Homeಫ್ಯಾಕ್ಟ್‌ಚೆಕ್FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

FACT CHECK : ಆಂಧ್ರಪ್ರದೇಶದಲ್ಲಿ ಶಾಲಾ ಮಕ್ಕಳು ಅಸಹಜವಾಗಿ ವರ್ತಿಸಿರುವ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಶಾಲಾ ವಿದ್ಯಾರ್ಥಿಗಳ ಅಸಹಜ ವರ್ತನೆಯನ್ನು ಪ್ರದರ್ಶಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಅಸಹಜವಾಗಿ ವರ್ತಿಸುತ್ತಿರುವ ವಿದ್ಯಾರ್ಥಿಗಳನ್ನು ಕಂಡ ಶಾಲಾ ಸಿಬ್ಬಂದಿ ಮತ್ತು ಇತರ ವಿದ್ಯಾರ್ಥಿಗಳು ಭಯಭೀತರಾಗಿದ್ದು, ನೆಲದಲ್ಲಿ ಬಿದ್ದು ಒದ್ದಾಡುತ್ತಾ, ಕೂಗುತ್ತಾ ಅಸಹಜವಾಗಿ ವರ್ತಿಸುವುದನ್ನು ವಿಡಿಯೋದಲ್ಲಿ ನೋಡಬಹುದು. ಒಂದು ಕಾಲದಲ್ಲಿ ಈ ಶಾಲೆಯನ್ನು ಕೋವಿಡ್-19 ಶವಗಳ ಶೇಖರಣಾ ಸ್ಥಳವಾಗಿ ಬಳಸಲಾಗುತ್ತಿತ್ತು ಮತ್ತು ಶಾಲೆಯ ಸಮೀಪದಲ್ಲಿ ಸ್ಮಶಾನವಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶದ ಶಾಲೆಯೊಂದರಲ್ಲಿ  ಶಾಲಾ ಮಕ್ಕಳು ಅಸಹಜವಾಗಿ ವರ್ತಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. COVID-19 ರ ಸಂದರ್ಭದಲ್ಲಿ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿದ್ದು ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಅದರ ಕೆಲವು ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜೂನ್ 2024 ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ವಿಡಿಯೋಗಳು ಲಭ್ಯವಾಗಿದ್ದು,  ವೈರಲ್  ದೃಶ್ಯಗಲೊಂದಿಗೆ ಹೋಲಿಕೆಯಾಗಿದೆ. (ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು)  ಈ ಪೋಸ್ಟ್‌ಗಳ ಪ್ರಕಾರ, ಬೈತಾಡಿಯ ಸಿಗಾಸ್‌ನಲ್ಲಿರುವ ಭುವನೇಶ್ವರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮೇಲಿನ ಸುಳಿವನ್ನು ಆಧಾರವಾಗಿಟ್ಟುಕೊಂಡು ಕೀವರ್ಡ್ ವರ್ಡ್ ಸರ್ಚ್ ಮಾಡಿದಾಗ,  ವೈರಲ್ ವಿಡಿಯೋದಲ್ಲಿರುವ ದೃಶ್ಯಗಳನ್ನು ಒಳಗೊಂಡ ಸುದ್ದಿ ವರದಿಗಳು ಲಭ್ಯವಾಗಿದೆ.

ನೇಪಾಳದ ಈ ಸುದ್ದಿ ವರದಿಗಳ ಪ್ರಕಾರ, ಈ ಘಟನೆಯು ನೇಪಾಳದ ಬೈತಾಡಿ, ಸಿಗಾಸ್ ಗ್ರಾಮೀಣ ಪುರಸಭೆ -5 ರ ಭುವನೇಶ್ವರಿ ಶಾಲೆಯಲ್ಲಿ ನಡೆದಿದೆ. ಈ ಘಟನೆ ಸಂಭವಿಸಿದಾಗ ವಿದ್ಯಾರ್ಥಿಗಳು ಸಾಮೂಹಿಕ ಹಿಸ್ಟೀರಿಯಾ ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿದ್ದರು ಎಂದು ವರದಿಯಾಗಿದೆ.

ಮಾಸ್‌ ಹಿಸ್ಟೀರಿಯಾ (ಇಲ್ಲಿ ಮತ್ತು ಇಲ್ಲಿ) ಒಂದು ಮಾನಸಿಕ ಸಾಮಾಜಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರಲ್ಲಿ ಜನರ ಗುಂಪು ‘ಅಸಹಜ ಮತ್ತು ಅಸಾಧಾರಣ ನಡವಳಿಕೆಗಳು, ಆಲೋಚನೆಗಳು ಮತ್ತು ಭಾವನೆಗಳು ಅಥವಾ ಆರೋಗ್ಯ ಲಕ್ಷಣಗಳ’  ಅನುಭವವನ್ನು ಹೊಂದಿದೆ.

ಭುವನೇಶ್ವರಿ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇಂತಹ ಸಮಸ್ಯೆ ಹೆಣ್ಣುಮಕ್ಕಳಲ್ಲಿ ಬಹಳ ದಿನಗಳಿಂದ (ಇದನ್ನು ಓದಿ) ಕಂಡುಬಬರುತ್ತಿದ್ದು, ಅವರ ಓದಿನ ಮೇಲೆ ಪರಿಣಾಮ ಬೀರಿದೆ. ಕೆಲವು ಹುಡುಗಿಯರು ಹಠಾತ್ತಾಗಿ ನೆಲದ ಮೇಲೆ ಬಿದ್ದು ಹೊರಳಾಡುವುದು, ಕಿರುಚಾಡುವುದು, ಇತ್ಯಾದಿ ಲಕ್ಷಣಗಳನ್ನು ತೋರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹದಿಹರೆಯದ ಹುಡುಗಿಯರಲ್ಲಿ ಇಂತಹ ವರ್ತನೆಗಳು ಕಂಡುಬರುತ್ತಿರುವುದರಿಂದ ಶಾಲೆಯ ಪರಿಸರದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ಆಶಾ ವ್ಯಾಪ್ತಿಯಲ್ಲಿ ಸ್ಮಶಾನ ಅಥವಾ ಕೋವಿಡ್‌ನಿಂದ ಸಾವನಪ್ಪಿದ ಶವಗಳನ್ನು ಇರಿಸಲು ಈ ಶಾಲೆಯನ್ನು ಬಳಸಲಾಗುತ್ತಿ ಎಂಬುದನ್ನು ಯಾವ ಮಾಧ್ಯಮಗಳು ವರದಿ ಮಾಡಿಲ್ಲ ಅಥವಾ ಉಲ್ಲೇಖಿಸಿಲ್ಲ. ಗೂಗಲ್ ಮ್ಯಾಪ್‌ನಲ್ಲಿ ಶಾಲೆಯ ಸ್ಥಳವನ್ನು ಸರ್ಚ್ ಮಾಡಿದಾಗ, ಶಾಲೆಯ ಮೇಲ್ಛಾವಣಿಯ ಬಣ್ಣಗಳು ವೈರಲ್ ವೀಡಿಯೊದಲ್ಲಿ ಕಂಡುಬರುವ ಬಣ್ಣಕ್ಕೆ ಹೊಂದಿಕೆಯಾಗಿರುವುದನ್ನು ಕಂಡುಕೊಂಡಿದ್ದೇವೆ. ವೈರಲ್ ವಿಡಿಯೋವನ್ನು ನೇಪಾಳದ ಬೈತಾಡಿಯ ಸಿಗಾಸ್‌ನ ಭುವನೇಶ್ವರಿ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ವಿಡಿಯೋವನ್ನು ಆಂಧ್ರಪ್ರದೇಶದ ಶಾಲಾ ಮಕ್ಕಳು ಅಸಹಜ ನಡವಳಿಕೆಯನ್ನು ಪ್ರದರ್ಶಿಸುವ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...