡೆಯುತ್ತಿದೆ” ಎಂದು ಬರೆದುಕೊಂಡಿದೆ.

ಉತ್ತರ ಕರ್ನಾಟಕ ಲೆಜೆಂಡ್ಸ್‘ ಎಂಬ ಇನ್‌ಸ್ಟಾಗ್ರಾಂ ಪೇಜ್‌ ಒಂದರಲ್ಲೂ ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದಲ್ಲಿ ಶಾಂತಿ ದೂತರಿಂದ ಹಿಂದೂ ಮಹಿಳೆಯರ ಮೇಲೆ ದಾಳಿ ಮತ್ತು ಹಿಂದೂ ದೇವಾಲಯಗಳನ್ನು ಸುಟ್ಟು ಹಾಕಿದ್ದಾರೆ. All Eyes on Rafa ಎಂದು ಹಾಕಿದವರು ಯಾರೂ ಬಾಂಗ್ಲಾದ ಹಿಂದೂಗಳ ಮೇಲಿನ ದಾಳಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ? “ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಾಂಗ್ಲಾದೇಶದ ಜಗನ್ನಾಥ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪ್ರತಿಭಟನೆಯೊಂದರ ದೃಶ್ಯ ಎಂದು ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ ಜುಲೈ 26ರಂದು ‘Jnu Short Stories’ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ “ವಿಡಿಯೋದಲ್ಲಿರುವುದು ಜಗನ್ನಾಥ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿಯಾಗಿದ್ದು, ಆಕೆ ಆವಂತಿಕ ಎಂಬ ಮತ್ತೋರ್ವ ವಿದ್ಯಾರ್ಥಿನಿಯ ಆತ್ಮಹತ್ಯೆ ಖಂಡಿಸಿ ವಿಶಿಷ್ಟವಾಗಿ ಪ್ರತಿಭಟಿಸಿದ ದೃಶ್ಯ ಇದಾಗಿದೆ. ಈಗ ದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆ ನಡೆಯುತ್ತಿರುವುದರಿಂದ, ಈಕೆ ಛಾತ್ರಾ ಲೀಗ್ ನಾಯಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ”

“ಸುಳ್ಳು ಸುದ್ದಿಯಿಂದ ಆಕೆಗೆ ಬಹಳಷ್ಟು ನೋವಾಗಿದೆ. ಇದು ಆಕೆಗೆ ಆಘಾತಕ್ಕೆ ಕಾರಣವಾಗಬಹುದು. ಈ ಪೋಸ್ಟ್ ಆವಂತಿಕಾಳ ಆತ್ಮಹತ್ಯೆ ಮತ್ತು ಅದರ ಸಂಬಂಧ ವಿದ್ಯಾರ್ಥಿನಿ ನಡೆಸಿದ ಪ್ರತಿಭಟನೆಯ ಬಗ್ಗೆ ಗಮನ ಸೆಳೆಯುತ್ತದೆ. ವದಂತಿಗಳನ್ನು ಹರಡುವುದನ್ನು ನಿಲ್ಲಿಸಲು ಜನರಲ್ಲಿ ಕೋರುತ್ತೇವೆ” ಎಂದು ವಿವರಿಸಲಾಗಿದೆ.

ಈ ಪೋಸ್ಟ್‌ ಆಧರಿಸಿ ನಾವು ಆವಂತಿಕಾ ಎಂಬ ವಿದ್ಯಾರ್ಥಿನಿಯ ಆತ್ಮಹತ್ಯೆ ಮತ್ತು ಪ್ರತಿಭಟನೆಯ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬೆಂಗಾಳಿ ಸುದ್ದಿ ವೆಬ್‌ಸೈಟ್ ಡೈಲಿ ಇತ್ತೆಫಾಕ್ ಮಾರ್ಚ್ 17ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಆ ವರದಿಯಲ್ಲಿ ” ವಿದ್ಯಾರ್ಥಿನಿ ಫೈರೂಝ್ ಸದಾಫ್ ಆವಂತಿಕಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಲು ಆಗ್ರಹಿಸಿ ಜಗನ್ನಾಥ ವಿವಿಯ ವಿದ್ಯಾರ್ಥಿಗಳು ಪಂಜಿನ ಮೆರವಣಿಗೆ ನಡೆಸಿದರು. ಮೊಂಬತ್ತಿ ಹೊತ್ತಿಸಿ, ಬೀದಿ ನಾಟಕ ಮಾಡಿ ಪ್ರತಿಭಟಿಸಿದರು” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಬಾಂಗ್ಲಾದೇಶದ ಜಗನ್ನಾಥ ವಿವಿಯ ವಿದ್ಯಾರ್ಥಿನಿಯ ಪ್ರತಿಭಟನೆಯದ್ದೇ ಹೊರತು, ಹಿಂದೂ ಮಹಿಳೆಯರ ಮೇಲಿನ ದಾಳಿಯದ್ದಲ್ಲ. ಜಗನ್ನಾಥ ವಿವಿಯ ಆವಂತಿಕ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆಯ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ವಿದ್ಯಾರ್ಥಿನಿಯೊಬ್ಬಳು ಕೈ ಕಾಲಿಗೆ ಹಗ್ಗಕಟ್ಟಿ, ಬಾಯಿಗೆ ಗಮ್‌ಟೇಪ್ ಹಾಕಿ ವಿಶಿಷ್ಟವಾಗಿ ಪ್ರತಿಭಟಿಸಿದ್ದಾಳೆ. ಅದನ್ನು ಹಿಂದೂ ಮಹಿಳೆಯರ ಮೇಲೆ ದಾಳಿ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ, ಈ ವಿಡಿಯೋ ಬಾಂಗ್ಲಾದ ಇತ್ತೀಚಿನ ಸರ್ಕಾರದ ವಿರುದ್ದದ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...