Homeಫ್ಯಾಕ್ಟ್‌ಚೆಕ್FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

- Advertisement -
- Advertisement -

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್ ಬಳಕೆದಾರ Rishi Bagree
(@rishibagree) ರಾಹುಲ್ ಗಾಂಧಿಯವರ ಭಾಷಣದ ಕ್ಲಿಪ್ ಪೋಸ್ಟ್ ಮಾಡಿ ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ಹಂತ 1 – ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡಿ
ಹಂತ 2- ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂಬುದನ್ನು ವಿಶ್ಲೇಷಿಸಿ
ಹಂತ 3 – ವ್ಯಕ್ತಿಗಳ ‘ಸಮೀಕ್ಷೆ’ ಮಾಡಿ
ಹಂತ 4 – ‘ಸಂಪತ್ತು’ ಯಾರ ಬಳಿ ಇದೆ ಎಂಬುದನ್ನು ಹುಡುಕಿ
ಹಂತ 5 – ಅವರ ಜಾತಿಯನ್ನು ವಿಶ್ಲೇಷಿಸಿ
ಹಂತ 6 – ಸಂಪತ್ತಿನ ಮರು-ಹಂಚಿಕೆಯನ್ನು ಮಾಡಿ

“ಕಾಂಗ್ರೆಸ್‌ ಹಾಕುವ ಪ್ರತಿ ಮತವೂ ನಿಮ್ಮದೇ ಮರಣದಂಡನೆಗೆ ಸಹಿ ಹಾಕುತ್ತದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ 

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ Ajeet Bharti (@ajeetbharti) ಕೂಡ ರಾಹುಲ್ ಗಾಂಧಿಯ ಭಾಷಣದ ಕ್ಲಿಪ್ ಹಂಚಿಕೊಂಡಿದ್ದು, “ನರೇಂದ್ರ ಮೋದಿಯವರ ವಿಡಿಯೋ ಇವರಿಗೆ ಸಿಕ್ಕಿಲ್ಲವೇ? ಒಬ್ಬ ವ್ಯಕ್ತಿ ಎಷ್ಟು ಮೂರ್ಖನಾಗಲು ಸಾಧ್ಯ?” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Arun Pudur (@arunpudur) ಎಂಬ ಎಕ್ಸ್ ಬಳಕೆದಾರ ರಾಹುಲ್ ಗಾಂಧಿಯ ವಿಡಿಯೋ ಹಂಚಿಕೊಂಡಿದ್ದು, ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ನಾವು ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡುತ್ತೇವೆ, ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂದು ನಮಗೆ ತಿಳಿಯುತ್ತದೆ.

ನಂತರ ನಾವು ವ್ಯಕ್ತಿಗಳ ಹಣಕಾಸು ಮತ್ತು ಸಂಸ್ಥೆಗಳ ‘ಸಮೀಕ್ಷೆ’ ಮಾಡುತ್ತೇವೆ.

ಯಾರ ಬಳಿ ‘ಸಂಪತ್ತು’ ಇದೆ ಮತ್ತು ಅವರು ಯಾವ ಜಾತಿಗೆ ಸೇರಿದವರು ಎಂಬುದನ್ನು ನಾವು ಕಂಡುಕೊಳ್ಳುತ್ತೇವೆ.

ಇದೆಲ್ಲದರ ನಂತರ ನಾವು ಸಂಪತ್ತಿನ ಮರು ಹಂಚಿಕೆಯ ‘ಕ್ರಾಂತಿಕಾರಿ’ ಕೆಲಸವನ್ನು ಮಾಡುತ್ತೇವೆ.

ರಾಹುಲ್ ಗಾಂಧಿ ಕಾಂಗ್ರೆಸ್

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ಎಲ್ಲಾ ಎಕ್ಸ್ ಬಳಕೆದಾರರು ತಮ್ಮ ಪೋಸ್ಟ್‌ಗಳಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಸರ್ಕಾರ ಬಂದರೆ, “ನಾವು ಆರ್ಥಿಕ ಸಮೀಕ್ಷೆ ನಡೆಸುತ್ತೇವೆ. ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು” ಎಂಬರ್ಥದಲ್ಲಿ ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಎಕ್ಸ್ ಬಳಕೆದಾರರು ಹೇಳಿದಂತೆ “ದೇಶದಲ್ಲಿ ಆರ್ಥಿಕ ಸಮೀಕ್ಷೆ, ಜಾತಿ ಗಣತಿ ನಡೆಸಿ ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 6,2024ರಂದು ರಾಹುಲ್ ಗಾಂಧಿಯವರೇ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ “Nyay Patra – Congress Manifesto Launch Rally | Hyderabad, Telangana” ಎಂಬ ಶೀರ್ಷಿಕೆಯ ಅಪ್ಲೋಡ್ ಮಾಡಿರುವುದು ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 1 ಗಂಟೆ 20 ನಿಮಿಷ 50 ಸೆಕೆಂಡ್‌ನ ವಿಡಿಯೋದಲ್ಲಿ 31 ನಿಮಿಷ 51 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ರಾಹುಲ್ ಗಾಂಧಿಯವರ ಹೇಳಿಕೆಯಿದೆ. ಭಾಷಣದಲ್ಲಿ ರಾಹುಲ್ ಗಾಂಧಿ “ನಾವು ದೇಶವನ್ನು ಎಕ್ಸ್-ರೇ ಮಾಡುತ್ತೇವೆ. ಆಗ ಎಲ್ಲವೂ ಸ್ಪಷ್ಟವಾಗುತ್ತದೆ (ನೀರಿಗೆ ನೀರು, ಹಾಲಿಗೆ ಹಾಲು ಆಗುತ್ತದೆ). ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆ ಎಷ್ಟು ಎಂದು ತಿಳಿಯುತ್ತದೆ. ನಂತರ, ನಾವು ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ. ಆಗ ಭಾರತ ನಿಜವಾಗಿಯೂ ಯಾವ ವರ್ಗದ ಕೈಯಲ್ಲಿದೆ ಎಂದು ಗೊತ್ತಾಗುತ್ತದೆ. ಈ ಐತಿಹಾಸಿಕ ಕ್ರಮದ ನಂತರ, ನಾವು ನಿಮ್ಮ ಹಕ್ಕನ್ನು ನಿಮಗೆ ನೀಡುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ.

ರಾಹುಲ್ ಗಾಂಧಿ ಭಾಷಣದಲ್ಲಿ “ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರು” ಎಂಬುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹಾಗಾಗಿ, ಎಕ್ಸ್ ಬಳಕೆದಾರರು ಹಂಚಿಕೊಂಡಿರುವುದು ಎಡಿಟೆಡ್ ವಿಡಿಯೋ ಎಂಬುವುದು ಇಲ್ಲಿ ಸ್ಪಷ್ಟವಾಗುತ್ತದೆ.

ಎಡಿಟೆಡ್ ವಿಡಿಯೋದಲ್ಲಿ ‘ಅಲ್ಪ ಸಂಖ್ಯಾತರು’ ಎಂಬುವುದು ಮಾತ್ರ ಇದೆ. ‘ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ’ ಎಂಬುವುದನ್ನು ಕಟ್ ಮಾಡಲಾಗಿದೆ.

ರಾಹುಲ್ ಗಾಂಧಿಯರ ಭಾಷಣದ ಎಡಿಟೆಡ್ ವಿಡಿಯೋ ಮತ್ತು ನಿಜವಾದ ವಿಡಿಯೋ ಎರಡನ್ನೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಎರಡೂ ವಿಡಿಯೋಗಳು ಕೆಳಗಿದೆ.

ಇನ್ನೂ ರಾಹುಲ್ ಗಾಂಧಿಯವರ ಎಡಿಟೆಡ್ ವಿಡಿಯೋ ಹಂಚಿಕೊಳ್ಳುತ್ತಿರುವುದು ಗಮನಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ನಿಜವಾದ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಕೆಳಗೆ ಕೊಡಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ಸತ್ಯವೆಂದರೆ, ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಆರ್ಥಿಕ- ಸಾಮಾಜಿಕ-ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿ ಗಣತಿ ಅಥವಾ ಸಮೀಕ್ಷೆಯನ್ನು ‘ಎಕ್ಸ್ ರೇ’ ಎಂದು ರಾಹುಲ್ ಉಲ್ಲೇಖಿಸಿದ್ದಾರೆ. ಸಮೀಕ್ಷೆ ಮಾಡಿದ ಬಳಿಕ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ. ಎಸ್‌ಸಿ, ಎಸ್‌ಟಿ, ಒಬಿಸಿ, ಇಡಬ್ಲ್ಯುಎಸ್‌ ಮತ್ತು ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ. ಈ ಮೂಲಕ ಸಾಮಾಜಿಕ ನ್ಯಾಯದ ಭರವಸೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಆದ್ದರಿಂದ ಅಲ್ಪ ಸಂಖ್ಯಾತರಿಗೆ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...