Homeಫ್ಯಾಕ್ಟ್‌ಚೆಕ್FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

- Advertisement -
- Advertisement -

ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್ ಬಳಕೆದಾರ Rishi Bagree
(@rishibagree) ರಾಹುಲ್ ಗಾಂಧಿಯವರ ಭಾಷಣದ ಕ್ಲಿಪ್ ಪೋಸ್ಟ್ ಮಾಡಿ ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ಹಂತ 1 – ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡಿ
ಹಂತ 2- ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂಬುದನ್ನು ವಿಶ್ಲೇಷಿಸಿ
ಹಂತ 3 – ವ್ಯಕ್ತಿಗಳ ‘ಸಮೀಕ್ಷೆ’ ಮಾಡಿ
ಹಂತ 4 – ‘ಸಂಪತ್ತು’ ಯಾರ ಬಳಿ ಇದೆ ಎಂಬುದನ್ನು ಹುಡುಕಿ
ಹಂತ 5 – ಅವರ ಜಾತಿಯನ್ನು ವಿಶ್ಲೇಷಿಸಿ
ಹಂತ 6 – ಸಂಪತ್ತಿನ ಮರು-ಹಂಚಿಕೆಯನ್ನು ಮಾಡಿ

“ಕಾಂಗ್ರೆಸ್‌ ಹಾಕುವ ಪ್ರತಿ ಮತವೂ ನಿಮ್ಮದೇ ಮರಣದಂಡನೆಗೆ ಸಹಿ ಹಾಕುತ್ತದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್ ಇಲ್ಲಿದೆ 

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ Ajeet Bharti (@ajeetbharti) ಕೂಡ ರಾಹುಲ್ ಗಾಂಧಿಯ ಭಾಷಣದ ಕ್ಲಿಪ್ ಹಂಚಿಕೊಂಡಿದ್ದು, “ನರೇಂದ್ರ ಮೋದಿಯವರ ವಿಡಿಯೋ ಇವರಿಗೆ ಸಿಕ್ಕಿಲ್ಲವೇ? ಒಬ್ಬ ವ್ಯಕ್ತಿ ಎಷ್ಟು ಮೂರ್ಖನಾಗಲು ಸಾಧ್ಯ?” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Arun Pudur (@arunpudur) ಎಂಬ ಎಕ್ಸ್ ಬಳಕೆದಾರ ರಾಹುಲ್ ಗಾಂಧಿಯ ವಿಡಿಯೋ ಹಂಚಿಕೊಂಡಿದ್ದು, ಈ ಕೆಳಗಿನಂತೆ ಬರೆದುಕೊಂಡಿದ್ದಾರೆ.

ನಾವು ರಾಷ್ಟ್ರವ್ಯಾಪಿ “ಎಕ್ಸ್-ರೇ” ಮಾಡುತ್ತೇವೆ, ‘ಅಲ್ಪಸಂಖ್ಯಾತರಿಗೆ’ ಎಷ್ಟು ಬಾಕಿ ಇದೆ ಎಂದು ನಮಗೆ ತಿಳಿಯುತ್ತದೆ.

ನಂತರ ನಾವು ವ್ಯಕ್ತಿಗಳ ಹಣಕಾಸು ಮತ್ತು ಸಂಸ್ಥೆಗಳ ‘ಸಮೀಕ್ಷೆ’ ಮಾಡುತ್ತೇವೆ.

ಯಾರ ಬಳಿ ‘ಸಂಪತ್ತು’ ಇದೆ ಮತ್ತು ಅವರು ಯಾವ ಜಾತಿಗೆ ಸೇರಿದವರು ಎಂಬುದನ್ನು ನಾವು ಕಂಡುಕೊಳ್ಳುತ್ತೇವೆ.

ಇದೆಲ್ಲದರ ನಂತರ ನಾವು ಸಂಪತ್ತಿನ ಮರು ಹಂಚಿಕೆಯ ‘ಕ್ರಾಂತಿಕಾರಿ’ ಕೆಲಸವನ್ನು ಮಾಡುತ್ತೇವೆ.

ರಾಹುಲ್ ಗಾಂಧಿ ಕಾಂಗ್ರೆಸ್

ಪೋಸ್ಟ್ ಲಿಂಕ್ ಇಲ್ಲಿದೆ 

ನಾವು ಮೇಲೆ ಉಲ್ಲೇಖಿಸಿದ ಎಲ್ಲಾ ಎಕ್ಸ್ ಬಳಕೆದಾರರು ತಮ್ಮ ಪೋಸ್ಟ್‌ಗಳಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಸರ್ಕಾರ ಬಂದರೆ, “ನಾವು ಆರ್ಥಿಕ ಸಮೀಕ್ಷೆ ನಡೆಸುತ್ತೇವೆ. ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇಲ್ಲಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಮರು” ಎಂಬರ್ಥದಲ್ಲಿ ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಎಕ್ಸ್ ಬಳಕೆದಾರರು ಹೇಳಿದಂತೆ “ದೇಶದಲ್ಲಿ ಆರ್ಥಿಕ ಸಮೀಕ್ಷೆ, ಜಾತಿ ಗಣತಿ ನಡೆಸಿ ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಮರು ಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 6,2024ರಂದು ರಾಹುಲ್ ಗಾಂಧಿಯವರೇ ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ “Nyay Patra – Congress Manifesto Launch Rally | Hyderabad, Telangana” ಎಂಬ ಶೀರ್ಷಿಕೆಯ ಅಪ್ಲೋಡ್ ಮಾಡಿರುವುದು ವಿಡಿಯೋ ದೊರೆತಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಒಟ್ಟು 1 ಗಂಟೆ 20 ನಿಮಿಷ 50 ಸೆಕೆಂಡ್‌ನ ವಿಡಿಯೋದಲ್ಲಿ 31 ನಿಮಿಷ 51 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ರಾಹುಲ್ ಗಾಂಧಿಯವರ ಹೇಳಿಕೆಯಿದೆ. ಭಾಷಣದಲ್ಲಿ ರಾಹುಲ್ ಗಾಂಧಿ “ನಾವು ದೇಶವನ್ನು ಎಕ್ಸ್-ರೇ ಮಾಡುತ್ತೇವೆ. ಆಗ ಎಲ್ಲವೂ ಸ್ಪಷ್ಟವಾಗುತ್ತದೆ (ನೀರಿಗೆ ನೀರು, ಹಾಲಿಗೆ ಹಾಲು ಆಗುತ್ತದೆ). ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆ ಎಷ್ಟು ಎಂದು ತಿಳಿಯುತ್ತದೆ. ನಂತರ, ನಾವು ಆರ್ಥಿಕ ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ. ಆಗ ಭಾರತ ನಿಜವಾಗಿಯೂ ಯಾವ ವರ್ಗದ ಕೈಯಲ್ಲಿದೆ ಎಂದು ಗೊತ್ತಾಗುತ್ತದೆ. ಈ ಐತಿಹಾಸಿಕ ಕ್ರಮದ ನಂತರ, ನಾವು ನಿಮ್ಮ ಹಕ್ಕನ್ನು ನಿಮಗೆ ನೀಡುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ.

ರಾಹುಲ್ ಗಾಂಧಿ ಭಾಷಣದಲ್ಲಿ “ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ ಮತ್ತು ಅಲ್ಪಸಂಖ್ಯಾತರು” ಎಂಬುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಹಾಗಾಗಿ, ಎಕ್ಸ್ ಬಳಕೆದಾರರು ಹಂಚಿಕೊಂಡಿರುವುದು ಎಡಿಟೆಡ್ ವಿಡಿಯೋ ಎಂಬುವುದು ಇಲ್ಲಿ ಸ್ಪಷ್ಟವಾಗುತ್ತದೆ.

ಎಡಿಟೆಡ್ ವಿಡಿಯೋದಲ್ಲಿ ‘ಅಲ್ಪ ಸಂಖ್ಯಾತರು’ ಎಂಬುವುದು ಮಾತ್ರ ಇದೆ. ‘ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಬಡ ಸಾಮಾನ್ಯ ವರ್ಗ’ ಎಂಬುವುದನ್ನು ಕಟ್ ಮಾಡಲಾಗಿದೆ.

ರಾಹುಲ್ ಗಾಂಧಿಯರ ಭಾಷಣದ ಎಡಿಟೆಡ್ ವಿಡಿಯೋ ಮತ್ತು ನಿಜವಾದ ವಿಡಿಯೋ ಎರಡನ್ನೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಎರಡೂ ವಿಡಿಯೋಗಳು ಕೆಳಗಿದೆ.

ಇನ್ನೂ ರಾಹುಲ್ ಗಾಂಧಿಯವರ ಎಡಿಟೆಡ್ ವಿಡಿಯೋ ಹಂಚಿಕೊಳ್ಳುತ್ತಿರುವುದು ಗಮನಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ನಿಜವಾದ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಕೆಳಗೆ ಕೊಡಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ಸತ್ಯವೆಂದರೆ, ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಆರ್ಥಿಕ- ಸಾಮಾಜಿಕ-ಜಾತಿ ಗಣತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿ ಗಣತಿ ಅಥವಾ ಸಮೀಕ್ಷೆಯನ್ನು ‘ಎಕ್ಸ್ ರೇ’ ಎಂದು ರಾಹುಲ್ ಉಲ್ಲೇಖಿಸಿದ್ದಾರೆ. ಸಮೀಕ್ಷೆ ಮಾಡಿದ ಬಳಿಕ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ. ಎಸ್‌ಸಿ, ಎಸ್‌ಟಿ, ಒಬಿಸಿ, ಇಡಬ್ಲ್ಯುಎಸ್‌ ಮತ್ತು ಅಲ್ಪ ಸಂಖ್ಯಾತರಿಗೆ ಸಂಪತ್ತಿನ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ. ಈ ಮೂಲಕ ಸಾಮಾಜಿಕ ನ್ಯಾಯದ ಭರವಸೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಆದ್ದರಿಂದ ಅಲ್ಪ ಸಂಖ್ಯಾತರಿಗೆ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...