Homeಫ್ಯಾಕ್ಟ್‌ಚೆಕ್FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಶಾಲಾ ವಿದ್ಯಾರ್ಥಿಗಳ ಅಸಹಜ ವರ್ತನೆಯನ್ನು ಪ್ರದರ್ಶಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಅಸಹಜವಾಗಿ ವರ್ತಿಸುತ್ತಿರುವ ವಿದ್ಯಾರ್ಥಿಗಳನ್ನು ಕಂಡ ಶಾಲಾ ಸಿಬ್ಬಂದಿ ಮತ್ತು ಇತರ ವಿದ್ಯಾರ್ಥಿಗಳು ಭಯಭೀತರಾಗಿದ್ದು, ನೆಲದಲ್ಲಿ ಬಿದ್ದು ಒದ್ದಾಡುತ್ತಾ, ಕೂಗುತ್ತಾ ಅಸಹಜವಾಗಿ ವರ್ತಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಒಂದು ಕಾಲದಲ್ಲಿ ಈ ಶಾಲೆಯನ್ನು ಕೋವಿಡ್-19 ಶವಗಳ ಶೇಖರಣಾ ಸ್ಥಳವಾಗಿ ಬಳಸಲಾಗುತ್ತಿತ್ತು ಮತ್ತು ಶಾಲೆಯ ಸಮೀಪದಲ್ಲಿ ಸ್ಮಶಾನವಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದ ಶಾಲೆಯೊಂದರಲ್ಲಿ  ಶಾಲಾ ಮಕ್ಕಳು ಅಸಹಜವಾಗಿ ವರ್ತಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. COVID-19 ರ ಸಂದರ್ಭದಲ್ಲಿ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿದ್ದು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಅದರ ಕೆಲವು ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜೂನ್ 2024 ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ವಿಡಿಯೋಗಳು ಲಭ್ಯವಾಗಿದ್ದು,  ವೈರಲ್  ದೃಶ್ಯಗಲೊಂದಿಗೆ ಹೋಲಿಕೆಯಾಗಿದೆ. (ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು)  ಈ ಪೋಸ್ಟ್‌ಗಳ ಪ್ರಕಾರ, ಬೈತಾಡಿಯ ಸಿಗಾಸ್‌ನಲ್ಲಿರುವ ಭುವನೇಶ್ವರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮೇಲಿನ ಸುಳಿವನ್ನು ಆಧಾರವಾಗಿಟ್ಟುಕೊಂಡು ಕೀವರ್ಡ್ ವರ್ಡ್ ಸರ್ಚ್ ಮಾಡಿದಾಗ,  ವೈರಲ್ ವಿಡಿಯೋದಲ್ಲಿರುವ ದೃಶ್ಯಗಳನ್ನು ಒಳಗೊಂಡ ಸುದ್ದಿ ವರದಿಗಳು ಲಭ್ಯವಾಗಿದೆ.

ನೇಪಾಳದ ಈ ಸುದ್ದಿ ವರದಿಗಳ ಪ್ರಕಾರ, ಈ ಘಟನೆಯು ನೇಪಾಳದ ಬೈತಾಡಿ, ಸಿಗಾಸ್ ಗ್ರಾಮೀಣ ಪುರಸಭೆ -5 ರ ಭುವನೇಶ್ವರಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ಸಂಭವಿಸಿದಾಗ ವಿದ್ಯಾರ್ಥಿಗಳು ಸಾಮೂಹಿಕ ಹಿಸ್ಟೀರಿಯಾ ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದರು ಎಂದು ವರದಿಯಾಗಿದೆ.

ಮಾಸ್‌ ಹಿಸ್ಟೀರಿಯಾ (ಇಲ್ಲಿ ಮತ್ತು ಇಲ್ಲಿ) ಒಂದು ಮಾನಸಿಕ ಸಾಮಾಜಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರಲ್ಲಿ ಜನರ ಗುಂಪು ‘ಅಸಹಜ ಮತ್ತು ಅಸಾಧಾರಣ ನಡವಳಿಕೆಗಳು, ಆಲೋಚನೆಗಳು ಮತ್ತು ಭಾವನೆಗಳು ಅಥವಾ ಆರೋಗ್ಯ ಲಕ್ಷಣಗಳ’  ಅನುಭವವನ್ನು ಹೊಂದಿದೆ.

ಭುವನೇಶ್ವರಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇಂತಹ ಸಮಸ್ಯೆ ಹೆಣ್ಣುಮಕ್ಕಳಲ್ಲಿ ಬಹಳ ದಿನಗಳಿಂದ (ಇದನ್ನು ಓದಿ) ಕಂಡುಬಬರುತ್ತಿದ್ದು, ಅವರ ಓದಿನ ಮೇಲೆ ಪರಿಣಾಮ ಬೀರಿದೆ. ಕೆಲವು ಹುಡುಗಿಯರು ಹಠಾತ್ತಾಗಿ ನೆಲದ ಮೇಲೆ ಬಿದ್ದು ಹೊರಳಾಡುವುದು, ಕಿರುಚಾಡುವುದು, ಇತ್ಯಾದಿ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹದಿಹರೆಯದ ಹುಡುಗಿಯರಲ್ಲಿ ಇಂತಹ ವರ್ತನೆಗಳು ಕಂಡುಬರುತ್ತಿರುವುದರಿಂದ ಶಾಲೆಯ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಆಶಾ ವ್ಯಾಪ್ತಿಯಲ್ಲಿ ಸ್ಮಶಾನ ಅಥವಾ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿ ಎಂಬುದನ್ನು ಯಾವ ಮಾಧ್ಯಮಗಳು ವರದಿ ಮಾಡಿಲ್ಲ ಅಥವಾ ಉಲ್ಲೇಖಿಸಿಲ್ಲ. ಗೂಗಲ್ ಮ್ಯಾಪ್‌ನಲ್ಲಿ ಶಾಲೆಯ ಸ್ಥಳವನ್ನು ಸರ್ಚ್ ಮಾಡಿದಾಗ, ಶಾಲೆಯ ಮೇಲ್ಛಾವಣಿಯ ಬಣ್ಣಗಳು ವೈರಲ್ ವೀಡಿಯೊದಲ್ಲಿ ಕಂಡುಬರುವ ಬಣ್ಣಕ್ಕೆ ಹೊಂದಿಕೆಯಾಗಿರುವುದನ್ನು ಕಂಡುಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ನೇಪಾಳದ ಬೈತಾಡಿಯ ಸಿಗಾಸ್‌ನ ಭುವನೇಶ್ವರಿ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ವಿಡಿಯೋವನ್ನು ಆಂಧ್ರಪ್ರದೇಶದ ಶಾಲಾ ಮಕ್ಕಳು ಅಸಹಜ ನಡವಳಿಕೆಯನ್ನು ಪ್ರದರ್ಶಿಸುವ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...