Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲಿಯತ್ತೇನು?

FACT CHECK : ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲಿಯತ್ತೇನು?

- Advertisement -
- Advertisement -

“ಭಾರತದ ಉತ್ತರ ಪ್ರದೇಶ, ಬಂಗಾಲ, ಕೇರಳ, ಹೈದರಾಬಾದ, ಆಸ್ಸಾಮ ರಾಜ್ಯಗಳಲ್ಲಿ ನಾವು ಮುಸಲ್ಮಾನರು ಬಹುಸಂಖ್ಯಾಕರಾಗಿದ್ದೇವೆ. ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ. ಆದ್ದರಿಂದ ಹಿಂದೂಗಳು ಈ ಪ್ರದೇಶವನ್ನು ತಕ್ಷಣ ಖಾಲಿ ಮಾಡಬೇಕು. ಇಲ್ಲವಾದರೆ ಕಾಶ್ಮೀರದಲ್ಲಿ ಪಂಡಿತರಿಗೆ ನಾವು ಏನು ಮಾಡಿದೆವೊ ಅದನ್ನು ಇಲ್ಲಿಯೂ ಅನುಸರಿಸುತ್ತೇವೆ.”ಮೌಲಾನಾ ಸೈಯ್ಯದ ಅಹ್ಮದ ಬುಖಾರಿ ಶಾಹಿ ಇಮಾಮ ಜುಮ್ಮಾ ಮಸೀದಿ, ದೆಹಲಿ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದೆ. ಪೋಸ್ಟ್‌ನಲ್ಲಿ ಬುಖಾರಿ ಅವರ ಫೋಟೋದೊಂದಿಗೆ ಹಿಂದಿಯಲ್ಲಿ ಬರೆದಿರುವ ಬ್ಯಾನರ್ ಅನ್ನು ಲಗತ್ತಿಸಲಾಗಿದೆ.

ಆ ಪೋಸ್ಟ್‌ನ ಸತ್ಯಾಸತ್ಯತೆ ಏನು ಎಂದು ನೋಡೋಣ

ಫ್ಯಾಕ್ಟ್‌ಚೆಕ್  : ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಲಗತ್ತಿಸಿರುವ ಬ್ಯಾನರ್ ಕುರಿತು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ವರ್ಲ್ಡ್ ವಿನ್ನರ್ ಟೈಮ್ಸ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಆಗಸ್ಟ್ 13, 2021ರಂದು ಅಪ್ಲೋಡ್ ಮಾಡಲಾದ ವಿಡಿಯೋವೊಂದರಲ್ಲಿ ವೈರಲ್ ಪೋಸ್ಟರ್ ಕಂಡು ಬಂದಿದೆ.

ವಿಡಿಯೋದಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ವೈರಲ್ ಬ್ಯಾನರ್ ಮೊಹರಂಗೆ ಮೊದಲು ಉತ್ತರಪ್ರದೇಶದ  ಪ್ರತಾಪ್ ಗಢ ಜಿಲ್ಲೆಯಲ್ಲಿ ಹಾಕಲಾಗಿತ್ತು. ಮಾಹಿತಿ ಬಂದ ಕೂಡಲೇ ಪೊಲೀಸರು ಕ್ರಮ ಕೈಗೊಂಡು ಎಲ್ಲಾ ಬ್ಯಾನರ್ ಗಳನ್ನು ತೆಗೆದು ಹಾಕಿದ್ದರು.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ ವೈರಲ್ ಬ್ಯಾನರ್ ಕುರಿತು ಕೆಲ ವರದಿಗಳು ಲಭ್ಯವಾಗಿದೆ. ಆ ವರದಿಗಳ ಪ್ರಕಾರ,  ಪ್ರತಾಪ್ ಗಢ ಶಾಸಕ ರಾಜಾ ಭೈಯಾಗೆ ಸೇರಿದ ಶಾಲೆಯ ಗೋಡೆಯ ಮೇಲೆ ಬ್ಯಾನರ್ ಗಳು ಕಂಡು ಬಂದಿವೆ. ಅದನ್ನು ನೋಡಿದ ಸ್ಥಳೀಯರು ಆಕ್ರೋಶಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ನಂತರ ಪೊಲೀಸರು ಬ್ಯಾನರ್ ಗಳನ್ನು ತೆರವು ಮಾಡಿಸಿದ್ದಾರೆ ಎಂದು ಲೈವ್ ಹಿಂದೂಸ್ತಾನ್  ಮತ್ತು  ದೈನಿಕ್ ಜಾಗರಣ್  ವರದಿಯನ್ನು ಪ್ರಕಟಿಸಿದ್ದವು.

ಇನ್ನು ಇದೇ ವಿಷಯದ ಕುರಿತು ಆಗಸ್ಟ್ 12, 2021ರಂದು ಪ್ರತಾಪ್ ಗಢ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದರು. ಅದರಲ್ಲಿ ಪ್ರತಾಪ್ ಗಢದ ಕುಂಡಾದಲ್ಲಿ ದುಷ್ಕರ್ಮಿಗಳು ವಿವಾದಾತ್ಮಕ ಬ್ಯಾನರ್ ಗಳನ್ನು ಹಾಕಿದ್ದರು. ಆ ಬಗ್ಗೆ ಮಾಹಿತಿ ಬಂದ ತಕ್ಷಣ, ಅದನ್ನು ತೆರವುಗೊಳಿಸಿ ಅಪರಿಚಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.

ವೈರಲ್ ಬ್ಯಾನರ್ ನಲ್ಲಿ ವಿವಾದಾತ್ಮಕ ಹೇಳಿಕೆ ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಅಹ್ಮದ್ ಬುಖಾರಿಯವರ ಹೆಸರಿನಲ್ಲಿರುವುದರಿಂದ ಅವರು ಆ ರೀತಿಯ ಹೇಳಿಕೆ ನೀಡಿದ್ದಾರೆಯೇ? ಎಂದು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ಕುರಿತು ಯಾವುದೇ ವರದಿಗಳು ನಮಗೆ ಲಭ್ಯವಾಗಿಲ್ಲ.

ಬ್ಯಾನರ್ ನಲ್ಲಿ ಮುಸ್ಲಿಂ ಜನಸಂಖ್ಯೆಯ ಕುರಿತು ಉಲ್ಲೇಖಿಸಿರುವುದರಿಂದ, ನಾವು ಆ ಬಗ್ಗೆ ಮಾಹಿತಿ ಹುಡುಕಿದ್ದೇವೆ. 2011ರ ಜನಗಣತಿಯ ಪ್ರಕಾರ ಹಿಂದೂ-ಮುಸ್ಲಿಂ ಜನಸಂಖ್ಯೆಯನ್ನು ಪರಿಶೀಲಿಸಿದಾಗ, ಉತ್ತರ ಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ಹೈದರಾಬಾದ್ ಮತ್ತು ಅಸ್ಸಾಂನಲ್ಲಿ ಹಿಂದೂ ಜನಸಂಖ್ಯೆಯೇ ಬಹುಸಂಖ್ಯಾತವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಬ್ಯಾನರ್ ನಲ್ಲಿ ‘ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ’ ಎಂದಿದೆ. ಆದರೆ, ಇದು ಶುದ್ದ ಸುಳ್ಳು. ಇಸ್ಲಾಂ ಧರ್ಮದಲ್ಲಿ ಆ ರೀತಿಯ ಪ್ರತಿಪಾದನೆಯಿಲ್ಲ. ಭಾರತ ದೇಶದಾದ್ಯಂತ ಮತ್ತು ಇತರ ರಾಷ್ಟ್ರಗಳಲ್ಲಿಯೂ ಮುಸ್ಲಿಮರು ಹಿಂದೂ, ಕ್ರೈಸ್ತ, ಬೌದ್ದ, ಸಿಖ್, ಜೈನ, ಪಾರ್ಸಿ, ಯಹೂದಿ ಧರ್ಮೀಯರೊಂದಿಗೆ ಬಹಳ ಅನ್ಯೋನ್ಯತೆಯಿಂದ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ, ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ತಕ್ಷಣ ಜಾಗ ಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್‌ ಮೌಲಾನಾ ಸೈಯದ್‌ ಅಹ್ಮದ್‌ ಬುಖಾರಿ ಹೇಳಿದ್ದಾರೆ ಎಂಬ ಹೇಳಿಕೆ ನಕಲಿಯಾಗಿದ್ದು, ಇದು 2021ರಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇಂತಹ ಬ್ಯಾನರ್ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...