Homeಫ್ಯಾಕ್ಟ್‌ಚೆಕ್FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಶಾಲಾ ವಿದ್ಯಾರ್ಥಿಗಳ ಅಸಹಜ ವರ್ತನೆಯನ್ನು ಪ್ರದರ್ಶಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಅಸಹಜವಾಗಿ ವರ್ತಿಸುತ್ತಿರುವ ವಿದ್ಯಾರ್ಥಿಗಳನ್ನು ಕಂಡ ಶಾಲಾ ಸಿಬ್ಬಂದಿ ಮತ್ತು ಇತರ ವಿದ್ಯಾರ್ಥಿಗಳು ಭಯಭೀತರಾಗಿದ್ದು, ನೆಲದಲ್ಲಿ ಬಿದ್ದು ಒದ್ದಾಡುತ್ತಾ, ಕೂಗುತ್ತಾ ಅಸಹಜವಾಗಿ ವರ್ತಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಒಂದು ಕಾಲದಲ್ಲಿ ಈ ಶಾಲೆಯನ್ನು ಕೋವಿಡ್-19 ಶವಗಳ ಶೇಖರಣಾ ಸ್ಥಳವಾಗಿ ಬಳಸಲಾಗುತ್ತಿತ್ತು ಮತ್ತು ಶಾಲೆಯ ಸಮೀಪದಲ್ಲಿ ಸ್ಮಶಾನವಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದ ಶಾಲೆಯೊಂದರಲ್ಲಿ  ಶಾಲಾ ಮಕ್ಕಳು ಅಸಹಜವಾಗಿ ವರ್ತಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. COVID-19 ರ ಸಂದರ್ಭದಲ್ಲಿ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿದ್ದು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಅದರ ಕೆಲವು ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜೂನ್ 2024 ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ವಿಡಿಯೋಗಳು ಲಭ್ಯವಾಗಿದ್ದು,  ವೈರಲ್  ದೃಶ್ಯಗಲೊಂದಿಗೆ ಹೋಲಿಕೆಯಾಗಿದೆ. (ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು)  ಈ ಪೋಸ್ಟ್‌ಗಳ ಪ್ರಕಾರ, ಬೈತಾಡಿಯ ಸಿಗಾಸ್‌ನಲ್ಲಿರುವ ಭುವನೇಶ್ವರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮೇಲಿನ ಸುಳಿವನ್ನು ಆಧಾರವಾಗಿಟ್ಟುಕೊಂಡು ಕೀವರ್ಡ್ ವರ್ಡ್ ಸರ್ಚ್ ಮಾಡಿದಾಗ,  ವೈರಲ್ ವಿಡಿಯೋದಲ್ಲಿರುವ ದೃಶ್ಯಗಳನ್ನು ಒಳಗೊಂಡ ಸುದ್ದಿ ವರದಿಗಳು ಲಭ್ಯವಾಗಿದೆ.

ನೇಪಾಳದ ಈ ಸುದ್ದಿ ವರದಿಗಳ ಪ್ರಕಾರ, ಈ ಘಟನೆಯು ನೇಪಾಳದ ಬೈತಾಡಿ, ಸಿಗಾಸ್ ಗ್ರಾಮೀಣ ಪುರಸಭೆ -5 ರ ಭುವನೇಶ್ವರಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ಸಂಭವಿಸಿದಾಗ ವಿದ್ಯಾರ್ಥಿಗಳು ಸಾಮೂಹಿಕ ಹಿಸ್ಟೀರಿಯಾ ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದರು ಎಂದು ವರದಿಯಾಗಿದೆ.

ಮಾಸ್‌ ಹಿಸ್ಟೀರಿಯಾ (ಇಲ್ಲಿ ಮತ್ತು ಇಲ್ಲಿ) ಒಂದು ಮಾನಸಿಕ ಸಾಮಾಜಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರಲ್ಲಿ ಜನರ ಗುಂಪು ‘ಅಸಹಜ ಮತ್ತು ಅಸಾಧಾರಣ ನಡವಳಿಕೆಗಳು, ಆಲೋಚನೆಗಳು ಮತ್ತು ಭಾವನೆಗಳು ಅಥವಾ ಆರೋಗ್ಯ ಲಕ್ಷಣಗಳ’  ಅನುಭವವನ್ನು ಹೊಂದಿದೆ.

ಭುವನೇಶ್ವರಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇಂತಹ ಸಮಸ್ಯೆ ಹೆಣ್ಣುಮಕ್ಕಳಲ್ಲಿ ಬಹಳ ದಿನಗಳಿಂದ (ಇದನ್ನು ಓದಿ) ಕಂಡುಬಬರುತ್ತಿದ್ದು, ಅವರ ಓದಿನ ಮೇಲೆ ಪರಿಣಾಮ ಬೀರಿದೆ. ಕೆಲವು ಹುಡುಗಿಯರು ಹಠಾತ್ತಾಗಿ ನೆಲದ ಮೇಲೆ ಬಿದ್ದು ಹೊರಳಾಡುವುದು, ಕಿರುಚಾಡುವುದು, ಇತ್ಯಾದಿ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹದಿಹರೆಯದ ಹುಡುಗಿಯರಲ್ಲಿ ಇಂತಹ ವರ್ತನೆಗಳು ಕಂಡುಬರುತ್ತಿರುವುದರಿಂದ ಶಾಲೆಯ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಆಶಾ ವ್ಯಾಪ್ತಿಯಲ್ಲಿ ಸ್ಮಶಾನ ಅಥವಾ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿ ಎಂಬುದನ್ನು ಯಾವ ಮಾಧ್ಯಮಗಳು ವರದಿ ಮಾಡಿಲ್ಲ ಅಥವಾ ಉಲ್ಲೇಖಿಸಿಲ್ಲ. ಗೂಗಲ್ ಮ್ಯಾಪ್‌ನಲ್ಲಿ ಶಾಲೆಯ ಸ್ಥಳವನ್ನು ಸರ್ಚ್ ಮಾಡಿದಾಗ, ಶಾಲೆಯ ಮೇಲ್ಛಾವಣಿಯ ಬಣ್ಣಗಳು ವೈರಲ್ ವೀಡಿಯೊದಲ್ಲಿ ಕಂಡುಬರುವ ಬಣ್ಣಕ್ಕೆ ಹೊಂದಿಕೆಯಾಗಿರುವುದನ್ನು ಕಂಡುಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ನೇಪಾಳದ ಬೈತಾಡಿಯ ಸಿಗಾಸ್‌ನ ಭುವನೇಶ್ವರಿ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ವಿಡಿಯೋವನ್ನು ಆಂಧ್ರಪ್ರದೇಶದ ಶಾಲಾ ಮಕ್ಕಳು ಅಸಹಜ ನಡವಳಿಕೆಯನ್ನು ಪ್ರದರ್ಶಿಸುವ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...