Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

- Advertisement -
- Advertisement -

ಶನಿವಾರ (ಮೇ 25) ನಡೆದ ಲೋಕಸಭೆ ಚುನಾವಣೆ- 2024ರ 6ನೇ ಹಂತದ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಿದ್ದ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಸೆಲ್ಫಿ ಹಂಚಿಕೊಂಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ, ಅವರ ಹಿಂಬದಿ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ರೀತಿಯ ಪೈಂಟಿಂಗ್ ಒಂದು ಕಾಣಿಸಿದೆ. ಈ ಪೈಂಟಿಂಗ್ ಮುಂದಿಟ್ಟುಕೊಂಡು ಹಲವರು ರಾಹುಲ್ ಗಾಂಧಿಯನ್ನು ಧಾರ್ಮಿಕವಾಗಿ ಟೀಕಿಸಿದ್ದಾರೆ.

ಸದಾ ಸುಳ್ಳು ಪೋಸ್ಟ್‌ಗಳನ್ನು ಹಾಕುವಲ್ಲಿ ಪ್ರಸಿದ್ದಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ MrSinha (mrsinha)ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯ ಸೆಲ್ಫಿ ಹಂಚಿಕೊಂಡು ” ಜನಿವಾರದಾರಿ ಬ್ರಾಹ್ಮಣ ರಾಹುಲ್ ಗಾಂಧಿಯ ಕೋಣೆಯಲ್ಲಿ ಏಸು ಕ್ರಿಸ್ತನ ಚಿತ್ರವಿದೆ. ಆದರೆ, ಯಾವುದೇ ಹಿಂದೂ ದೇವರುಗಳ ಚಿತ್ರಗಳಿಲ್ಲ” ಎಂದು ಬರೆದುಕೊಂಡಿದ್ದಾರೆ.

Vijay Patel(@vijaygajera) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಅದೇ ಸೆಲ್ಫಿ ಹಂಚಿಕೊಂಡು ” ಬ್ರಾಹ್ಮಣ ರಾಹುಲ್ ಗಾಂಧಿಯ ಕೋಣೆಯಲ್ಲಿ ಕ್ರೈಸ್ತ ಧರ್ಮದ ಫೋಟೋ ಇದೆ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಅಸಲಿಗೆ ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ ಹಿಂಬದಿ ಕಂಡು ಬಂದ ಚಿತ್ರ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದಲ್ಲ. ಅದು “ರಷ್ಯಾದ ವರ್ಣಚಿತ್ರಕಾರ ನಿಕೋಲಸ್ ರೋರಿಚ್ ಅವರು ರಚಿಸಿರುವ ‘ಮಡೋನಾ ಒರಿಫ್ಲಾಮಾ‘ ಎಂಬ ಶೀರ್ಷಿಕೆಯ ಚಿತ್ರವಾಗಿದೆ. ಚಿತ್ರದಲ್ಲಿರುವ ಮಹಿಳೆ ಶಾಂತಿಯ ಸಂದೇಶ ಸಾರುವ ಬ್ಯಾನರ್ ಹಿಡಿದಿದ್ದಾಳೆ”.

svdejala.blogspot.com ಎಂಬ ಬ್ಲಾಗ್ ಪೋಸ್ಟ್‌ನಲ್ಲಿ ಆಗಸ್ಟ್ 8, 2017ರಂದು ಈ ಕುರಿತು ಮಾಹಿತಿ ಪ್ರಕಟಿಸಿಲಾಗಿದೆ. ಅದರಲ್ಲಿ ಹೇಳಿರುವ ಪ್ರಕಾರ, ಈ ಚಿತ್ರವನ್ನು ನಿಕೋಲಸ್ ರೋರಿಚ್ ಅವರು 1932 ರಲ್ಲಿ ರಚಿಸಿದ್ದಾರೆ. ಚಿತ್ರದಲ್ಲಿ ಮಹಿಳೆ ಹಿಡಿದಿರುವ ಮೂರು ಚುಕ್ಕೆಗಳಿರುವ ಬ್ಯಾನರ್ ಅನ್ನು ‘ಬ್ಯಾನರ್ ಆಫ್ ಪೀಸ್’ (Banner of peace)ಎಂದು ಕರೆಯಲಾಗುತ್ತದೆ.

ಗೂಗಲ್‌ನಲ್ಲಿ ‘ಮಡೋನಾ ಒರಿಫ್ಲಾಮಾ’ (Madonna Oriflamma) ಎಂದು ಹುಡುಕಿದರೆ ಚಿತ್ರದ ಕುರಿತು ಸಾಕಷ್ಟು ಮಾಹಿತಿ ಲಭ್ಯವಿದೆ.

ವಿಕಿಆರ್ಟ್ ಪುಟದಲ್ಲಿ 2013 ರಲ್ಲಿ ಕೊನೆಯದಾಗಿ ಅಪ್ಡೇಟ್ ಮಾಡಲಾದ ಮಾಹಿತಿಯ ಪ್ರಕಾರ, ಈ ಚಿತ್ರವನ್ನು ನ್ಯೂಯಾರ್ಕ್‌ನ ನಿಕೋಲಸ್ ರೋರಿಚ್ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗಿದೆ ಎಂದಿದೆ.

ನಿಕೋಲಸ್ ರೋರಿಚ್ ಮ್ಯೂಸಿಯಂನ ಫೇಸ್‌ಬುಕ್ ಪುಟದಲ್ಲಿ 2021 ರಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ ಹಿಂಬದಿ ಕಾಣುತ್ತಿರುವ ಚಿತ್ರ ಏಸು ಕ್ರಿಸ್ತರದ್ದೋ, ಮೇರಿ ಮಾತೆಯದ್ದೋ ಅಲ್ಲ. ಅದು ಶಾಂತಿಯ ಸಂದೇಶ ಸಾರುವ ‘ಮಡೋನಾ ಒರಿಫ್ಲಾಮಾ’ ಚಿತ್ರ ಎಂಬುವುದು ಗೊತ್ತಾಗಿದೆ. ಹಾಗಾಗಿ, ಎಕ್ಸ್ ಬಳಕೆದಾರರು ಮಾಡಿರುವ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...