Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

- Advertisement -
- Advertisement -

ಶನಿವಾರ (ಮೇ 25) ನಡೆದ ಲೋಕಸಭೆ ಚುನಾವಣೆ- 2024ರ 6ನೇ ಹಂತದ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಿದ್ದ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಸೆಲ್ಫಿ ಹಂಚಿಕೊಂಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ, ಅವರ ಹಿಂಬದಿ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ರೀತಿಯ ಪೈಂಟಿಂಗ್ ಒಂದು ಕಾಣಿಸಿದೆ. ಈ ಪೈಂಟಿಂಗ್ ಮುಂದಿಟ್ಟುಕೊಂಡು ಹಲವರು ರಾಹುಲ್ ಗಾಂಧಿಯನ್ನು ಧಾರ್ಮಿಕವಾಗಿ ಟೀಕಿಸಿದ್ದಾರೆ.

ಸದಾ ಸುಳ್ಳು ಪೋಸ್ಟ್‌ಗಳನ್ನು ಹಾಕುವಲ್ಲಿ ಪ್ರಸಿದ್ದಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ MrSinha (mrsinha)ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯ ಸೆಲ್ಫಿ ಹಂಚಿಕೊಂಡು ” ಜನಿವಾರದಾರಿ ಬ್ರಾಹ್ಮಣ ರಾಹುಲ್ ಗಾಂಧಿಯ ಕೋಣೆಯಲ್ಲಿ ಏಸು ಕ್ರಿಸ್ತನ ಚಿತ್ರವಿದೆ. ಆದರೆ, ಯಾವುದೇ ಹಿಂದೂ ದೇವರುಗಳ ಚಿತ್ರಗಳಿಲ್ಲ” ಎಂದು ಬರೆದುಕೊಂಡಿದ್ದಾರೆ.

Vijay Patel(@vijaygajera) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಅದೇ ಸೆಲ್ಫಿ ಹಂಚಿಕೊಂಡು ” ಬ್ರಾಹ್ಮಣ ರಾಹುಲ್ ಗಾಂಧಿಯ ಕೋಣೆಯಲ್ಲಿ ಕ್ರೈಸ್ತ ಧರ್ಮದ ಫೋಟೋ ಇದೆ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಅಸಲಿಗೆ ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ ಹಿಂಬದಿ ಕಂಡು ಬಂದ ಚಿತ್ರ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದಲ್ಲ. ಅದು “ರಷ್ಯಾದ ವರ್ಣಚಿತ್ರಕಾರ ನಿಕೋಲಸ್ ರೋರಿಚ್ ಅವರು ರಚಿಸಿರುವ ‘ಮಡೋನಾ ಒರಿಫ್ಲಾಮಾ‘ ಎಂಬ ಶೀರ್ಷಿಕೆಯ ಚಿತ್ರವಾಗಿದೆ. ಚಿತ್ರದಲ್ಲಿರುವ ಮಹಿಳೆ ಶಾಂತಿಯ ಸಂದೇಶ ಸಾರುವ ಬ್ಯಾನರ್ ಹಿಡಿದಿದ್ದಾಳೆ”.

svdejala.blogspot.com ಎಂಬ ಬ್ಲಾಗ್ ಪೋಸ್ಟ್‌ನಲ್ಲಿ ಆಗಸ್ಟ್ 8, 2017ರಂದು ಈ ಕುರಿತು ಮಾಹಿತಿ ಪ್ರಕಟಿಸಿಲಾಗಿದೆ. ಅದರಲ್ಲಿ ಹೇಳಿರುವ ಪ್ರಕಾರ, ಈ ಚಿತ್ರವನ್ನು ನಿಕೋಲಸ್ ರೋರಿಚ್ ಅವರು 1932 ರಲ್ಲಿ ರಚಿಸಿದ್ದಾರೆ. ಚಿತ್ರದಲ್ಲಿ ಮಹಿಳೆ ಹಿಡಿದಿರುವ ಮೂರು ಚುಕ್ಕೆಗಳಿರುವ ಬ್ಯಾನರ್ ಅನ್ನು ‘ಬ್ಯಾನರ್ ಆಫ್ ಪೀಸ್’ (Banner of peace)ಎಂದು ಕರೆಯಲಾಗುತ್ತದೆ.

ಗೂಗಲ್‌ನಲ್ಲಿ ‘ಮಡೋನಾ ಒರಿಫ್ಲಾಮಾ’ (Madonna Oriflamma) ಎಂದು ಹುಡುಕಿದರೆ ಚಿತ್ರದ ಕುರಿತು ಸಾಕಷ್ಟು ಮಾಹಿತಿ ಲಭ್ಯವಿದೆ.

ವಿಕಿಆರ್ಟ್ ಪುಟದಲ್ಲಿ 2013 ರಲ್ಲಿ ಕೊನೆಯದಾಗಿ ಅಪ್ಡೇಟ್ ಮಾಡಲಾದ ಮಾಹಿತಿಯ ಪ್ರಕಾರ, ಈ ಚಿತ್ರವನ್ನು ನ್ಯೂಯಾರ್ಕ್‌ನ ನಿಕೋಲಸ್ ರೋರಿಚ್ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗಿದೆ ಎಂದಿದೆ.

ನಿಕೋಲಸ್ ರೋರಿಚ್ ಮ್ಯೂಸಿಯಂನ ಫೇಸ್‌ಬುಕ್ ಪುಟದಲ್ಲಿ 2021 ರಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ ಹಿಂಬದಿ ಕಾಣುತ್ತಿರುವ ಚಿತ್ರ ಏಸು ಕ್ರಿಸ್ತರದ್ದೋ, ಮೇರಿ ಮಾತೆಯದ್ದೋ ಅಲ್ಲ. ಅದು ಶಾಂತಿಯ ಸಂದೇಶ ಸಾರುವ ‘ಮಡೋನಾ ಒರಿಫ್ಲಾಮಾ’ ಚಿತ್ರ ಎಂಬುವುದು ಗೊತ್ತಾಗಿದೆ. ಹಾಗಾಗಿ, ಎಕ್ಸ್ ಬಳಕೆದಾರರು ಮಾಡಿರುವ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...