Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲಿಯತ್ತೇನು?

FACT CHECK : ಮುಸ್ಲಿಮರು ಹೆಚ್ಚಿರುವ ಪ್ರದೇಶದಿಂದ ಹಿಂದೂಗಳು ಜಾಗ ಖಾಲಿ ಮಾಡಬೇಕೆಂಬ ಬ್ಯಾನರ್‌ನ ಅಸಲಿಯತ್ತೇನು?

- Advertisement -
- Advertisement -

“ಭಾರತದ ಉತ್ತರ ಪ್ರದೇಶ, ಬಂಗಾಲ, ಕೇರಳ, ಹೈದರಾಬಾದ, ಆಸ್ಸಾಮ ರಾಜ್ಯಗಳಲ್ಲಿ ನಾವು ಮುಸಲ್ಮಾನರು ಬಹುಸಂಖ್ಯಾಕರಾಗಿದ್ದೇವೆ. ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ. ಆದ್ದರಿಂದ ಹಿಂದೂಗಳು ಈ ಪ್ರದೇಶವನ್ನು ತಕ್ಷಣ ಖಾಲಿ ಮಾಡಬೇಕು. ಇಲ್ಲವಾದರೆ ಕಾಶ್ಮೀರದಲ್ಲಿ ಪಂಡಿತರಿಗೆ ನಾವು ಏನು ಮಾಡಿದೆವೊ ಅದನ್ನು ಇಲ್ಲಿಯೂ ಅನುಸರಿಸುತ್ತೇವೆ.”ಮೌಲಾನಾ ಸೈಯ್ಯದ ಅಹ್ಮದ ಬುಖಾರಿ ಶಾಹಿ ಇಮಾಮ ಜುಮ್ಮಾ ಮಸೀದಿ, ದೆಹಲಿ” ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದೆ. ಪೋಸ್ಟ್‌ನಲ್ಲಿ ಬುಖಾರಿ ಅವರ ಫೋಟೋದೊಂದಿಗೆ ಹಿಂದಿಯಲ್ಲಿ ಬರೆದಿರುವ ಬ್ಯಾನರ್ ಅನ್ನು ಲಗತ್ತಿಸಲಾಗಿದೆ.

ಆ ಪೋಸ್ಟ್‌ನ ಸತ್ಯಾಸತ್ಯತೆ ಏನು ಎಂದು ನೋಡೋಣ

ಫ್ಯಾಕ್ಟ್‌ಚೆಕ್  : ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಲಗತ್ತಿಸಿರುವ ಬ್ಯಾನರ್ ಕುರಿತು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ವರ್ಲ್ಡ್ ವಿನ್ನರ್ ಟೈಮ್ಸ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಆಗಸ್ಟ್ 13, 2021ರಂದು ಅಪ್ಲೋಡ್ ಮಾಡಲಾದ ವಿಡಿಯೋವೊಂದರಲ್ಲಿ ವೈರಲ್ ಪೋಸ್ಟರ್ ಕಂಡು ಬಂದಿದೆ.

ವಿಡಿಯೋದಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ವೈರಲ್ ಬ್ಯಾನರ್ ಮೊಹರಂಗೆ ಮೊದಲು ಉತ್ತರಪ್ರದೇಶದ  ಪ್ರತಾಪ್ ಗಢ ಜಿಲ್ಲೆಯಲ್ಲಿ ಹಾಕಲಾಗಿತ್ತು. ಮಾಹಿತಿ ಬಂದ ಕೂಡಲೇ ಪೊಲೀಸರು ಕ್ರಮ ಕೈಗೊಂಡು ಎಲ್ಲಾ ಬ್ಯಾನರ್ ಗಳನ್ನು ತೆಗೆದು ಹಾಕಿದ್ದರು.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ ವೈರಲ್ ಬ್ಯಾನರ್ ಕುರಿತು ಕೆಲ ವರದಿಗಳು ಲಭ್ಯವಾಗಿದೆ. ಆ ವರದಿಗಳ ಪ್ರಕಾರ,  ಪ್ರತಾಪ್ ಗಢ ಶಾಸಕ ರಾಜಾ ಭೈಯಾಗೆ ಸೇರಿದ ಶಾಲೆಯ ಗೋಡೆಯ ಮೇಲೆ ಬ್ಯಾನರ್ ಗಳು ಕಂಡು ಬಂದಿವೆ. ಅದನ್ನು ನೋಡಿದ ಸ್ಥಳೀಯರು ಆಕ್ರೋಶಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ನಂತರ ಪೊಲೀಸರು ಬ್ಯಾನರ್ ಗಳನ್ನು ತೆರವು ಮಾಡಿಸಿದ್ದಾರೆ ಎಂದು ಲೈವ್ ಹಿಂದೂಸ್ತಾನ್  ಮತ್ತು  ದೈನಿಕ್ ಜಾಗರಣ್  ವರದಿಯನ್ನು ಪ್ರಕಟಿಸಿದ್ದವು.

ಇನ್ನು ಇದೇ ವಿಷಯದ ಕುರಿತು ಆಗಸ್ಟ್ 12, 2021ರಂದು ಪ್ರತಾಪ್ ಗಢ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದರು. ಅದರಲ್ಲಿ ಪ್ರತಾಪ್ ಗಢದ ಕುಂಡಾದಲ್ಲಿ ದುಷ್ಕರ್ಮಿಗಳು ವಿವಾದಾತ್ಮಕ ಬ್ಯಾನರ್ ಗಳನ್ನು ಹಾಕಿದ್ದರು. ಆ ಬಗ್ಗೆ ಮಾಹಿತಿ ಬಂದ ತಕ್ಷಣ, ಅದನ್ನು ತೆರವುಗೊಳಿಸಿ ಅಪರಿಚಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.

ವೈರಲ್ ಬ್ಯಾನರ್ ನಲ್ಲಿ ವಿವಾದಾತ್ಮಕ ಹೇಳಿಕೆ ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ಅಹ್ಮದ್ ಬುಖಾರಿಯವರ ಹೆಸರಿನಲ್ಲಿರುವುದರಿಂದ ಅವರು ಆ ರೀತಿಯ ಹೇಳಿಕೆ ನೀಡಿದ್ದಾರೆಯೇ? ಎಂದು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ಕುರಿತು ಯಾವುದೇ ವರದಿಗಳು ನಮಗೆ ಲಭ್ಯವಾಗಿಲ್ಲ.

ಬ್ಯಾನರ್ ನಲ್ಲಿ ಮುಸ್ಲಿಂ ಜನಸಂಖ್ಯೆಯ ಕುರಿತು ಉಲ್ಲೇಖಿಸಿರುವುದರಿಂದ, ನಾವು ಆ ಬಗ್ಗೆ ಮಾಹಿತಿ ಹುಡುಕಿದ್ದೇವೆ. 2011ರ ಜನಗಣತಿಯ ಪ್ರಕಾರ ಹಿಂದೂ-ಮುಸ್ಲಿಂ ಜನಸಂಖ್ಯೆಯನ್ನು ಪರಿಶೀಲಿಸಿದಾಗ, ಉತ್ತರ ಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ಹೈದರಾಬಾದ್ ಮತ್ತು ಅಸ್ಸಾಂನಲ್ಲಿ ಹಿಂದೂ ಜನಸಂಖ್ಯೆಯೇ ಬಹುಸಂಖ್ಯಾತವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ.

ಬ್ಯಾನರ್ ನಲ್ಲಿ ‘ಇಸ್ಲಾಂ ಪ್ರಕಾರ ಮುಸ್ಲಿಂ ಬಾಹುಳ್ಯವಿರುವ ಪ್ರದೇಶಗಳಲ್ಲಿ ಮುಸ್ಲಿಮೇತರರು ವಾಸ ಮಾಡುವುದನ್ನು ಹರಾಮ್ ಎಂದು ಹೇಳಲಾಗಿದೆ’ ಎಂದಿದೆ. ಆದರೆ, ಇದು ಶುದ್ದ ಸುಳ್ಳು. ಇಸ್ಲಾಂ ಧರ್ಮದಲ್ಲಿ ಆ ರೀತಿಯ ಪ್ರತಿಪಾದನೆಯಿಲ್ಲ. ಭಾರತ ದೇಶದಾದ್ಯಂತ ಮತ್ತು ಇತರ ರಾಷ್ಟ್ರಗಳಲ್ಲಿಯೂ ಮುಸ್ಲಿಮರು ಹಿಂದೂ, ಕ್ರೈಸ್ತ, ಬೌದ್ದ, ಸಿಖ್, ಜೈನ, ಪಾರ್ಸಿ, ಯಹೂದಿ ಧರ್ಮೀಯರೊಂದಿಗೆ ಬಹಳ ಅನ್ಯೋನ್ಯತೆಯಿಂದ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ, ಮುಸ್ಲಿಮರು ಬಹುಸಂಖ್ಯಾತರಾಗಿರುವ ಜಾಗದಿಂದ ಹಿಂದೂಗಳು ತಕ್ಷಣ ಜಾಗ ಖಾಲಿ ಮಾಡಬೇಕು ಎಂದು ದೆಹಲಿಯ ಜಾಮಾ ಮಸೀದಿಯ ಶಾಹಿ ಇಮಾಮ್‌ ಮೌಲಾನಾ ಸೈಯದ್‌ ಅಹ್ಮದ್‌ ಬುಖಾರಿ ಹೇಳಿದ್ದಾರೆ ಎಂಬ ಹೇಳಿಕೆ ನಕಲಿಯಾಗಿದ್ದು, ಇದು 2021ರಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇಂತಹ ಬ್ಯಾನರ್ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...