Homeಫ್ಯಾಕ್ಟ್‌ಚೆಕ್FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ...

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

- Advertisement -
- Advertisement -

ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡನೆಗೆ ಮುಂದಾಗಿರುವ ನಡುವೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ, ಸಂಘ ಪರಿವಾರ ಮತ್ತು ಅದರ ಮಿತ್ರ ಪಕ್ಷಗಳು ರೈತರು, ದೇವಸ್ಥಾನಗಳು, ಮಠಗಳು, ಸರ್ಕಾರಿ ಶಾಲಾ-ಕಾಲೇಜುಗಳು ಸೇರಿದಂತೆ ಹಲವರ ಜಮೀನುಗಳನ್ನು ವಕ್ಫ್‌ ಬೋರ್ಡ್ ಕಬಳಿಸುತ್ತಿದೆ ಎಂಬ ಆರೋಪ ಮಾಡಿದೆ.

ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್ ರೈತರ ಜಮೀನುಗಳನ್ನು ತನ್ನದೆಂದು ಹೇಳುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಒಂದು ತಿಂಗಳು ಬಿಜೆಪಿ ಮತ್ತು ಸಂಘ ಪರಿವಾರ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದ್ದಿತ್ತು. ಕೊನೆಗೆ ಸರ್ಕಾರ ಯಾವುದೇ ರೈತರಿಗೆ ವಕ್ಫ್‌ ಭೂಮಿ ಸಂಬಂಧ ನೋಟಿಸ್ ನೀಡುವುದಿಲ್ಲ. ಕೊಟ್ಟ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ ಬಳಿಕ, ಈಗ ವಿಷಯ ಸ್ವಲ್ಪ ತಣ್ಣಗಾಗಿದೆ.

ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲ ಸುದ್ದಿ ವಾಹಿನಿಗಳಲ್ಲಿ ಅಲ್ಲಲ್ಲಿ ವಕ್ಫ್‌ ಬೋರ್ಡ್ ಜಮೀನು ಸಂಬಂಧ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಈಗಲೂ ಹಂಚಲಾಗುತ್ತಿದೆ. ಇದರ ಭಾಗವಾಗಿ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹಬ್ಬಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಇಂದು (ನ.20) ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹರಿದಾಡುತ್ತಿರುವುದು ಗಮನಾರ್ಹ

ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ನವೆಂಬರ್ 19ರಂದು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು “ವಕ್ಫ್‌ ಬೋರ್ಡ್ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನ ತನ್ನದೆಂದು ಹೇಳಿದೆ. ಅದಕ್ಕೆ ಯುಬಿಟಿ (ಶಿವಸೇನೆ ಉದ್ದವ್ ಠಾಕ್ರೆ ಬಣ) ಮತ್ತು ಕಾಂಗ್ರೆಸ್‌ ಬೇಡ ಎಂಬುವುದಾಗಿ ಹೇಳುತ್ತಿರುವುದು” ಎಂದು ಬರೆದುಕೊಂಡಿದ್ದರು. ನಿತೇಶ್ ರಾಣೆ ಹಂಚಿಕೊಂಡಿದ್ದ ಫೋಟೋ ಮೇಲೆ ‘ಸಕಾಲ್’ ಎಂಬ ಲೋಗೋ ಇತ್ತು.

सनातनी Rinki (@rynkee) ಎಂಬ ಎಕ್ಸ್‌ ಬಳಕೆದಾರರು ನವೆಂಬರ್ 18ರಂದು ಸಕಾಲ್ ಲೋಗೋ ಇರುವ ಅದೇ ಪೋಟೋವನ್ನು ಹಂಚಿಕೊಂಡು “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನೂ ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. ಎಂವಿಎ ಉಲಮಾ ಮಂಡಳಿಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಪ್ರೀತಿಯ ಹಿಂದೂಗಳೇ..ನಿಮಗೆ ಕ್ರೊನೋಲಜಿ ಅರ್ಥವಾಗಿರಬಹುದು. ಬಟೇಂಗೆ ತೊ ಕಟೇಂಗೆ, ಏಕೆ ಹೈ ತೋ ಸೇಫ್‌ ಹೈ, ಮಹಾಯುತಿ ಏಕೈಕ ಆಯ್ಕೆ” ಎಂದು ಬರೆದುಕೊಂಡಿದ್ದರು.

Kreately.in ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ” ಎಂದು ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು.

ಈ ಪೋಸ್ಟರ್‌ ಅನ್ನು ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ @MrSinha ಹಂಚಿಕೊಂಡು “ಸಾಕೆಂದರೆ, ಸಾಕು. ಅವರು ಕೈ ಮೀರುತ್ತಿದ್ದಾರೆ, ಅವರನ್ನು ನಿಲ್ಲಿಸಬೇಕಾಗಿದೆ” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ‘ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ಕಬಳಿಸಿದೆ’ ಎಂಬರ್ಥ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಈ ಕುರಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಹಲವರು ಪೋಸ್ಟರ್ ಹಂಚಿಕೊಂಡಿರುವ ಸಕಾಲ್ ನ್ಯೂಸ್ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ”ನಾವು ಈ ರೀತಿಯ ಗ್ರಾಫಿಕ್ಸ್ ಹಂಚಿಕೊಂಡಿಲ್ಲ. ಯಾರೋ ನಮ್ಮ ಲೋಗೋ ಬಳಸಿಕೊಂಡು, ನಮ್ಮದೇ ಶೈಲಿಯಲ್ಲಿ ಗ್ರಾಫಿಕ್ಸ್ ಮಾಡಿದ್ದಾರೆ” ಎಂದು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ.

ಅಲ್ಲದೆ, ಸಕಾಲ್ ನ್ಯೂಸ್ ತಮ್ಮ ಹೆಸರಿನಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿರುವ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿಯನ್ನೂ ಬರೆದಿದೆ. ಅದರಲ್ಲಿ, ತಮ್ಮ ಅಸಲಿ ಪೋಸ್ಟರ್ ಮತ್ತು ನಕಲಿ ಪೋಸ್ಟರ್ ನಡುವಿನ ವ್ಯತ್ಯಾಸಗಳನ್ನು ತಿಳಿಸುವ ಕೆಲ ಅಂಶಗಳನ್ನು ಎತ್ತಿ ತೋರಿಸಿದೆ. ಅವುಗಳ ಹೀಗಿವೆ..

1. ಸಕಾಲ್ ನ್ಯೂಸ್ ತನ್ನ ಪೋಸ್ಟರ್‌ನಲ್ಲಿ ಸಂಪೂರ್ಣ ಫೋಟೋವನ್ನು ಬಳಸುತ್ತದೆ ಮತ್ತು ಕೆಳಗಿನ ಟೆಕ್ಸ್ಟ್‌ ಅನ್ನು ಎಡದಿಂದ ಹಾಕುತ್ತದೆ. ಆದರೆ, ನಕಲಿ ಪೋಸ್ಟರ್‌ನಲ್ಲಿ ಅರ್ಧ ಫೋಟೋವನ್ನು ಬಳಸಲಾಗಿದೆ ಮತ್ತು ಟೆಕ್ಸ್ಟ್ ಅನ್ನು ಮಧ್ಯದಲ್ಲಿ ಹಾಕಲಾಗಿದೆ.

2. ಸಕಾಲ್ ನ್ಯೂಸ್ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟರ್‌ ಮಾಡಿದ್ದರೆ, ಅದನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳುತ್ತಿತ್ತು. ಆದರೆ, ಸಕಾಲ್ ನ್ಯೂಸ್ ಎಲ್ಲೂ ವೈರಲ್ ಪೋಸ್ಟರ್‌ ಅನ್ನು ಎಲ್ಲೂ ಹಂಚಿಕೊಂಡಿಲ್ಲ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ಮುಂಬೈ ಸಿದ್ಧಿವಿನಾಯಕ ದೇವಸ್ಥಾನದ ಕೋಶಾಧಿಕಾರಿ ಹಾಗೂ ಬಿಜೆಪಿ ಮುಂಬೈನ ಉಪಾಧ್ಯಕ್ಷ ಪವನ್ ತ್ರಿಪಾಠಿ, ವಕ್ಫ್‌ ಬೋರ್ಡ್ ದೇವಸ್ಥಾನದ ಮೇಲೆ ಹಕ್ಕು ಸ್ಥಾಪಿಸಿದೆ ಎಂಬುವುದನ್ನು ಅಲ್ಲಗಳೆದಿದ್ದಾರೆ. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನವು ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಪ್ರಪಂಚದಾದ್ಯಂತ ವಾಸಿಸುವ ಎಲ್ಲಾ ಸನಾತನಿಗಳಲ್ಲಿ ಇದರ ಬಗ್ಗೆ ಅಪಾರ ಗೌರವ ಇದೆ. ಆದ್ದರಿಂದ ಸಿದ್ಧಿವಿನಾಯಕ ದೇವಸ್ಥಾನವನ್ನು ಯಾವುದೇ ಮಂಡಳಿ ಅಥವಾ ಸಂಸ್ಥೆ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಗಣೇಶನ ಭಕ್ತರಿಗೆ ಸೇರಿದ್ದು ಮತ್ತು ಅವರಿಗಾಗಿ ಸದಾ ಉಳಿಯುತ್ತದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖವಾಣಿ ಆರ್ಗನೈಸರ್ ಪವನ್ ತ್ರಿಪಾಠಿ ಅವರ ಹೇಳಿಕೆ ಕುರಿತು ಸುದ್ದಿ ಪ್ರಕಟಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ಮುಂಬೈ ಜಿಲ್ಲಾ ವಕ್ಫ್ ಅಧಿಕಾರಿಯನ್ನು ಸಂಪರ್ಕಿಸಿ ವೈರಲ್ ಸುದ್ದಿಯ ಕುರಿತು ಮಾಹಿತಿ ಕೇಳಿದ್ದು, ಅವರು “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಬಲಪಂಥೀಯ ಎಕ್ಸ್‌ ಬಳಕೆದಾರ @MrSinha ಹಂಚಿಕೊಂಡಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚಥುರ್ವೇದಿ ” ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದರೂ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸೈಬರ್ ವಿಭಾಗ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಪಿಐಬಿ ತಂಡ ಇದನ್ನು ಏನಾದರು ಫ್ಯಾಕ್ಟ್‌ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತದಾ? ಎಂದು ಪ್ರಶ್ನಿಸಿದ್ದಾರೆ.

@MrSinha ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಯುವಸೇನೆ ಅಧ್ಯಕ್ಷ ಆದಿತ್ಯ ಠಾಕ್ರೆ “ನಿಮ್ಮ ಮತಕ್ಕಾಗಿ ಮಹಾರಾಷ್ಟ್ರದಲ್ಲಿ ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ” ಎಂದಿದ್ದಾರೆ.

ಒಟ್ಟಿನಲ್ಲಿ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...