Homeಫ್ಯಾಕ್ಟ್‌ಚೆಕ್FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ...

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

- Advertisement -
- Advertisement -

ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ಮಂಡನೆಗೆ ಮುಂದಾಗಿರುವ ನಡುವೆ ದೇಶದ ವಿವಿಧ ಭಾಗಗಳಲ್ಲಿ ಬಿಜೆಪಿ, ಸಂಘ ಪರಿವಾರ ಮತ್ತು ಅದರ ಮಿತ್ರ ಪಕ್ಷಗಳು ರೈತರು, ದೇವಸ್ಥಾನಗಳು, ಮಠಗಳು, ಸರ್ಕಾರಿ ಶಾಲಾ-ಕಾಲೇಜುಗಳು ಸೇರಿದಂತೆ ಹಲವರ ಜಮೀನುಗಳನ್ನು ವಕ್ಫ್‌ ಬೋರ್ಡ್ ಕಬಳಿಸುತ್ತಿದೆ ಎಂಬ ಆರೋಪ ಮಾಡಿದೆ.

ಕರ್ನಾಟಕದಲ್ಲಿ ವಕ್ಫ್‌ ಬೋರ್ಡ್ ರೈತರ ಜಮೀನುಗಳನ್ನು ತನ್ನದೆಂದು ಹೇಳುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಕಳೆದ ಒಂದು ತಿಂಗಳು ಬಿಜೆಪಿ ಮತ್ತು ಸಂಘ ಪರಿವಾರ ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದ್ದಿತ್ತು. ಕೊನೆಗೆ ಸರ್ಕಾರ ಯಾವುದೇ ರೈತರಿಗೆ ವಕ್ಫ್‌ ಭೂಮಿ ಸಂಬಂಧ ನೋಟಿಸ್ ನೀಡುವುದಿಲ್ಲ. ಕೊಟ್ಟ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ ಬಳಿಕ, ಈಗ ವಿಷಯ ಸ್ವಲ್ಪ ತಣ್ಣಗಾಗಿದೆ.

ಪ್ರತಿದಿನ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲ ಸುದ್ದಿ ವಾಹಿನಿಗಳಲ್ಲಿ ಅಲ್ಲಲ್ಲಿ ವಕ್ಫ್‌ ಬೋರ್ಡ್ ಜಮೀನು ಸಂಬಂಧ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಈಗಲೂ ಹಂಚಲಾಗುತ್ತಿದೆ. ಇದರ ಭಾಗವಾಗಿ ಮುಂಬೈನ ಪ್ರಸಿದ್ದ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹಬ್ಬಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಇಂದು (ನ.20) ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಿದ್ದಿ ವಿನಾಯಕ ದೇವಸ್ಥಾನದ ಜಾಗವನ್ನು ವಕ್ಫ್‌ ತನ್ನದೆಂದು ಹೇಳಿರುವುದಾಗಿ ಸುದ್ದಿ ಹರಿದಾಡುತ್ತಿರುವುದು ಗಮನಾರ್ಹ

ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ನವೆಂಬರ್ 19ರಂದು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡು “ವಕ್ಫ್‌ ಬೋರ್ಡ್ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನ ತನ್ನದೆಂದು ಹೇಳಿದೆ. ಅದಕ್ಕೆ ಯುಬಿಟಿ (ಶಿವಸೇನೆ ಉದ್ದವ್ ಠಾಕ್ರೆ ಬಣ) ಮತ್ತು ಕಾಂಗ್ರೆಸ್‌ ಬೇಡ ಎಂಬುವುದಾಗಿ ಹೇಳುತ್ತಿರುವುದು” ಎಂದು ಬರೆದುಕೊಂಡಿದ್ದರು. ನಿತೇಶ್ ರಾಣೆ ಹಂಚಿಕೊಂಡಿದ್ದ ಫೋಟೋ ಮೇಲೆ ‘ಸಕಾಲ್’ ಎಂಬ ಲೋಗೋ ಇತ್ತು.

सनातनी Rinki (@rynkee) ಎಂಬ ಎಕ್ಸ್‌ ಬಳಕೆದಾರರು ನವೆಂಬರ್ 18ರಂದು ಸಕಾಲ್ ಲೋಗೋ ಇರುವ ಅದೇ ಪೋಟೋವನ್ನು ಹಂಚಿಕೊಂಡು “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನೂ ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ. ಎಂವಿಎ ಉಲಮಾ ಮಂಡಳಿಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಪ್ರೀತಿಯ ಹಿಂದೂಗಳೇ..ನಿಮಗೆ ಕ್ರೊನೋಲಜಿ ಅರ್ಥವಾಗಿರಬಹುದು. ಬಟೇಂಗೆ ತೊ ಕಟೇಂಗೆ, ಏಕೆ ಹೈ ತೋ ಸೇಫ್‌ ಹೈ, ಮಹಾಯುತಿ ಏಕೈಕ ಆಯ್ಕೆ” ಎಂದು ಬರೆದುಕೊಂಡಿದ್ದರು.

Kreately.in ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ “ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ” ಎಂದು ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು.

ಈ ಪೋಸ್ಟರ್‌ ಅನ್ನು ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ @MrSinha ಹಂಚಿಕೊಂಡು “ಸಾಕೆಂದರೆ, ಸಾಕು. ಅವರು ಕೈ ಮೀರುತ್ತಿದ್ದಾರೆ, ಅವರನ್ನು ನಿಲ್ಲಿಸಬೇಕಾಗಿದೆ” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ‘ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ಕಬಳಿಸಿದೆ’ ಎಂಬರ್ಥ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಈ ಕುರಿತ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಹಲವರು ಪೋಸ್ಟರ್ ಹಂಚಿಕೊಂಡಿರುವ ಸಕಾಲ್ ನ್ಯೂಸ್ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ”ನಾವು ಈ ರೀತಿಯ ಗ್ರಾಫಿಕ್ಸ್ ಹಂಚಿಕೊಂಡಿಲ್ಲ. ಯಾರೋ ನಮ್ಮ ಲೋಗೋ ಬಳಸಿಕೊಂಡು, ನಮ್ಮದೇ ಶೈಲಿಯಲ್ಲಿ ಗ್ರಾಫಿಕ್ಸ್ ಮಾಡಿದ್ದಾರೆ” ಎಂದು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ.

ಅಲ್ಲದೆ, ಸಕಾಲ್ ನ್ಯೂಸ್ ತಮ್ಮ ಹೆಸರಿನಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿರುವ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿಯನ್ನೂ ಬರೆದಿದೆ. ಅದರಲ್ಲಿ, ತಮ್ಮ ಅಸಲಿ ಪೋಸ್ಟರ್ ಮತ್ತು ನಕಲಿ ಪೋಸ್ಟರ್ ನಡುವಿನ ವ್ಯತ್ಯಾಸಗಳನ್ನು ತಿಳಿಸುವ ಕೆಲ ಅಂಶಗಳನ್ನು ಎತ್ತಿ ತೋರಿಸಿದೆ. ಅವುಗಳ ಹೀಗಿವೆ..

1. ಸಕಾಲ್ ನ್ಯೂಸ್ ತನ್ನ ಪೋಸ್ಟರ್‌ನಲ್ಲಿ ಸಂಪೂರ್ಣ ಫೋಟೋವನ್ನು ಬಳಸುತ್ತದೆ ಮತ್ತು ಕೆಳಗಿನ ಟೆಕ್ಸ್ಟ್‌ ಅನ್ನು ಎಡದಿಂದ ಹಾಕುತ್ತದೆ. ಆದರೆ, ನಕಲಿ ಪೋಸ್ಟರ್‌ನಲ್ಲಿ ಅರ್ಧ ಫೋಟೋವನ್ನು ಬಳಸಲಾಗಿದೆ ಮತ್ತು ಟೆಕ್ಸ್ಟ್ ಅನ್ನು ಮಧ್ಯದಲ್ಲಿ ಹಾಕಲಾಗಿದೆ.

2. ಸಕಾಲ್ ನ್ಯೂಸ್ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟರ್‌ ಮಾಡಿದ್ದರೆ, ಅದನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳುತ್ತಿತ್ತು. ಆದರೆ, ಸಕಾಲ್ ನ್ಯೂಸ್ ಎಲ್ಲೂ ವೈರಲ್ ಪೋಸ್ಟರ್‌ ಅನ್ನು ಎಲ್ಲೂ ಹಂಚಿಕೊಂಡಿಲ್ಲ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ಮುಂಬೈ ಸಿದ್ಧಿವಿನಾಯಕ ದೇವಸ್ಥಾನದ ಕೋಶಾಧಿಕಾರಿ ಹಾಗೂ ಬಿಜೆಪಿ ಮುಂಬೈನ ಉಪಾಧ್ಯಕ್ಷ ಪವನ್ ತ್ರಿಪಾಠಿ, ವಕ್ಫ್‌ ಬೋರ್ಡ್ ದೇವಸ್ಥಾನದ ಮೇಲೆ ಹಕ್ಕು ಸ್ಥಾಪಿಸಿದೆ ಎಂಬುವುದನ್ನು ಅಲ್ಲಗಳೆದಿದ್ದಾರೆ. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನವು ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ. ಪ್ರಪಂಚದಾದ್ಯಂತ ವಾಸಿಸುವ ಎಲ್ಲಾ ಸನಾತನಿಗಳಲ್ಲಿ ಇದರ ಬಗ್ಗೆ ಅಪಾರ ಗೌರವ ಇದೆ. ಆದ್ದರಿಂದ ಸಿದ್ಧಿವಿನಾಯಕ ದೇವಸ್ಥಾನವನ್ನು ಯಾವುದೇ ಮಂಡಳಿ ಅಥವಾ ಸಂಸ್ಥೆ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಗಣೇಶನ ಭಕ್ತರಿಗೆ ಸೇರಿದ್ದು ಮತ್ತು ಅವರಿಗಾಗಿ ಸದಾ ಉಳಿಯುತ್ತದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖವಾಣಿ ಆರ್ಗನೈಸರ್ ಪವನ್ ತ್ರಿಪಾಠಿ ಅವರ ಹೇಳಿಕೆ ಕುರಿತು ಸುದ್ದಿ ಪ್ರಕಟಿಸಿದೆ.

ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ಮುಂಬೈ ಜಿಲ್ಲಾ ವಕ್ಫ್ ಅಧಿಕಾರಿಯನ್ನು ಸಂಪರ್ಕಿಸಿ ವೈರಲ್ ಸುದ್ದಿಯ ಕುರಿತು ಮಾಹಿತಿ ಕೇಳಿದ್ದು, ಅವರು “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ.

ವೈರಲ್ ಸುದ್ದಿಗೆ ಸಂಬಂಧಿಸಿದಂತೆ ಬಲಪಂಥೀಯ ಎಕ್ಸ್‌ ಬಳಕೆದಾರ @MrSinha ಹಂಚಿಕೊಂಡಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚಥುರ್ವೇದಿ ” ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದರೂ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಸೈಬರ್ ವಿಭಾಗ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಪಿಐಬಿ ತಂಡ ಇದನ್ನು ಏನಾದರು ಫ್ಯಾಕ್ಟ್‌ಚೆಕ್ ಮಾಡಿ ಕ್ರಮ ಕೈಗೊಳ್ಳುತ್ತದಾ? ಎಂದು ಪ್ರಶ್ನಿಸಿದ್ದಾರೆ.

@MrSinha ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಯುವಸೇನೆ ಅಧ್ಯಕ್ಷ ಆದಿತ್ಯ ಠಾಕ್ರೆ “ನಿಮ್ಮ ಮತಕ್ಕಾಗಿ ಮಹಾರಾಷ್ಟ್ರದಲ್ಲಿ ನಮ್ಮ ಭಾವನೆಗಳೊಂದಿಗೆ ಆಟವಾಡಬೇಡಿ” ಎಂದಿದ್ದಾರೆ.

ಒಟ್ಟಿನಲ್ಲಿ ಮುಂಬೈನ ಸಿದ್ದಿ ವಿನಾಯಕ ದೇವಸ್ಥಾನವನ್ನು ವಕ್ಫ್‌ ಬೋರ್ಡ್ ತನ್ನದೆಂದು ಹೇಳಿಕೊಂಡಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...