Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ...ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದು ಮಧ್ಯಪ್ರದೇಶದಲ್ಲಿ ನಡೆದ ಘಟನೆ ಎಂದು ಈ ವಿಡಿಯೋ ಕುರಿತು ಕೆಲ ಮುಖ್ಯ ವಾಹಿನಿ ಮಾಧ್ಯಮಗಳು ಕೂಡ ಸುದ್ದಿ ಮಾಡಿವೆ. ಅನೇಕ ಪ್ರಮುಖ ವ್ಯಕ್ತಿಗಳೇ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಸಿಸಿಟಿವಿ ಕ್ಯಾಮಾರದಲ್ಲಿ ರೆಕಾರ್ಡ್ ಆದ ದೃಶ್ಯದಂತಿದೆ.

“ರಾಜು ಎಂಬ 52 ವರ್ಷದ ವ್ಯಕ್ತಿ ತಡರಾತ್ರಿ ಮದ್ಯಪಾನ ಮಾಡಿ, ಇಸ್ಪೀಟ್ ಆಡಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹರಡಿಕೊಂಡಿರುವ ಪೆಂಚ್ ಹುಲಿ ಅಭಯಾರಣ್ಯದಿಂದ ಅಲೆದಾಡುತ್ತಾ ಬಂದ ಹುಲಿ ರಸ್ತೆ ಮಧ್ಯೆ ಕುಳಿತಿತ್ತು. ಅದನ್ನು ದೊಡ್ಡ ಬೆಕ್ಕು ಎಂದುಕೊಂಡ ರಾಜು ತಲೆ ಸವರಿ ಮದ್ಯ ಕುಡಿಸಿದ್ದಾರೆ. ಕೊನೆಗೆ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹುಲಿಗೆ ಮದ್ಯ ಕುಡಿಸಿದ ರಾಜು ಸ್ಥಳೀಯ ಮಟ್ಟದಲ್ಲಿ ಹೀರೋ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವರು ಬರೆದುಕೊಂಡಿದ್ದಾರೆ.

@808constituent ಎಂಬ ಎಕ್ಸ್ ಬಳಕೆದಾರ ಅಕ್ಟೋಬರ್ 23, 2025ರಂದು ವೈರಲ್ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದರು. ಈ ವರದಿ ಬರೆಯುವ ಹೊತ್ತಿಗೆ ಆ ಪೋಸ್ಟ್ 68 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು. ಅವರು ಪೋಸ್ಟ್ ಮಾಡಿರುವ ವಿಡಿಯೋ ಈಗಲೂ ಎಕ್ಸ್‌ನಲ್ಲಿ ಇದೆ. ಎಕ್ಸ್‌ ಇದುವರೆಗೆ ವಿಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಸುದ್ದಿ ಪೋರ್ಟಲ್ ‘ಗ್ರೇಟರ್ ಆಂಧ್ರ ನ್ಯೂಸ್’ ಕೂಡ ಅಕ್ಟೋಬರ್ 29ರಂದು ವೈರಲ್ ವಿಡಿಯೋವನ್ನು ಹಂಚಿಕೊಂಡಿತ್ತು. ಇದೂ ಕೂಡ ಮಧ್ಯಪ್ರದೇಶದ ಪೆಂಚ್ ರಾಷ್ಟ್ರೀಯ ಉದ್ಯಾನವನದ ಸಿಸಿಟಿವಿ ದೃಶ್ಯ ಎಂದು ಹೇಳಿತ್ತು.

ರಿದ್ಧಿ ರಣಥಂಬೋರ್ ಸಫಾರಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವೈರಲ್ ಕ್ಲಿಪ್ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವುದರಿಂದ ನಾವು ಇದರ ಸತ್ಯಾಸತ್ಯತೆ ತಿಳಿಯಲು ಮುಂದಾದೆವು. ಮೊದಲು ನಾವು ಈ ವಿಡಿಯೋ ಕುರಿತು ಯಾವುದಾದರು ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯೇ ಎಂದು ಪರಿಶೀಲಿಸಿದೆವು.

ಈ ವೇಳೆ ಕೆಲ ಕನ್ನಡ ಮಾಧ್ಯಮಗಳ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ. ಇತರ ಭಾಷೆಗಳ ಮಾಧ್ಯಮಗಳ ಪೇಜ್‌ಗಳಲ್ಲೂ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಆದರೂ, ನಮಗೆ ಆ ಮಾಧ್ಯಮಗಳ ಸುದ್ದಿಯ ನಿಖರತೆಯ ಬಗ್ಗೆ ಅನುಮಾನ ಮೂಡಿತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಹುಡುಕಾಡಿದೆವು.

ಈ ವೇಳೆ ಆಲ್ಟ್ ನ್ಯೂಸ್, ಫ್ಯಾಕ್ಟ್‌ಲೀ ಸೇರಿದಂತೆ ಅನೇಕ ಫ್ಯಾಕ್ಟ್ ಚೆಕ್ ಸುದ್ದಿ ಸಂಸ್ಥೆಗಳು ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಲವಾರು ದೃಶ್ಯ ವ್ಯತ್ಯಾಸಗಳು ಕಂಡು ಬರುತ್ತವೆ. ಇದು ವಿಡಿಯೋವನ್ನು ಕೃತಕವಾಗಿ ರಚಿಸಿರುವುದನ್ನು ಸೂಚಿಸುತ್ತದೆ. ಉದಾಹರಣೆಗೆ : ಮನುಷ್ಯ ಹುಲಿಯನ್ನು ಮುದ್ದಿಸುತ್ತಿದ್ದಂತೆ, ಮದ್ಯದ ಬಾಟಲಿಯ ಕುತ್ತಿಗೆಯ ಗಾತ್ರ ಕಡಿಮೆಯಾಗುತ್ತದೆ ಮತ್ತು ನಂತರ ಅದರ ಮೂಲ ಗಾತ್ರಕ್ಕೆ ಮರಳುತ್ತದೆ. ಇದಲ್ಲದೆ, ಹಿಂದುಗಡೆ ಮನೆಯ ವರಾಂಡಾದಲ್ಲಿ ಕುಳಿತಿರುವ ಇಬ್ಬರು ವ್ಯಕ್ತಿಗಳ ಚಲನೆಯು ವಿರೂಪಗೊಂಡಂತೆ ಕಾಣುತ್ತದೆ. ಇದು ಕೃತಕವಾಗಿ ರಚಿಸಲಾದ ಕ್ಲಿಪ್‌ಗಳ ಮತ್ತೊಂದು ವಿಶಿಷ್ಟ ಲಕ್ಷಣವಾಗಿದೆ ಎಂದು ಅಲ್ಟ್‌ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆಯಲು ನಾವು ಪೆಂಚ್ ಹುಲಿ ಸಂರಕ್ಷಿತ ಅಭಯಾರಣ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಂಪರ್ಕಕ್ಕೆ ಅವರು ಸಿಕ್ಕಿಲ್ಲ. ಆದರೆ, ಅಕ್ಟೋಬರ್ 29ರಂದು ‘ದಿ ಸೂತ್ರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯಲ್ಲಿ, “ಮೀಸಲು ಅರಣ್ಯ ಪ್ರದೇಶದ ಉಪ ನಿರ್ದೇಶಕ ರಜನೀಶ್ ಸಿಂಗ್ ಅವರು ವೈರಲ್ ವಿಡಿಯೋ ಪೆಂಚ್ ಅಭಯಾರಣ್ಯದ ಪ್ರದೇಶದ್ದು ಎಂಬುವುದನ್ನು ತಳ್ಳಿ ಹಾಕಿದ್ದನ್ನು ಉಲ್ಲೇಖಿಸಲಾಗಿದೆ ಎಂದು ಆಲ್ಟ್ ನ್ಯೂಸ್ ಹೇಳಿದೆ.

ನಮಗೆ ಲಭ್ಯವಾದ ಮಾಹಿತಿ, ವಿಡಿಯೋದಲ್ಲಿ ಕಾಣುವ ಕೆಲ ಸೂಕ್ಷ ವ್ಯತ್ಯಾಸಗಳಿಂದ ವೈರಲ್ ವಿಡಿಯೋ ಕೃತಕ ಬುದ್ದಿಮತ್ತೆ (ಎಐ) ಮೂಲಕ ಸೃಷ್ಟಿಸಿದ್ದು ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇನೆ. ಅಲ್ಲದೆ, ಅಕ್ಟೋಬರ್ 4ರಂದು ಪೆಂಚ್ ಅರಣ್ಯದಿಂದ ಹುಲಿ ತಪ್ಪಿಸಿಕೊಂಡ ಬಗ್ಗೆ ಎಲ್ಲೂ ಅಧಿಕೃತ ವರದಿಯಾಗಿಲ್ಲ ಎಂದು ಅಲ್ಟ್ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ನಕಲಿ ಎಂದು ಪೆಂಚ್ ಟೈಗರ್ ರಿಸರ್ವ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂಬ ಭಾಸ್ಕರ್ ಇಂಗ್ಲಿಷ್ ವರದಿ ನಮಗೆ ಲಭ್ಯವಾಗಿದೆ ಎಂದು ಫ್ಯಾಕ್ಟ್‌ಚೆಕ್ ಸುದ್ದಿ ವೆಬ್‌ಸೈಟ್ ಫ್ಯಾಕ್ಟ್‌ಲೀ ಹೇಳಿದೆ.

ನಾವು ಪೆಂಚ್ ಹುಲಿ ಸಂರಕ್ಷಿತ ಪ್ರದೇಶದ ಉಪ ನಿರ್ದೇಶಕ ರಜನೀಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಅವರು ವೈರಲ್ ವಿಡಿಯೋ ನಕಲಿ ಎಂದು ದೃಢಪಡಿಸಿದ್ದಾರೆ. ಇತ್ತೀಚೆಗೆ ಹುಲಿಗೆ ಸಂಬಂಧಿಸಿದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ.

ಎಐ ವಿಷಯಗಳ ಪತ್ತೆ ಸಾಧನ ‘ಹೈವ್ ಮಾಡರೇಶನ್‌’ ಮೂಲಕ ನಾವು ವಿಡಿಯೋವನ್ನು ಪರಿಶೀಲಿಸಿದ್ದೇವೆ. ಅದು ವೈರಲ್ ವಿಡಿಯೋ ಶೇಕಡ 99ರಷ್ಟು ಎಐ ರಚಿತ ಎಂದು ಹೇಳಿದೆ. ವಿಡಿಯೋ ಕೃತವಾಗಿ ರಚಿತವಾಗಿದ್ದು ಎಂಬುವುದನ್ನು ಬಲವಾಗಿ ಹೇಳಿದೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ. ಹಾಗಾಗಿ, ವೈರಲ್ ವಿಡಿಯೋ ಎಐ ರಚಿತ ಎಂದಿದೆ.

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...