Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ...ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದು ಮಧ್ಯಪ್ರದೇಶದಲ್ಲಿ ನಡೆದ ಘಟನೆ ಎಂದು ಈ ವಿಡಿಯೋ ಕುರಿತು ಕೆಲ ಮುಖ್ಯ ವಾಹಿನಿ ಮಾಧ್ಯಮಗಳು ಕೂಡ ಸುದ್ದಿ ಮಾಡಿವೆ. ಅನೇಕ ಪ್ರಮುಖ ವ್ಯಕ್ತಿಗಳೇ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಸಿಸಿಟಿವಿ ಕ್ಯಾಮಾರದಲ್ಲಿ ರೆಕಾರ್ಡ್ ಆದ ದೃಶ್ಯದಂತಿದೆ.

“ರಾಜು ಎಂಬ 52 ವರ್ಷದ ವ್ಯಕ್ತಿ ತಡರಾತ್ರಿ ಮದ್ಯಪಾನ ಮಾಡಿ, ಇಸ್ಪೀಟ್ ಆಡಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹರಡಿಕೊಂಡಿರುವ ಪೆಂಚ್ ಹುಲಿ ಅಭಯಾರಣ್ಯದಿಂದ ಅಲೆದಾಡುತ್ತಾ ಬಂದ ಹುಲಿ ರಸ್ತೆ ಮಧ್ಯೆ ಕುಳಿತಿತ್ತು. ಅದನ್ನು ದೊಡ್ಡ ಬೆಕ್ಕು ಎಂದುಕೊಂಡ ರಾಜು ತಲೆ ಸವರಿ ಮದ್ಯ ಕುಡಿಸಿದ್ದಾರೆ. ಕೊನೆಗೆ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹುಲಿಗೆ ಮದ್ಯ ಕುಡಿಸಿದ ರಾಜು ಸ್ಥಳೀಯ ಮಟ್ಟದಲ್ಲಿ ಹೀರೋ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವರು ಬರೆದುಕೊಂಡಿದ್ದಾರೆ.

@808constituent ಎಂಬ ಎಕ್ಸ್ ಬಳಕೆದಾರ ಅಕ್ಟೋಬರ್ 23, 2025ರಂದು ವೈರಲ್ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದರು. ಈ ವರದಿ ಬರೆಯುವ ಹೊತ್ತಿಗೆ ಆ ಪೋಸ್ಟ್ 68 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು. ಅವರು ಪೋಸ್ಟ್ ಮಾಡಿರುವ ವಿಡಿಯೋ ಈಗಲೂ ಎಕ್ಸ್‌ನಲ್ಲಿ ಇದೆ. ಎಕ್ಸ್‌ ಇದುವರೆಗೆ ವಿಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಸುದ್ದಿ ಪೋರ್ಟಲ್ ‘ಗ್ರೇಟರ್ ಆಂಧ್ರ ನ್ಯೂಸ್’ ಕೂಡ ಅಕ್ಟೋಬರ್ 29ರಂದು ವೈರಲ್ ವಿಡಿಯೋವನ್ನು ಹಂಚಿಕೊಂಡಿತ್ತು. ಇದೂ ಕೂಡ ಮಧ್ಯಪ್ರದೇಶದ ಪೆಂಚ್ ರಾಷ್ಟ್ರೀಯ ಉದ್ಯಾನವನದ ಸಿಸಿಟಿವಿ ದೃಶ್ಯ ಎಂದು ಹೇಳಿತ್ತು.

ರಿದ್ಧಿ ರಣಥಂಬೋರ್ ಸಫಾರಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವೈರಲ್ ಕ್ಲಿಪ್ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವುದರಿಂದ ನಾವು ಇದರ ಸತ್ಯಾಸತ್ಯತೆ ತಿಳಿಯಲು ಮುಂದಾದೆವು. ಮೊದಲು ನಾವು ಈ ವಿಡಿಯೋ ಕುರಿತು ಯಾವುದಾದರು ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯೇ ಎಂದು ಪರಿಶೀಲಿಸಿದೆವು.

ಈ ವೇಳೆ ಕೆಲ ಕನ್ನಡ ಮಾಧ್ಯಮಗಳ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ. ಇತರ ಭಾಷೆಗಳ ಮಾಧ್ಯಮಗಳ ಪೇಜ್‌ಗಳಲ್ಲೂ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಆದರೂ, ನಮಗೆ ಆ ಮಾಧ್ಯಮಗಳ ಸುದ್ದಿಯ ನಿಖರತೆಯ ಬಗ್ಗೆ ಅನುಮಾನ ಮೂಡಿತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಹುಡುಕಾಡಿದೆವು.

ಈ ವೇಳೆ ಆಲ್ಟ್ ನ್ಯೂಸ್, ಫ್ಯಾಕ್ಟ್‌ಲೀ ಸೇರಿದಂತೆ ಅನೇಕ ಫ್ಯಾಕ್ಟ್ ಚೆಕ್ ಸುದ್ದಿ ಸಂಸ್ಥೆಗಳು ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಲವಾರು ದೃಶ್ಯ ವ್ಯತ್ಯಾಸಗಳು ಕಂಡು ಬರುತ್ತವೆ. ಇದು ವಿಡಿಯೋವನ್ನು ಕೃತಕವಾಗಿ ರಚಿಸಿರುವುದನ್ನು ಸೂಚಿಸುತ್ತದೆ. ಉದಾಹರಣೆಗೆ : ಮನುಷ್ಯ ಹುಲಿಯನ್ನು ಮುದ್ದಿಸುತ್ತಿದ್ದಂತೆ, ಮದ್ಯದ ಬಾಟಲಿಯ ಕುತ್ತಿಗೆಯ ಗಾತ್ರ ಕಡಿಮೆಯಾಗುತ್ತದೆ ಮತ್ತು ನಂತರ ಅದರ ಮೂಲ ಗಾತ್ರಕ್ಕೆ ಮರಳುತ್ತದೆ. ಇದಲ್ಲದೆ, ಹಿಂದುಗಡೆ ಮನೆಯ ವರಾಂಡಾದಲ್ಲಿ ಕುಳಿತಿರುವ ಇಬ್ಬರು ವ್ಯಕ್ತಿಗಳ ಚಲನೆಯು ವಿರೂಪಗೊಂಡಂತೆ ಕಾಣುತ್ತದೆ. ಇದು ಕೃತಕವಾಗಿ ರಚಿಸಲಾದ ಕ್ಲಿಪ್‌ಗಳ ಮತ್ತೊಂದು ವಿಶಿಷ್ಟ ಲಕ್ಷಣವಾಗಿದೆ ಎಂದು ಅಲ್ಟ್‌ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆಯಲು ನಾವು ಪೆಂಚ್ ಹುಲಿ ಸಂರಕ್ಷಿತ ಅಭಯಾರಣ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಂಪರ್ಕಕ್ಕೆ ಅವರು ಸಿಕ್ಕಿಲ್ಲ. ಆದರೆ, ಅಕ್ಟೋಬರ್ 29ರಂದು ‘ದಿ ಸೂತ್ರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯಲ್ಲಿ, “ಮೀಸಲು ಅರಣ್ಯ ಪ್ರದೇಶದ ಉಪ ನಿರ್ದೇಶಕ ರಜನೀಶ್ ಸಿಂಗ್ ಅವರು ವೈರಲ್ ವಿಡಿಯೋ ಪೆಂಚ್ ಅಭಯಾರಣ್ಯದ ಪ್ರದೇಶದ್ದು ಎಂಬುವುದನ್ನು ತಳ್ಳಿ ಹಾಕಿದ್ದನ್ನು ಉಲ್ಲೇಖಿಸಲಾಗಿದೆ ಎಂದು ಆಲ್ಟ್ ನ್ಯೂಸ್ ಹೇಳಿದೆ.

ನಮಗೆ ಲಭ್ಯವಾದ ಮಾಹಿತಿ, ವಿಡಿಯೋದಲ್ಲಿ ಕಾಣುವ ಕೆಲ ಸೂಕ್ಷ ವ್ಯತ್ಯಾಸಗಳಿಂದ ವೈರಲ್ ವಿಡಿಯೋ ಕೃತಕ ಬುದ್ದಿಮತ್ತೆ (ಎಐ) ಮೂಲಕ ಸೃಷ್ಟಿಸಿದ್ದು ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇನೆ. ಅಲ್ಲದೆ, ಅಕ್ಟೋಬರ್ 4ರಂದು ಪೆಂಚ್ ಅರಣ್ಯದಿಂದ ಹುಲಿ ತಪ್ಪಿಸಿಕೊಂಡ ಬಗ್ಗೆ ಎಲ್ಲೂ ಅಧಿಕೃತ ವರದಿಯಾಗಿಲ್ಲ ಎಂದು ಅಲ್ಟ್ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ನಕಲಿ ಎಂದು ಪೆಂಚ್ ಟೈಗರ್ ರಿಸರ್ವ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂಬ ಭಾಸ್ಕರ್ ಇಂಗ್ಲಿಷ್ ವರದಿ ನಮಗೆ ಲಭ್ಯವಾಗಿದೆ ಎಂದು ಫ್ಯಾಕ್ಟ್‌ಚೆಕ್ ಸುದ್ದಿ ವೆಬ್‌ಸೈಟ್ ಫ್ಯಾಕ್ಟ್‌ಲೀ ಹೇಳಿದೆ.

ನಾವು ಪೆಂಚ್ ಹುಲಿ ಸಂರಕ್ಷಿತ ಪ್ರದೇಶದ ಉಪ ನಿರ್ದೇಶಕ ರಜನೀಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಅವರು ವೈರಲ್ ವಿಡಿಯೋ ನಕಲಿ ಎಂದು ದೃಢಪಡಿಸಿದ್ದಾರೆ. ಇತ್ತೀಚೆಗೆ ಹುಲಿಗೆ ಸಂಬಂಧಿಸಿದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ.

ಎಐ ವಿಷಯಗಳ ಪತ್ತೆ ಸಾಧನ ‘ಹೈವ್ ಮಾಡರೇಶನ್‌’ ಮೂಲಕ ನಾವು ವಿಡಿಯೋವನ್ನು ಪರಿಶೀಲಿಸಿದ್ದೇವೆ. ಅದು ವೈರಲ್ ವಿಡಿಯೋ ಶೇಕಡ 99ರಷ್ಟು ಎಐ ರಚಿತ ಎಂದು ಹೇಳಿದೆ. ವಿಡಿಯೋ ಕೃತವಾಗಿ ರಚಿತವಾಗಿದ್ದು ಎಂಬುವುದನ್ನು ಬಲವಾಗಿ ಹೇಳಿದೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ. ಹಾಗಾಗಿ, ವೈರಲ್ ವಿಡಿಯೋ ಎಐ ರಚಿತ ಎಂದಿದೆ.

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...