Homeಫ್ಯಾಕ್ಟ್‌ಚೆಕ್FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ...

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

- Advertisement -
- Advertisement -

ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡನೆಗೆ ಮುಂದಾಗಿರುವ ನಡುವೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ, ಸಂಘ ಪರಿವಾರ ಮತ್ತು ಅದರ ಮಿತ್ರ ಪಕ್ಷಗಳು ರೈತರು, ದೇವಸ್ಥಾನಗಳು, ಮಠಗಳು, ಸರ್ಕಾರಿ ಶಾಲಾ-ಕಾಲೇಜುಗಳು ಸೇರಿದಂತೆ ಹಲವರ ಜಮೀನುಗಳನ್ನು ವಕ್ಫ್‌ ಬೋರ್ಡ್ ಕಬಳಿಸುತ್ತಿದೆ ಎಂಬ ಆರೋಪ ಮಾಡಿದೆ.

ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್ ರೈತರ ಜಮೀನುಗಳನ್ನು ತನ್ನದೆಂದು ಹೇಳುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಒಂದು ತಿಂಗಳು ಬಿಜೆಪಿ ಮತ್ತು ಸಂಘ ಪರಿವಾರ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದ್ದಿತ್ತು. ಕೊನೆಗೆ ಸರ್ಕಾರ ಯಾವುದೇ ರೈತರಿಗೆ ವಕ್ಫ್‌ ಭೂಮಿ ಸಂಬಂಧ ನೋಟಿಸ್ ನೀಡುವುದಿಲ್ಲ. ಕೊಟ್ಟ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ ಬಳಿಕ, ಈಗ ವಿಷಯ ಸ್ವಲ್ಪ ತಣ್ಣಗಾಗಿದೆ.

ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲ ಸುದ್ದಿ ವಾಹಿನಿಗಳಲ್ಲಿ ಅಲ್ಲಲ್ಲಿ ವಕ್ಫ್‌ ಬೋರ್ಡ್ ಜಮೀನು ಸಂಬಂಧ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಈಗಲೂ ಹಂಚಲಾಗುತ್ತಿದೆ. ಇದರ ಭಾಗವಾಗಿ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹಬ್ಬಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಇಂದು (ನ.20) ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹರಿದಾಡುತ್ತಿರುವುದು ಗಮನಾರ್ಹ

ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ನವೆಂಬರ್ 19ರಂದು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು “ವಕ್ಫ್‌ ಬೋರ್ಡ್ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನ ತನ್ನದೆಂದು ಹೇಳಿದೆ. ಅದಕ್ಕೆ ಯುಬಿಟಿ (ಶಿವಸೇನೆ ಉದ್ದವ್ ಠಾಕ್ರೆ ಬಣ) ಮತ್ತು ಕಾಂಗ್ರೆಸ್‌ ಬೇಡ ಎಂಬುವುದಾಗಿ ಹೇಳುತ್ತಿರುವುದು” ಎಂದು ಬರೆದುಕೊಂಡಿದ್ದರು. ನಿತೇಶ್ ರಾಣೆ ಹಂಚಿಕೊಂಡಿದ್ದ ಫೋಟೋ ಮೇಲೆ ‘ಸಕಾಲ್’ ಎಂಬ ಲೋಗೋ ಇತ್ತು.

सनातनी Rinki (@rynkee) ಎಂಬ ಎಕ್ಸ್‌ ಬಳಕೆದಾರರು ನವೆಂಬರ್ 18ರಂದು ಸಕಾಲ್ ಲೋಗೋ ಇರುವ ಅದೇ ಪೋಟೋವನ್ನು ಹಂಚಿಕೊಂಡು “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನೂ ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. ಎಂವಿಎ ಉಲಮಾ ಮಂಡಳಿಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಪ್ರೀತಿಯ ಹಿಂದೂಗಳೇ..ನಿಮಗೆ ಕ್ರೊನೋಲಜಿ ಅರ್ಥವಾಗಿರಬಹುದು. ಬಟೇಂಗೆ ತೊ ಕಟೇಂಗೆ, ಏಕೆ ಹೈ ತೋ ಸೇಫ್‌ ಹೈ, ಮಹಾಯುತಿ ಏಕೈಕ ಆಯ್ಕೆ” ಎಂದು ಬರೆದುಕೊಂಡಿದ್ದರು.

Kreately.in ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ” ಎಂದು ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು.

ಈ ಪೋಸ್ಟರ್‌ ಅನ್ನು ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ @MrSinha ಹಂಚಿಕೊಂಡು “ಸಾಕೆಂದರೆ, ಸಾಕು. ಅವರು ಕೈ ಮೀರುತ್ತಿದ್ದಾರೆ, ಅವರನ್ನು ನಿಲ್ಲಿಸಬೇಕಾಗಿದೆ” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ‘ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ಕಬಳಿಸಿದೆ’ ಎಂಬರ್ಥ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಈ ಕುರಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಹಲವರು ಪೋಸ್ಟರ್ ಹಂಚಿಕೊಂಡಿರುವ ಸಕಾಲ್ ನ್ಯೂಸ್ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ”ನಾವು ಈ ರೀತಿಯ ಗ್ರಾಫಿಕ್ಸ್ ಹಂಚಿಕೊಂಡಿಲ್ಲ. ಯಾರೋ ನಮ್ಮ ಲೋಗೋ ಬಳಸಿಕೊಂಡು, ನಮ್ಮದೇ ಶೈಲಿಯಲ್ಲಿ ಗ್ರಾಫಿಕ್ಸ್ ಮಾಡಿದ್ದಾರೆ” ಎಂದು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ.

ಅಲ್ಲದೆ, ಸಕಾಲ್ ನ್ಯೂಸ್ ತಮ್ಮ ಹೆಸರಿನಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿರುವ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿಯನ್ನೂ ಬರೆದಿದೆ. ಅದರಲ್ಲಿ, ತಮ್ಮ ಅಸಲಿ ಪೋಸ್ಟರ್ ಮತ್ತು ನಕಲಿ ಪೋಸ್ಟರ್ ನಡುವಿನ ವ್ಯತ್ಯಾಸಗಳನ್ನು ತಿಳಿಸುವ ಕೆಲ ಅಂಶಗಳನ್ನು ಎತ್ತಿ ತೋರಿಸಿದೆ. ಅವುಗಳ ಹೀಗಿವೆ..

1. ಸಕಾಲ್ ನ್ಯೂಸ್ ತನ್ನ ಪೋಸ್ಟರ್‌ನಲ್ಲಿ ಸಂಪೂರ್ಣ ಫೋಟೋವನ್ನು ಬಳಸುತ್ತದೆ ಮತ್ತು ಕೆಳಗಿನ ಟೆಕ್ಸ್ಟ್‌ ಅನ್ನು ಎಡದಿಂದ ಹಾಕುತ್ತದೆ. ಆದರೆ, ನಕಲಿ ಪೋಸ್ಟರ್‌ನಲ್ಲಿ ಅರ್ಧ ಫೋಟೋವನ್ನು ಬಳಸಲಾಗಿದೆ ಮತ್ತು ಟೆಕ್ಸ್ಟ್ ಅನ್ನು ಮಧ್ಯದಲ್ಲಿ ಹಾಕಲಾಗಿದೆ.

2. ಸಕಾಲ್ ನ್ಯೂಸ್ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟರ್‌ ಮಾಡಿದ್ದರೆ, ಅದನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳುತ್ತಿತ್ತು. ಆದರೆ, ಸಕಾಲ್ ನ್ಯೂಸ್ ಎಲ್ಲೂ ವೈರಲ್ ಪೋಸ್ಟರ್‌ ಅನ್ನು ಎಲ್ಲೂ ಹಂಚಿಕೊಂಡಿಲ್ಲ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ಮುಂಬೈ ಸಿದ್ಧಿವಿನಾಯಕ ದೇವಸ್ಥಾನದ ಕೋಶಾಧಿಕಾರಿ ಹಾಗೂ ಬಿಜೆಪಿ ಮುಂಬೈನ ಉಪಾಧ್ಯಕ್ಷ ಪವನ್ ತ್ರಿಪಾಠಿ, ವಕ್ಫ್‌ ಬೋರ್ಡ್ ದೇವಸ್ಥಾನದ ಮೇಲೆ ಹಕ್ಕು ಸ್ಥಾಪಿಸಿದೆ ಎಂಬುವುದನ್ನು ಅಲ್ಲಗಳೆದಿದ್ದಾರೆ. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನವು ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಪ್ರಪಂಚದಾದ್ಯಂತ ವಾಸಿಸುವ ಎಲ್ಲಾ ಸನಾತನಿಗಳಲ್ಲಿ ಇದರ ಬಗ್ಗೆ ಅಪಾರ ಗೌರವ ಇದೆ. ಆದ್ದರಿಂದ ಸಿದ್ಧಿವಿನಾಯಕ ದೇವಸ್ಥಾನವನ್ನು ಯಾವುದೇ ಮಂಡಳಿ ಅಥವಾ ಸಂಸ್ಥೆ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಗಣೇಶನ ಭಕ್ತರಿಗೆ ಸೇರಿದ್ದು ಮತ್ತು ಅವರಿಗಾಗಿ ಸದಾ ಉಳಿಯುತ್ತದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖವಾಣಿ ಆರ್ಗನೈಸರ್ ಪವನ್ ತ್ರಿಪಾಠಿ ಅವರ ಹೇಳಿಕೆ ಕುರಿತು ಸುದ್ದಿ ಪ್ರಕಟಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ಮುಂಬೈ ಜಿಲ್ಲಾ ವಕ್ಫ್ ಅಧಿಕಾರಿಯನ್ನು ಸಂಪರ್ಕಿಸಿ ವೈರಲ್ ಸುದ್ದಿಯ ಕುರಿತು ಮಾಹಿತಿ ಕೇಳಿದ್ದು, ಅವರು “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಬಲಪಂಥೀಯ ಎಕ್ಸ್‌ ಬಳಕೆದಾರ @MrSinha ಹಂಚಿಕೊಂಡಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚಥುರ್ವೇದಿ ” ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದರೂ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸೈಬರ್ ವಿಭಾಗ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಪಿಐಬಿ ತಂಡ ಇದನ್ನು ಏನಾದರು ಫ್ಯಾಕ್ಟ್‌ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತದಾ? ಎಂದು ಪ್ರಶ್ನಿಸಿದ್ದಾರೆ.

@MrSinha ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಯುವಸೇನೆ ಅಧ್ಯಕ್ಷ ಆದಿತ್ಯ ಠಾಕ್ರೆ “ನಿಮ್ಮ ಮತಕ್ಕಾಗಿ ಮಹಾರಾಷ್ಟ್ರದಲ್ಲಿ ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ” ಎಂದಿದ್ದಾರೆ.

ಒಟ್ಟಿನಲ್ಲಿ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...