Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

- Advertisement -
- Advertisement -

ಲೋಕಸಭೆ ಚುನಾವಣೆ 2024ರ ಫಲಿತಾಂಶ ನಿನ್ನೆ( ಜೂನ್ 4) ಪ್ರಕಟಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿಗೆ ಹಿನ್ನಡೆಯಾಗಿದೆ. ಬಿಜೆಪಿ ಕೇವಲ 243 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಗಳಿಸಲು ವಿಫಲವಾಗಿದೆ.

ಈ ನಡುವೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರೂ ಮೋದಿಗೆ ಅಥವಾ ಬಿಜೆಪಿಗೆ ಮತ ಹಾಕದ ಹಿಂದೂಗಳನ್ನು ಮುಸ್ಲಿಂ ವ್ಯಕ್ತಿಯೊಬ್ಬ ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಜೂನ್‌ 4ರಂದು ‘dhirendra_raghav_79’ಎಂಬ ಹೆಸರಿನ ವೆರಿಫೈಡ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವೈರಲ್ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದ ಜೊತೆಗೆ “ಮಂದಿರದ ಬದಲಿಗೆ ಮಸೀದಿ ನಿರ್ಮಿಸಲಾಗುವುದು” ಎಂದು ಬರೆಯಲಾಗಿದೆ. ಅಲ್ಲದೆ #dhokha #hindutemple #bjp ಎಂಬ ಹ್ಯಾಷ್‌ ಟ್ಯಾಗ್‌ಗಳನ್ನು ಕೊಡಲಾಗಿದೆ.

ವಿಡಿಯೋ ಅಪ್ಲೋಡ್ ಮಾಡಿರುವ ಇನ್‌ಸ್ಟಾಗ್ರಾಂ ಖಾತೆಯ ಬಯೋ ಪರಿಶೀಲಿಸಿದಾಗ, ಅಲ್ಲಿ ‘ಧೀರೇಂದ್ರ ರಾಘವ್’ಕಲಾವಿದ ಎಂದು ಬರೆದಿರುವುದು ಕಂಡು ಬಂದಿದೆ. ಖಾತೆಯಲ್ಲಿ ಧೀರೇಂದ್ರ ರಾಘವ್ ಸಂದರ್ಭಕ್ಕೆ ತಕ್ಕಂತೆ ವೇಷ ತೊಟ್ಟು ಮಾಡಿರುವ ಹಲವು ವಿಡಿಯೋಗಳು ಇವೆ. ಮುಸ್ಲಿಂ ವ್ಯಕ್ತಿಯಂತೆ ವೇಷ ತೊಟ್ಟು ಮಾಡಿರುವ ವಿಡಿಯೋಗಳೂ ಇವೆ.

ಅವುಗಳ ಲಿಂಕ್ ಇಲ್ಲಿದೆ, ಇಲ್ಲಿದೆ 

ಧೀರೇಂದ್ರ ರಾಘವ್ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆತನ ಫೇಸ್‌ಬುಕ್ ಖಾತೆಯೂ ಕಂಡು ಬಂದಿದೆ. ಅದರಲ್ಲಿ ಆತ ಉತ್ತರ ಪ್ರದೇಶದ ಆಗ್ರಾದವರು ಎಂದು ಬರೆಯಲಾಗಿದೆ. ಮುಸ್ಲಿಂ ವ್ಯಕ್ತಿಯಂತೆ ವೇಷ ತೊಟ್ಟು ಹಿಂದೂಗಳಿಗೆ ಬೈದಿರುವ ವೈರಲ್ ವಿಡಿಯೋ ಕೂಡ ಆತನ ಫೇಸ್‌ಬುಕ್‌ ಖಾತೆಯಲ್ಲಿ ಕಂಡು ಬಂದಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದ ವಿಷಯವೇನೆಂದರೆ, ” ರಾಮ ಮಂದಿರ ನಿರ್ಮಾಣದ ಬಳಿಕವೂ ಮೋದಿಗೆ ಮತ ಹಾಕದ ಹಿಂದೂಗಳಿಗೆ ಮುಸ್ಲಿಂ ವ್ಯಕ್ತಿ ಬೈದಿದ್ದಾರೆ ಎಂದು ವೈರಲ್ ಮಾಡಲಾಗಿರುವ ವಿಡಿಯೋದಲ್ಲಿರುವುದು ಮುಸ್ಲಿಂ ವ್ಯಕ್ತಿಯಲ್ಲ. ಅಲ್ಲಿರುವುದು ಇದೇ ಕಲಾವಿದ ಧೀರೇಂದ್ರ ರಾಘವ್. ಈತ ಬಿಜೆಪಿ ಮತ್ತು ಹಿಂದುತ್ವದ ಪರವಾಗಿ ಆಗಾಗ ವಿಡಿಯೋ ಮಾಡುತ್ತಿರುತ್ತಾನೆ.

ಈ ಬಾರಿ ಬಿಜೆಪಿ ಬಹುಮತ ಪಡೆಯದಿರಲು ಮತ್ತು ಅಯೋಧ್ಯೆಯಲ್ಲೇ ಬಿಜೆಪಿ ಅಭ್ಯರ್ಥಿ ಸೋಲಲು ಹಿಂದೂಗಳು ಮತ ಹಾಕದಿರುವುದೇ ಕಾರಣ. ಹೀಗೆ ಆದರೆ, ಕಾಂಗ್ರೆಸ್ ಸರ್ಕಾರ ಬರಲಿದೆ. ಮಂದಿರದ ಜಾಗದಲ್ಲಿ ಮುಸ್ಲಿಮರು ಮಸೀದಿ ನಿರ್ಮಿಸಲಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ವೇಷ ತೊಟ್ಟು ಧೀರೇಂದ್ರ ರಾಘವ್ ಹೇಳಿದ್ದಾರೆ.

ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝಬೈರ್ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಧೀರೇಂದ್ರ ರಾಘವ್ ಅವರದ್ದು, ಈತ ಮುಸ್ಲಿಂ ವ್ಯಕ್ತಿಯ ವೇಷ ತೊಟ್ಟು ಹಿಂದೂ-ಮುಸ್ಲಿಂ ನಡುವೆ ದ್ವೇಷ ಹರಡುವ ಕೆಲಸ ಮಾಡುತ್ತಿದ್ದಾನೆ ಎಂದಿದ್ದು, ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಹೇಟ್ ಡಿಟೆಕ್ಟರ್ (Hate Detector) ಎಕ್ಸ್ ಖಾತೆಯಲ್ಲೂ ವೈರಲ್ ವಿಡಿಯೋ ಪೋಸ್ಟ್ ಮಾಡಲಾಗಿದ್ದು, “ಧೀರೇಂದ್ರ ರಾಘವ್ ಟೋಪಿ ಧರಿಸಿ ಮುಸ್ಲಿಂ ವ್ಯಕ್ತಿಯಂತೆ ನಟಿಸಿ ಹಿಂದೂಗಳನ್ನು ನಿಂದಿಸುವ ವಿಡಿಯೋವನ್ನು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುವ ಕೋಮುವಾದಿ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : FACT CHECK : ಕಾಂಗ್ರೆಸ್, ಗಾಂಧಿ ಕುಟುಂಬ ಭಾರತವನ್ನು ಲೂಟಿ ಮಾಡುತ್ತಿದೆ ಎಂಬ ಕಾರ್ಟೂನ್ ಮಾರ್ಫ್ ಮಾಡಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...