Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲಿಯತ್ತೇನು?

FACT CHECK : ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲಿಯತ್ತೇನು?

- Advertisement -
- Advertisement -

“ಭಾರತದ ಉತ್ತರ ಪ್ರದೇಶ, ಬಂಗಾಲ, ಕೇರಳ, ಹೈದರಾಬಾದ, ಆಸ್ಸಾಮ ರಾಜ್ಯಗಳಲ್ಲಿ ನಾವು ಮುಸಲ್ಮಾನರು ಬಹುಸಂಖ್ಯಾಕರಾಗಿದ್ದೇವೆ. ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ. ಆದ್ದರಿಂದ ಹಿಂದೂಗಳು ಈ ಪ್ರದೇಶವನ್ನು ತಕ್ಷಣ ಖಾಲಿ ಮಾಡಬೇಕು. ಇಲ್ಲವಾದರೆ ಕಾಶ್ಮೀರದಲ್ಲಿ ಪಂಡಿತರಿಗೆ ನಾವು ಏನು ಮಾಡಿದೆವೊ ಅದನ್ನು ಇಲ್ಲಿಯೂ ಅನುಸರಿಸುತ್ತೇವೆ.”ಮೌಲಾನಾ ಸೈಯ್ಯದ ಅಹ್ಮದ ಬುಖಾರಿ ಶಾಹಿ ಇಮಾಮ ಜುಮ್ಮಾ ಮಸೀದಿ, ದೆಹಲಿ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದೆ. ಪೋಸ್ಟ್‌ನಲ್ಲಿ ಬುಖಾರಿ ಅವರ ಫೋಟೋದೊಂದಿಗೆ ಹಿಂದಿಯಲ್ಲಿ ಬರೆದಿರುವ ಬ್ಯಾನರ್ ಅನ್ನು ಲಗತ್ತಿಸಲಾಗಿದೆ.

ಆ ಪೋಸ್ಟ್‌ನ ಸತ್ಯಾಸತ್ಯತೆ ಏನು ಎಂದು ನೋಡೋಣ

ಫ್ಯಾಕ್ಟ್‌ಚೆಕ್  : ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಲಗತ್ತಿಸಿರುವ ಬ್ಯಾನರ್ ಕುರಿತು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ವರ್ಲ್ಡ್ ವಿನ್ನರ್ ಟೈಮ್ಸ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಆಗಸ್ಟ್ 13, 2021ರಂದು ಅಪ್ಲೋಡ್ ಮಾಡಲಾದ ವಿಡಿಯೋವೊಂದರಲ್ಲಿ ವೈರಲ್ ಪೋಸ್ಟರ್ ಕಂಡು ಬಂದಿದೆ.

ವಿಡಿಯೋದಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ವೈರಲ್ ಬ್ಯಾನರ್ ಮೊಹರಂಗೆ ಮೊದಲು ಉತ್ತರಪ್ರದೇಶದ  ಪ್ರತಾಪ್ ಗಢ ಜಿಲ್ಲೆಯಲ್ಲಿ ಹಾಕಲಾಗಿತ್ತು. ಮಾಹಿತಿ ಬಂದ ಕೂಡಲೇ ಪೊಲೀಸರು ಕ್ರಮ ಕೈಗೊಂಡು ಎಲ್ಲಾ ಬ್ಯಾನರ್ ಗಳನ್ನು ತೆಗೆದು ಹಾಕಿದ್ದರು.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ ವೈರಲ್ ಬ್ಯಾನರ್ ಕುರಿತು ಕೆಲ ವರದಿಗಳು ಲಭ್ಯವಾಗಿದೆ. ಆ ವರದಿಗಳ ಪ್ರಕಾರ,  ಪ್ರತಾಪ್ ಗಢ ಶಾಸಕ ರಾಜಾ ಭೈಯಾಗೆ ಸೇರಿದ ಶಾಲೆಯ ಗೋಡೆಯ ಮೇಲೆ ಬ್ಯಾನರ್ ಗಳು ಕಂಡು ಬಂದಿವೆ. ಅದನ್ನು ನೋಡಿದ ಸ್ಥಳೀಯರು ಆಕ್ರೋಶಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ನಂತರ ಪೊಲೀಸರು ಬ್ಯಾನರ್ ಗಳನ್ನು ತೆರವು ಮಾಡಿಸಿದ್ದಾರೆ ಎಂದು ಲೈವ್ ಹಿಂದೂಸ್ತಾನ್  ಮತ್ತು  ದೈನಿಕ್ ಜಾಗರಣ್  ವರದಿಯನ್ನು ಪ್ರಕಟಿಸಿದ್ದವು.

ಇನ್ನು ಇದೇ ವಿಷಯದ ಕುರಿತು ಆಗಸ್ಟ್ 12, 2021ರಂದು ಪ್ರತಾಪ್ ಗಢ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದರು. ಅದರಲ್ಲಿ ಪ್ರತಾಪ್ ಗಢದ ಕುಂಡಾದಲ್ಲಿ ದುಷ್ಕರ್ಮಿಗಳು ವಿವಾದಾತ್ಮಕ ಬ್ಯಾನರ್ ಗಳನ್ನು ಹಾಕಿದ್ದರು. ಆ ಬಗ್ಗೆ ಮಾಹಿತಿ ಬಂದ ತಕ್ಷಣ, ಅದನ್ನು ತೆರವುಗೊಳಿಸಿ ಅಪರಿಚಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.

ವೈರಲ್ ಬ್ಯಾನರ್ ನಲ್ಲಿ ವಿವಾದಾತ್ಮಕ ಹೇಳಿಕೆ ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಅಹ್ಮದ್ ಬುಖಾರಿಯವರ ಹೆಸರಿನಲ್ಲಿರುವುದರಿಂದ ಅವರು ಆ ರೀತಿಯ ಹೇಳಿಕೆ ನೀಡಿದ್ದಾರೆಯೇ? ಎಂದು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ಕುರಿತು ಯಾವುದೇ ವರದಿಗಳು ನಮಗೆ ಲಭ್ಯವಾಗಿಲ್ಲ.

ಬ್ಯಾನರ್ ನಲ್ಲಿ ಮುಸ್ಲಿಂ ಜನಸಂಖ್ಯೆಯ ಕುರಿತು ಉಲ್ಲೇಖಿಸಿರುವುದರಿಂದ, ನಾವು ಆ ಬಗ್ಗೆ ಮಾಹಿತಿ ಹುಡುಕಿದ್ದೇವೆ. 2011ರ ಜನಗಣತಿಯ ಪ್ರಕಾರ ಹಿಂದೂ-ಮುಸ್ಲಿಂ ಜನಸಂಖ್ಯೆಯನ್ನು ಪರಿಶೀಲಿಸಿದಾಗ, ಉತ್ತರ ಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ಹೈದರಾಬಾದ್ ಮತ್ತು ಅಸ್ಸಾಂನಲ್ಲಿ ಹಿಂದೂ ಜನಸಂಖ್ಯೆಯೇ ಬಹುಸಂಖ್ಯಾತವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಬ್ಯಾನರ್ ನಲ್ಲಿ ‘ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ’ ಎಂದಿದೆ. ಆದರೆ, ಇದು ಶುದ್ದ ಸುಳ್ಳು. ಇಸ್ಲಾಂ ಧರ್ಮದಲ್ಲಿ ಆ ರೀತಿಯ ಪ್ರತಿಪಾದನೆಯಿಲ್ಲ. ಭಾರತ ದೇಶದಾದ್ಯಂತ ಮತ್ತು ಇತರ ರಾಷ್ಟ್ರಗಳಲ್ಲಿಯೂ ಮುಸ್ಲಿಮರು ಹಿಂದೂ, ಕ್ರೈಸ್ತ, ಬೌದ್ದ, ಸಿಖ್, ಜೈನ, ಪಾರ್ಸಿ, ಯಹೂದಿ ಧರ್ಮೀಯರೊಂದಿಗೆ ಬಹಳ ಅನ್ಯೋನ್ಯತೆಯಿಂದ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ, ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ತಕ್ಷಣ ಜಾಗ ಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್‌ ಮೌಲಾನಾ ಸೈಯದ್‌ ಅಹ್ಮದ್‌ ಬುಖಾರಿ ಹೇಳಿದ್ದಾರೆ ಎಂಬ ಹೇಳಿಕೆ ನಕಲಿಯಾಗಿದ್ದು, ಇದು 2021ರಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇಂತಹ ಬ್ಯಾನರ್ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...