Homeಫ್ಯಾಕ್ಟ್‌ಚೆಕ್FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

- Advertisement -
- Advertisement -

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್ ಬಳಕೆದಾರ Rishi Bagree
(@rishibagree) ರಾಹುಲ್ ಗಾಂಧಿಯವರ ಭಾಷಣದ ಕ್ಲಿಪ್ ಪೋಸ್ಟ್ ಮಾಡಿ ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ಹಂತ 1 – ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡಿ
ಹಂತ 2- ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂಬುದನ್ನು ವಿಶ್ಲೇಷಿಸಿ
ಹಂತ 3 – ವ್ಯಕ್ತಿಗಳ ‘ಸಮೀಕ್ಷೆ’ ಮಾಡಿ
ಹಂತ 4 – ‘ಸಂಪತ್ತು’ ಯಾರ ಬಳಿ ಇದೆ ಎಂಬುದನ್ನು ಹುಡುಕಿ
ಹಂತ 5 – ಅವರ ಜಾತಿಯನ್ನು ವಿಶ್ಲೇಷಿಸಿ
ಹಂತ 6 – ಸಂಪತ್ತಿನ ಮರು-ಹಂಚಿಕೆಯನ್ನು ಮಾಡಿ

“ಕಾಂಗ್ರೆಸ್‌ ಹಾಕುವ ಪ್ರತಿ ಮತವೂ ನಿಮ್ಮದೇ ಮರಣದಂಡನೆಗೆ ಸಹಿ ಹಾಕುತ್ತದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ 

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ Ajeet Bharti (@ajeetbharti) ಕೂಡ ರಾಹುಲ್ ಗಾಂಧಿಯ ಭಾಷಣದ ಕ್ಲಿಪ್ ಹಂಚಿಕೊಂಡಿದ್ದು, “ನರೇಂದ್ರ ಮೋದಿಯವರ ವಿಡಿಯೋ ಇವರಿಗೆ ಸಿಕ್ಕಿಲ್ಲವೇ? ಒಬ್ಬ ವ್ಯಕ್ತಿ ಎಷ್ಟು ಮೂರ್ಖನಾಗಲು ಸಾಧ್ಯ?” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Arun Pudur (@arunpudur) ಎಂಬ ಎಕ್ಸ್ ಬಳಕೆದಾರ ರಾಹುಲ್ ಗಾಂಧಿಯ ವಿಡಿಯೋ ಹಂಚಿಕೊಂಡಿದ್ದು, ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ನಾವು ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡುತ್ತೇವೆ, ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂದು ನಮಗೆ ತಿಳಿಯುತ್ತದೆ.

ನಂತರ ನಾವು ವ್ಯಕ್ತಿಗಳ ಹಣಕಾಸು ಮತ್ತು ಸಂಸ್ಥೆಗಳ ‘ಸಮೀಕ್ಷೆ’ ಮಾಡುತ್ತೇವೆ.

ಯಾರ ಬಳಿ ‘ಸಂಪತ್ತು’ ಇದೆ ಮತ್ತು ಅವರು ಯಾವ ಜಾತಿಗೆ ಸೇರಿದವರು ಎಂಬುದನ್ನು ನಾವು ಕಂಡುಕೊಳ್ಳುತ್ತೇವೆ.

ಇದೆಲ್ಲದರ ನಂತರ ನಾವು ಸಂಪತ್ತಿನ ಮರು ಹಂಚಿಕೆಯ ‘ಕ್ರಾಂತಿಕಾರಿ’ ಕೆಲಸವನ್ನು ಮಾಡುತ್ತೇವೆ.

ರಾಹುಲ್ ಗಾಂಧಿ ಕಾಂಗ್ರೆಸ್

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ಎಲ್ಲಾ ಎಕ್ಸ್ ಬಳಕೆದಾರರು ತಮ್ಮ ಪೋಸ್ಟ್‌ಗಳಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಸರ್ಕಾರ ಬಂದರೆ, “ನಾವು ಆರ್ಥಿಕ ಸಮೀಕ್ಷೆ ನಡೆಸುತ್ತೇವೆ. ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು” ಎಂಬರ್ಥದಲ್ಲಿ ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಎಕ್ಸ್ ಬಳಕೆದಾರರು ಹೇಳಿದಂತೆ “ದೇಶದಲ್ಲಿ ಆರ್ಥಿಕ ಸಮೀಕ್ಷೆ, ಜಾತಿ ಗಣತಿ ನಡೆಸಿ ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 6,2024ರಂದು ರಾಹುಲ್ ಗಾಂಧಿಯವರೇ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ “Nyay Patra – Congress Manifesto Launch Rally | Hyderabad, Telangana” ಎಂಬ ಶೀರ್ಷಿಕೆಯ ಅಪ್ಲೋಡ್ ಮಾಡಿರುವುದು ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 1 ಗಂಟೆ 20 ನಿಮಿಷ 50 ಸೆಕೆಂಡ್‌ನ ವಿಡಿಯೋದಲ್ಲಿ 31 ನಿಮಿಷ 51 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ರಾಹುಲ್ ಗಾಂಧಿಯವರ ಹೇಳಿಕೆಯಿದೆ. ಭಾಷಣದಲ್ಲಿ ರಾಹುಲ್ ಗಾಂಧಿ “ನಾವು ದೇಶವನ್ನು ಎಕ್ಸ್-ರೇ ಮಾಡುತ್ತೇವೆ. ಆಗ ಎಲ್ಲವೂ ಸ್ಪಷ್ಟವಾಗುತ್ತದೆ (ನೀರಿಗೆ ನೀರು, ಹಾಲಿಗೆ ಹಾಲು ಆಗುತ್ತದೆ). ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆ ಎಷ್ಟು ಎಂದು ತಿಳಿಯುತ್ತದೆ. ನಂತರ, ನಾವು ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ. ಆಗ ಭಾರತ ನಿಜವಾಗಿಯೂ ಯಾವ ವರ್ಗದ ಕೈಯಲ್ಲಿದೆ ಎಂದು ಗೊತ್ತಾಗುತ್ತದೆ. ಈ ಐತಿಹಾಸಿಕ ಕ್ರಮದ ನಂತರ, ನಾವು ನಿಮ್ಮ ಹಕ್ಕನ್ನು ನಿಮಗೆ ನೀಡುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ.

ರಾಹುಲ್ ಗಾಂಧಿ ಭಾಷಣದಲ್ಲಿ “ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರು” ಎಂಬುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹಾಗಾಗಿ, ಎಕ್ಸ್ ಬಳಕೆದಾರರು ಹಂಚಿಕೊಂಡಿರುವುದು ಎಡಿಟೆಡ್ ವಿಡಿಯೋ ಎಂಬುವುದು ಇಲ್ಲಿ ಸ್ಪಷ್ಟವಾಗುತ್ತದೆ.

ಎಡಿಟೆಡ್ ವಿಡಿಯೋದಲ್ಲಿ ‘ಅಲ್ಪ ಸಂಖ್ಯಾತರು’ ಎಂಬುವುದು ಮಾತ್ರ ಇದೆ. ‘ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ’ ಎಂಬುವುದನ್ನು ಕಟ್ ಮಾಡಲಾಗಿದೆ.

ರಾಹುಲ್ ಗಾಂಧಿಯರ ಭಾಷಣದ ಎಡಿಟೆಡ್ ವಿಡಿಯೋ ಮತ್ತು ನಿಜವಾದ ವಿಡಿಯೋ ಎರಡನ್ನೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಎರಡೂ ವಿಡಿಯೋಗಳು ಕೆಳಗಿದೆ.

ಇನ್ನೂ ರಾಹುಲ್ ಗಾಂಧಿಯವರ ಎಡಿಟೆಡ್ ವಿಡಿಯೋ ಹಂಚಿಕೊಳ್ಳುತ್ತಿರುವುದು ಗಮನಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ನಿಜವಾದ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಕೆಳಗೆ ಕೊಡಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ಸತ್ಯವೆಂದರೆ, ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಆರ್ಥಿಕ- ಸಾಮಾಜಿಕ-ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿ ಗಣತಿ ಅಥವಾ ಸಮೀಕ್ಷೆಯನ್ನು ‘ಎಕ್ಸ್ ರೇ’ ಎಂದು ರಾಹುಲ್ ಉಲ್ಲೇಖಿಸಿದ್ದಾರೆ. ಸಮೀಕ್ಷೆ ಮಾಡಿದ ಬಳಿಕ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ. ಎಸ್‌ಸಿ, ಎಸ್‌ಟಿ, ಒಬಿಸಿ, ಇಡಬ್ಲ್ಯುಎಸ್‌ ಮತ್ತು ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ. ಈ ಮೂಲಕ ಸಾಮಾಜಿಕ ನ್ಯಾಯದ ಭರವಸೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಆದ್ದರಿಂದ ಅಲ್ಪ ಸಂಖ್ಯಾತರಿಗೆ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...