Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ...ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದು ಮಧ್ಯಪ್ರದೇಶದಲ್ಲಿ ನಡೆದ ಘಟನೆ ಎಂದು ಈ ವಿಡಿಯೋ ಕುರಿತು ಕೆಲ ಮುಖ್ಯ ವಾಹಿನಿ ಮಾಧ್ಯಮಗಳು ಕೂಡ ಸುದ್ದಿ ಮಾಡಿವೆ. ಅನೇಕ ಪ್ರಮುಖ ವ್ಯಕ್ತಿಗಳೇ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಸಿಸಿಟಿವಿ ಕ್ಯಾಮಾರದಲ್ಲಿ ರೆಕಾರ್ಡ್ ಆದ ದೃಶ್ಯದಂತಿದೆ.

“ರಾಜು ಎಂಬ 52 ವರ್ಷದ ವ್ಯಕ್ತಿ ತಡರಾತ್ರಿ ಮದ್ಯಪಾನ ಮಾಡಿ, ಇಸ್ಪೀಟ್ ಆಡಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹರಡಿಕೊಂಡಿರುವ ಪೆಂಚ್ ಹುಲಿ ಅಭಯಾರಣ್ಯದಿಂದ ಅಲೆದಾಡುತ್ತಾ ಬಂದ ಹುಲಿ ರಸ್ತೆ ಮಧ್ಯೆ ಕುಳಿತಿತ್ತು. ಅದನ್ನು ದೊಡ್ಡ ಬೆಕ್ಕು ಎಂದುಕೊಂಡ ರಾಜು ತಲೆ ಸವರಿ ಮದ್ಯ ಕುಡಿಸಿದ್ದಾರೆ. ಕೊನೆಗೆ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹುಲಿಗೆ ಮದ್ಯ ಕುಡಿಸಿದ ರಾಜು ಸ್ಥಳೀಯ ಮಟ್ಟದಲ್ಲಿ ಹೀರೋ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವರು ಬರೆದುಕೊಂಡಿದ್ದಾರೆ.

@808constituent ಎಂಬ ಎಕ್ಸ್ ಬಳಕೆದಾರ ಅಕ್ಟೋಬರ್ 23, 2025ರಂದು ವೈರಲ್ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದರು. ಈ ವರದಿ ಬರೆಯುವ ಹೊತ್ತಿಗೆ ಆ ಪೋಸ್ಟ್ 68 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು. ಅವರು ಪೋಸ್ಟ್ ಮಾಡಿರುವ ವಿಡಿಯೋ ಈಗಲೂ ಎಕ್ಸ್‌ನಲ್ಲಿ ಇದೆ. ಎಕ್ಸ್‌ ಇದುವರೆಗೆ ವಿಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಸುದ್ದಿ ಪೋರ್ಟಲ್ ‘ಗ್ರೇಟರ್ ಆಂಧ್ರ ನ್ಯೂಸ್’ ಕೂಡ ಅಕ್ಟೋಬರ್ 29ರಂದು ವೈರಲ್ ವಿಡಿಯೋವನ್ನು ಹಂಚಿಕೊಂಡಿತ್ತು. ಇದೂ ಕೂಡ ಮಧ್ಯಪ್ರದೇಶದ ಪೆಂಚ್ ರಾಷ್ಟ್ರೀಯ ಉದ್ಯಾನವನದ ಸಿಸಿಟಿವಿ ದೃಶ್ಯ ಎಂದು ಹೇಳಿತ್ತು.

ರಿದ್ಧಿ ರಣಥಂಬೋರ್ ಸಫಾರಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವೈರಲ್ ಕ್ಲಿಪ್ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವುದರಿಂದ ನಾವು ಇದರ ಸತ್ಯಾಸತ್ಯತೆ ತಿಳಿಯಲು ಮುಂದಾದೆವು. ಮೊದಲು ನಾವು ಈ ವಿಡಿಯೋ ಕುರಿತು ಯಾವುದಾದರು ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯೇ ಎಂದು ಪರಿಶೀಲಿಸಿದೆವು.

ಈ ವೇಳೆ ಕೆಲ ಕನ್ನಡ ಮಾಧ್ಯಮಗಳ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ. ಇತರ ಭಾಷೆಗಳ ಮಾಧ್ಯಮಗಳ ಪೇಜ್‌ಗಳಲ್ಲೂ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಆದರೂ, ನಮಗೆ ಆ ಮಾಧ್ಯಮಗಳ ಸುದ್ದಿಯ ನಿಖರತೆಯ ಬಗ್ಗೆ ಅನುಮಾನ ಮೂಡಿತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಹುಡುಕಾಡಿದೆವು.

ಈ ವೇಳೆ ಆಲ್ಟ್ ನ್ಯೂಸ್, ಫ್ಯಾಕ್ಟ್‌ಲೀ ಸೇರಿದಂತೆ ಅನೇಕ ಫ್ಯಾಕ್ಟ್ ಚೆಕ್ ಸುದ್ದಿ ಸಂಸ್ಥೆಗಳು ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಲವಾರು ದೃಶ್ಯ ವ್ಯತ್ಯಾಸಗಳು ಕಂಡು ಬರುತ್ತವೆ. ಇದು ವಿಡಿಯೋವನ್ನು ಕೃತಕವಾಗಿ ರಚಿಸಿರುವುದನ್ನು ಸೂಚಿಸುತ್ತದೆ. ಉದಾಹರಣೆಗೆ : ಮನುಷ್ಯ ಹುಲಿಯನ್ನು ಮುದ್ದಿಸುತ್ತಿದ್ದಂತೆ, ಮದ್ಯದ ಬಾಟಲಿಯ ಕುತ್ತಿಗೆಯ ಗಾತ್ರ ಕಡಿಮೆಯಾಗುತ್ತದೆ ಮತ್ತು ನಂತರ ಅದರ ಮೂಲ ಗಾತ್ರಕ್ಕೆ ಮರಳುತ್ತದೆ. ಇದಲ್ಲದೆ, ಹಿಂದುಗಡೆ ಮನೆಯ ವರಾಂಡಾದಲ್ಲಿ ಕುಳಿತಿರುವ ಇಬ್ಬರು ವ್ಯಕ್ತಿಗಳ ಚಲನೆಯು ವಿರೂಪಗೊಂಡಂತೆ ಕಾಣುತ್ತದೆ. ಇದು ಕೃತಕವಾಗಿ ರಚಿಸಲಾದ ಕ್ಲಿಪ್‌ಗಳ ಮತ್ತೊಂದು ವಿಶಿಷ್ಟ ಲಕ್ಷಣವಾಗಿದೆ ಎಂದು ಅಲ್ಟ್‌ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆಯಲು ನಾವು ಪೆಂಚ್ ಹುಲಿ ಸಂರಕ್ಷಿತ ಅಭಯಾರಣ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಂಪರ್ಕಕ್ಕೆ ಅವರು ಸಿಕ್ಕಿಲ್ಲ. ಆದರೆ, ಅಕ್ಟೋಬರ್ 29ರಂದು ‘ದಿ ಸೂತ್ರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯಲ್ಲಿ, “ಮೀಸಲು ಅರಣ್ಯ ಪ್ರದೇಶದ ಉಪ ನಿರ್ದೇಶಕ ರಜನೀಶ್ ಸಿಂಗ್ ಅವರು ವೈರಲ್ ವಿಡಿಯೋ ಪೆಂಚ್ ಅಭಯಾರಣ್ಯದ ಪ್ರದೇಶದ್ದು ಎಂಬುವುದನ್ನು ತಳ್ಳಿ ಹಾಕಿದ್ದನ್ನು ಉಲ್ಲೇಖಿಸಲಾಗಿದೆ ಎಂದು ಆಲ್ಟ್ ನ್ಯೂಸ್ ಹೇಳಿದೆ.

ನಮಗೆ ಲಭ್ಯವಾದ ಮಾಹಿತಿ, ವಿಡಿಯೋದಲ್ಲಿ ಕಾಣುವ ಕೆಲ ಸೂಕ್ಷ ವ್ಯತ್ಯಾಸಗಳಿಂದ ವೈರಲ್ ವಿಡಿಯೋ ಕೃತಕ ಬುದ್ದಿಮತ್ತೆ (ಎಐ) ಮೂಲಕ ಸೃಷ್ಟಿಸಿದ್ದು ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇನೆ. ಅಲ್ಲದೆ, ಅಕ್ಟೋಬರ್ 4ರಂದು ಪೆಂಚ್ ಅರಣ್ಯದಿಂದ ಹುಲಿ ತಪ್ಪಿಸಿಕೊಂಡ ಬಗ್ಗೆ ಎಲ್ಲೂ ಅಧಿಕೃತ ವರದಿಯಾಗಿಲ್ಲ ಎಂದು ಅಲ್ಟ್ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ನಕಲಿ ಎಂದು ಪೆಂಚ್ ಟೈಗರ್ ರಿಸರ್ವ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂಬ ಭಾಸ್ಕರ್ ಇಂಗ್ಲಿಷ್ ವರದಿ ನಮಗೆ ಲಭ್ಯವಾಗಿದೆ ಎಂದು ಫ್ಯಾಕ್ಟ್‌ಚೆಕ್ ಸುದ್ದಿ ವೆಬ್‌ಸೈಟ್ ಫ್ಯಾಕ್ಟ್‌ಲೀ ಹೇಳಿದೆ.

ನಾವು ಪೆಂಚ್ ಹುಲಿ ಸಂರಕ್ಷಿತ ಪ್ರದೇಶದ ಉಪ ನಿರ್ದೇಶಕ ರಜನೀಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಅವರು ವೈರಲ್ ವಿಡಿಯೋ ನಕಲಿ ಎಂದು ದೃಢಪಡಿಸಿದ್ದಾರೆ. ಇತ್ತೀಚೆಗೆ ಹುಲಿಗೆ ಸಂಬಂಧಿಸಿದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ.

ಎಐ ವಿಷಯಗಳ ಪತ್ತೆ ಸಾಧನ ‘ಹೈವ್ ಮಾಡರೇಶನ್‌’ ಮೂಲಕ ನಾವು ವಿಡಿಯೋವನ್ನು ಪರಿಶೀಲಿಸಿದ್ದೇವೆ. ಅದು ವೈರಲ್ ವಿಡಿಯೋ ಶೇಕಡ 99ರಷ್ಟು ಎಐ ರಚಿತ ಎಂದು ಹೇಳಿದೆ. ವಿಡಿಯೋ ಕೃತವಾಗಿ ರಚಿತವಾಗಿದ್ದು ಎಂಬುವುದನ್ನು ಬಲವಾಗಿ ಹೇಳಿದೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ. ಹಾಗಾಗಿ, ವೈರಲ್ ವಿಡಿಯೋ ಎಐ ರಚಿತ ಎಂದಿದೆ.

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...