Homeಫ್ಯಾಕ್ಟ್‌ಚೆಕ್FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

- Advertisement -
- Advertisement -

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್ ಬಳಕೆದಾರ Rishi Bagree
(@rishibagree) ರಾಹುಲ್ ಗಾಂಧಿಯವರ ಭಾಷಣದ ಕ್ಲಿಪ್ ಪೋಸ್ಟ್ ಮಾಡಿ ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ಹಂತ 1 – ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡಿ
ಹಂತ 2- ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂಬುದನ್ನು ವಿಶ್ಲೇಷಿಸಿ
ಹಂತ 3 – ವ್ಯಕ್ತಿಗಳ ‘ಸಮೀಕ್ಷೆ’ ಮಾಡಿ
ಹಂತ 4 – ‘ಸಂಪತ್ತು’ ಯಾರ ಬಳಿ ಇದೆ ಎಂಬುದನ್ನು ಹುಡುಕಿ
ಹಂತ 5 – ಅವರ ಜಾತಿಯನ್ನು ವಿಶ್ಲೇಷಿಸಿ
ಹಂತ 6 – ಸಂಪತ್ತಿನ ಮರು-ಹಂಚಿಕೆಯನ್ನು ಮಾಡಿ

“ಕಾಂಗ್ರೆಸ್‌ ಹಾಕುವ ಪ್ರತಿ ಮತವೂ ನಿಮ್ಮದೇ ಮರಣದಂಡನೆಗೆ ಸಹಿ ಹಾಕುತ್ತದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ 

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ Ajeet Bharti (@ajeetbharti) ಕೂಡ ರಾಹುಲ್ ಗಾಂಧಿಯ ಭಾಷಣದ ಕ್ಲಿಪ್ ಹಂಚಿಕೊಂಡಿದ್ದು, “ನರೇಂದ್ರ ಮೋದಿಯವರ ವಿಡಿಯೋ ಇವರಿಗೆ ಸಿಕ್ಕಿಲ್ಲವೇ? ಒಬ್ಬ ವ್ಯಕ್ತಿ ಎಷ್ಟು ಮೂರ್ಖನಾಗಲು ಸಾಧ್ಯ?” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Arun Pudur (@arunpudur) ಎಂಬ ಎಕ್ಸ್ ಬಳಕೆದಾರ ರಾಹುಲ್ ಗಾಂಧಿಯ ವಿಡಿಯೋ ಹಂಚಿಕೊಂಡಿದ್ದು, ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ನಾವು ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡುತ್ತೇವೆ, ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂದು ನಮಗೆ ತಿಳಿಯುತ್ತದೆ.

ನಂತರ ನಾವು ವ್ಯಕ್ತಿಗಳ ಹಣಕಾಸು ಮತ್ತು ಸಂಸ್ಥೆಗಳ ‘ಸಮೀಕ್ಷೆ’ ಮಾಡುತ್ತೇವೆ.

ಯಾರ ಬಳಿ ‘ಸಂಪತ್ತು’ ಇದೆ ಮತ್ತು ಅವರು ಯಾವ ಜಾತಿಗೆ ಸೇರಿದವರು ಎಂಬುದನ್ನು ನಾವು ಕಂಡುಕೊಳ್ಳುತ್ತೇವೆ.

ಇದೆಲ್ಲದರ ನಂತರ ನಾವು ಸಂಪತ್ತಿನ ಮರು ಹಂಚಿಕೆಯ ‘ಕ್ರಾಂತಿಕಾರಿ’ ಕೆಲಸವನ್ನು ಮಾಡುತ್ತೇವೆ.

ರಾಹುಲ್ ಗಾಂಧಿ ಕಾಂಗ್ರೆಸ್

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ಎಲ್ಲಾ ಎಕ್ಸ್ ಬಳಕೆದಾರರು ತಮ್ಮ ಪೋಸ್ಟ್‌ಗಳಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಸರ್ಕಾರ ಬಂದರೆ, “ನಾವು ಆರ್ಥಿಕ ಸಮೀಕ್ಷೆ ನಡೆಸುತ್ತೇವೆ. ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು” ಎಂಬರ್ಥದಲ್ಲಿ ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಎಕ್ಸ್ ಬಳಕೆದಾರರು ಹೇಳಿದಂತೆ “ದೇಶದಲ್ಲಿ ಆರ್ಥಿಕ ಸಮೀಕ್ಷೆ, ಜಾತಿ ಗಣತಿ ನಡೆಸಿ ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 6,2024ರಂದು ರಾಹುಲ್ ಗಾಂಧಿಯವರೇ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ “Nyay Patra – Congress Manifesto Launch Rally | Hyderabad, Telangana” ಎಂಬ ಶೀರ್ಷಿಕೆಯ ಅಪ್ಲೋಡ್ ಮಾಡಿರುವುದು ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 1 ಗಂಟೆ 20 ನಿಮಿಷ 50 ಸೆಕೆಂಡ್‌ನ ವಿಡಿಯೋದಲ್ಲಿ 31 ನಿಮಿಷ 51 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ರಾಹುಲ್ ಗಾಂಧಿಯವರ ಹೇಳಿಕೆಯಿದೆ. ಭಾಷಣದಲ್ಲಿ ರಾಹುಲ್ ಗಾಂಧಿ “ನಾವು ದೇಶವನ್ನು ಎಕ್ಸ್-ರೇ ಮಾಡುತ್ತೇವೆ. ಆಗ ಎಲ್ಲವೂ ಸ್ಪಷ್ಟವಾಗುತ್ತದೆ (ನೀರಿಗೆ ನೀರು, ಹಾಲಿಗೆ ಹಾಲು ಆಗುತ್ತದೆ). ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆ ಎಷ್ಟು ಎಂದು ತಿಳಿಯುತ್ತದೆ. ನಂತರ, ನಾವು ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ. ಆಗ ಭಾರತ ನಿಜವಾಗಿಯೂ ಯಾವ ವರ್ಗದ ಕೈಯಲ್ಲಿದೆ ಎಂದು ಗೊತ್ತಾಗುತ್ತದೆ. ಈ ಐತಿಹಾಸಿಕ ಕ್ರಮದ ನಂತರ, ನಾವು ನಿಮ್ಮ ಹಕ್ಕನ್ನು ನಿಮಗೆ ನೀಡುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ.

ರಾಹುಲ್ ಗಾಂಧಿ ಭಾಷಣದಲ್ಲಿ “ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರು” ಎಂಬುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹಾಗಾಗಿ, ಎಕ್ಸ್ ಬಳಕೆದಾರರು ಹಂಚಿಕೊಂಡಿರುವುದು ಎಡಿಟೆಡ್ ವಿಡಿಯೋ ಎಂಬುವುದು ಇಲ್ಲಿ ಸ್ಪಷ್ಟವಾಗುತ್ತದೆ.

ಎಡಿಟೆಡ್ ವಿಡಿಯೋದಲ್ಲಿ ‘ಅಲ್ಪ ಸಂಖ್ಯಾತರು’ ಎಂಬುವುದು ಮಾತ್ರ ಇದೆ. ‘ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ’ ಎಂಬುವುದನ್ನು ಕಟ್ ಮಾಡಲಾಗಿದೆ.

ರಾಹುಲ್ ಗಾಂಧಿಯರ ಭಾಷಣದ ಎಡಿಟೆಡ್ ವಿಡಿಯೋ ಮತ್ತು ನಿಜವಾದ ವಿಡಿಯೋ ಎರಡನ್ನೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಎರಡೂ ವಿಡಿಯೋಗಳು ಕೆಳಗಿದೆ.

ಇನ್ನೂ ರಾಹುಲ್ ಗಾಂಧಿಯವರ ಎಡಿಟೆಡ್ ವಿಡಿಯೋ ಹಂಚಿಕೊಳ್ಳುತ್ತಿರುವುದು ಗಮನಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ನಿಜವಾದ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಕೆಳಗೆ ಕೊಡಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ಸತ್ಯವೆಂದರೆ, ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಆರ್ಥಿಕ- ಸಾಮಾಜಿಕ-ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿ ಗಣತಿ ಅಥವಾ ಸಮೀಕ್ಷೆಯನ್ನು ‘ಎಕ್ಸ್ ರೇ’ ಎಂದು ರಾಹುಲ್ ಉಲ್ಲೇಖಿಸಿದ್ದಾರೆ. ಸಮೀಕ್ಷೆ ಮಾಡಿದ ಬಳಿಕ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ. ಎಸ್‌ಸಿ, ಎಸ್‌ಟಿ, ಒಬಿಸಿ, ಇಡಬ್ಲ್ಯುಎಸ್‌ ಮತ್ತು ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ. ಈ ಮೂಲಕ ಸಾಮಾಜಿಕ ನ್ಯಾಯದ ಭರವಸೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಆದ್ದರಿಂದ ಅಲ್ಪ ಸಂಖ್ಯಾತರಿಗೆ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...