Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ...ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದು ಮಧ್ಯಪ್ರದೇಶದಲ್ಲಿ ನಡೆದ ಘಟನೆ ಎಂದು ಈ ವಿಡಿಯೋ ಕುರಿತು ಕೆಲ ಮುಖ್ಯ ವಾಹಿನಿ ಮಾಧ್ಯಮಗಳು ಕೂಡ ಸುದ್ದಿ ಮಾಡಿವೆ. ಅನೇಕ ಪ್ರಮುಖ ವ್ಯಕ್ತಿಗಳೇ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಸಿಸಿಟಿವಿ ಕ್ಯಾಮಾರದಲ್ಲಿ ರೆಕಾರ್ಡ್ ಆದ ದೃಶ್ಯದಂತಿದೆ.

“ರಾಜು ಎಂಬ 52 ವರ್ಷದ ವ್ಯಕ್ತಿ ತಡರಾತ್ರಿ ಮದ್ಯಪಾನ ಮಾಡಿ, ಇಸ್ಪೀಟ್ ಆಡಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹರಡಿಕೊಂಡಿರುವ ಪೆಂಚ್ ಹುಲಿ ಅಭಯಾರಣ್ಯದಿಂದ ಅಲೆದಾಡುತ್ತಾ ಬಂದ ಹುಲಿ ರಸ್ತೆ ಮಧ್ಯೆ ಕುಳಿತಿತ್ತು. ಅದನ್ನು ದೊಡ್ಡ ಬೆಕ್ಕು ಎಂದುಕೊಂಡ ರಾಜು ತಲೆ ಸವರಿ ಮದ್ಯ ಕುಡಿಸಿದ್ದಾರೆ. ಕೊನೆಗೆ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹುಲಿಗೆ ಮದ್ಯ ಕುಡಿಸಿದ ರಾಜು ಸ್ಥಳೀಯ ಮಟ್ಟದಲ್ಲಿ ಹೀರೋ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವರು ಬರೆದುಕೊಂಡಿದ್ದಾರೆ.

@808constituent ಎಂಬ ಎಕ್ಸ್ ಬಳಕೆದಾರ ಅಕ್ಟೋಬರ್ 23, 2025ರಂದು ವೈರಲ್ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದರು. ಈ ವರದಿ ಬರೆಯುವ ಹೊತ್ತಿಗೆ ಆ ಪೋಸ್ಟ್ 68 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು. ಅವರು ಪೋಸ್ಟ್ ಮಾಡಿರುವ ವಿಡಿಯೋ ಈಗಲೂ ಎಕ್ಸ್‌ನಲ್ಲಿ ಇದೆ. ಎಕ್ಸ್‌ ಇದುವರೆಗೆ ವಿಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಸುದ್ದಿ ಪೋರ್ಟಲ್ ‘ಗ್ರೇಟರ್ ಆಂಧ್ರ ನ್ಯೂಸ್’ ಕೂಡ ಅಕ್ಟೋಬರ್ 29ರಂದು ವೈರಲ್ ವಿಡಿಯೋವನ್ನು ಹಂಚಿಕೊಂಡಿತ್ತು. ಇದೂ ಕೂಡ ಮಧ್ಯಪ್ರದೇಶದ ಪೆಂಚ್ ರಾಷ್ಟ್ರೀಯ ಉದ್ಯಾನವನದ ಸಿಸಿಟಿವಿ ದೃಶ್ಯ ಎಂದು ಹೇಳಿತ್ತು.

ರಿದ್ಧಿ ರಣಥಂಬೋರ್ ಸಫಾರಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವೈರಲ್ ಕ್ಲಿಪ್ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವುದರಿಂದ ನಾವು ಇದರ ಸತ್ಯಾಸತ್ಯತೆ ತಿಳಿಯಲು ಮುಂದಾದೆವು. ಮೊದಲು ನಾವು ಈ ವಿಡಿಯೋ ಕುರಿತು ಯಾವುದಾದರು ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯೇ ಎಂದು ಪರಿಶೀಲಿಸಿದೆವು.

ಈ ವೇಳೆ ಕೆಲ ಕನ್ನಡ ಮಾಧ್ಯಮಗಳ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ. ಇತರ ಭಾಷೆಗಳ ಮಾಧ್ಯಮಗಳ ಪೇಜ್‌ಗಳಲ್ಲೂ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಆದರೂ, ನಮಗೆ ಆ ಮಾಧ್ಯಮಗಳ ಸುದ್ದಿಯ ನಿಖರತೆಯ ಬಗ್ಗೆ ಅನುಮಾನ ಮೂಡಿತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಹುಡುಕಾಡಿದೆವು.

ಈ ವೇಳೆ ಆಲ್ಟ್ ನ್ಯೂಸ್, ಫ್ಯಾಕ್ಟ್‌ಲೀ ಸೇರಿದಂತೆ ಅನೇಕ ಫ್ಯಾಕ್ಟ್ ಚೆಕ್ ಸುದ್ದಿ ಸಂಸ್ಥೆಗಳು ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಲವಾರು ದೃಶ್ಯ ವ್ಯತ್ಯಾಸಗಳು ಕಂಡು ಬರುತ್ತವೆ. ಇದು ವಿಡಿಯೋವನ್ನು ಕೃತಕವಾಗಿ ರಚಿಸಿರುವುದನ್ನು ಸೂಚಿಸುತ್ತದೆ. ಉದಾಹರಣೆಗೆ : ಮನುಷ್ಯ ಹುಲಿಯನ್ನು ಮುದ್ದಿಸುತ್ತಿದ್ದಂತೆ, ಮದ್ಯದ ಬಾಟಲಿಯ ಕುತ್ತಿಗೆಯ ಗಾತ್ರ ಕಡಿಮೆಯಾಗುತ್ತದೆ ಮತ್ತು ನಂತರ ಅದರ ಮೂಲ ಗಾತ್ರಕ್ಕೆ ಮರಳುತ್ತದೆ. ಇದಲ್ಲದೆ, ಹಿಂದುಗಡೆ ಮನೆಯ ವರಾಂಡಾದಲ್ಲಿ ಕುಳಿತಿರುವ ಇಬ್ಬರು ವ್ಯಕ್ತಿಗಳ ಚಲನೆಯು ವಿರೂಪಗೊಂಡಂತೆ ಕಾಣುತ್ತದೆ. ಇದು ಕೃತಕವಾಗಿ ರಚಿಸಲಾದ ಕ್ಲಿಪ್‌ಗಳ ಮತ್ತೊಂದು ವಿಶಿಷ್ಟ ಲಕ್ಷಣವಾಗಿದೆ ಎಂದು ಅಲ್ಟ್‌ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆಯಲು ನಾವು ಪೆಂಚ್ ಹುಲಿ ಸಂರಕ್ಷಿತ ಅಭಯಾರಣ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಂಪರ್ಕಕ್ಕೆ ಅವರು ಸಿಕ್ಕಿಲ್ಲ. ಆದರೆ, ಅಕ್ಟೋಬರ್ 29ರಂದು ‘ದಿ ಸೂತ್ರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯಲ್ಲಿ, “ಮೀಸಲು ಅರಣ್ಯ ಪ್ರದೇಶದ ಉಪ ನಿರ್ದೇಶಕ ರಜನೀಶ್ ಸಿಂಗ್ ಅವರು ವೈರಲ್ ವಿಡಿಯೋ ಪೆಂಚ್ ಅಭಯಾರಣ್ಯದ ಪ್ರದೇಶದ್ದು ಎಂಬುವುದನ್ನು ತಳ್ಳಿ ಹಾಕಿದ್ದನ್ನು ಉಲ್ಲೇಖಿಸಲಾಗಿದೆ ಎಂದು ಆಲ್ಟ್ ನ್ಯೂಸ್ ಹೇಳಿದೆ.

ನಮಗೆ ಲಭ್ಯವಾದ ಮಾಹಿತಿ, ವಿಡಿಯೋದಲ್ಲಿ ಕಾಣುವ ಕೆಲ ಸೂಕ್ಷ ವ್ಯತ್ಯಾಸಗಳಿಂದ ವೈರಲ್ ವಿಡಿಯೋ ಕೃತಕ ಬುದ್ದಿಮತ್ತೆ (ಎಐ) ಮೂಲಕ ಸೃಷ್ಟಿಸಿದ್ದು ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇನೆ. ಅಲ್ಲದೆ, ಅಕ್ಟೋಬರ್ 4ರಂದು ಪೆಂಚ್ ಅರಣ್ಯದಿಂದ ಹುಲಿ ತಪ್ಪಿಸಿಕೊಂಡ ಬಗ್ಗೆ ಎಲ್ಲೂ ಅಧಿಕೃತ ವರದಿಯಾಗಿಲ್ಲ ಎಂದು ಅಲ್ಟ್ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ನಕಲಿ ಎಂದು ಪೆಂಚ್ ಟೈಗರ್ ರಿಸರ್ವ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂಬ ಭಾಸ್ಕರ್ ಇಂಗ್ಲಿಷ್ ವರದಿ ನಮಗೆ ಲಭ್ಯವಾಗಿದೆ ಎಂದು ಫ್ಯಾಕ್ಟ್‌ಚೆಕ್ ಸುದ್ದಿ ವೆಬ್‌ಸೈಟ್ ಫ್ಯಾಕ್ಟ್‌ಲೀ ಹೇಳಿದೆ.

ನಾವು ಪೆಂಚ್ ಹುಲಿ ಸಂರಕ್ಷಿತ ಪ್ರದೇಶದ ಉಪ ನಿರ್ದೇಶಕ ರಜನೀಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಅವರು ವೈರಲ್ ವಿಡಿಯೋ ನಕಲಿ ಎಂದು ದೃಢಪಡಿಸಿದ್ದಾರೆ. ಇತ್ತೀಚೆಗೆ ಹುಲಿಗೆ ಸಂಬಂಧಿಸಿದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ.

ಎಐ ವಿಷಯಗಳ ಪತ್ತೆ ಸಾಧನ ‘ಹೈವ್ ಮಾಡರೇಶನ್‌’ ಮೂಲಕ ನಾವು ವಿಡಿಯೋವನ್ನು ಪರಿಶೀಲಿಸಿದ್ದೇವೆ. ಅದು ವೈರಲ್ ವಿಡಿಯೋ ಶೇಕಡ 99ರಷ್ಟು ಎಐ ರಚಿತ ಎಂದು ಹೇಳಿದೆ. ವಿಡಿಯೋ ಕೃತವಾಗಿ ರಚಿತವಾಗಿದ್ದು ಎಂಬುವುದನ್ನು ಬಲವಾಗಿ ಹೇಳಿದೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ. ಹಾಗಾಗಿ, ವೈರಲ್ ವಿಡಿಯೋ ಎಐ ರಚಿತ ಎಂದಿದೆ.

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...