Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ...ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದು ಮಧ್ಯಪ್ರದೇಶದಲ್ಲಿ ನಡೆದ ಘಟನೆ ಎಂದು ಈ ವಿಡಿಯೋ ಕುರಿತು ಕೆಲ ಮುಖ್ಯ ವಾಹಿನಿ ಮಾಧ್ಯಮಗಳು ಕೂಡ ಸುದ್ದಿ ಮಾಡಿವೆ. ಅನೇಕ ಪ್ರಮುಖ ವ್ಯಕ್ತಿಗಳೇ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಸಿಸಿಟಿವಿ ಕ್ಯಾಮಾರದಲ್ಲಿ ರೆಕಾರ್ಡ್ ಆದ ದೃಶ್ಯದಂತಿದೆ.

“ರಾಜು ಎಂಬ 52 ವರ್ಷದ ವ್ಯಕ್ತಿ ತಡರಾತ್ರಿ ಮದ್ಯಪಾನ ಮಾಡಿ, ಇಸ್ಪೀಟ್ ಆಡಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹರಡಿಕೊಂಡಿರುವ ಪೆಂಚ್ ಹುಲಿ ಅಭಯಾರಣ್ಯದಿಂದ ಅಲೆದಾಡುತ್ತಾ ಬಂದ ಹುಲಿ ರಸ್ತೆ ಮಧ್ಯೆ ಕುಳಿತಿತ್ತು. ಅದನ್ನು ದೊಡ್ಡ ಬೆಕ್ಕು ಎಂದುಕೊಂಡ ರಾಜು ತಲೆ ಸವರಿ ಮದ್ಯ ಕುಡಿಸಿದ್ದಾರೆ. ಕೊನೆಗೆ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹುಲಿಗೆ ಮದ್ಯ ಕುಡಿಸಿದ ರಾಜು ಸ್ಥಳೀಯ ಮಟ್ಟದಲ್ಲಿ ಹೀರೋ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವರು ಬರೆದುಕೊಂಡಿದ್ದಾರೆ.

@808constituent ಎಂಬ ಎಕ್ಸ್ ಬಳಕೆದಾರ ಅಕ್ಟೋಬರ್ 23, 2025ರಂದು ವೈರಲ್ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದರು. ಈ ವರದಿ ಬರೆಯುವ ಹೊತ್ತಿಗೆ ಆ ಪೋಸ್ಟ್ 68 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು. ಅವರು ಪೋಸ್ಟ್ ಮಾಡಿರುವ ವಿಡಿಯೋ ಈಗಲೂ ಎಕ್ಸ್‌ನಲ್ಲಿ ಇದೆ. ಎಕ್ಸ್‌ ಇದುವರೆಗೆ ವಿಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಸುದ್ದಿ ಪೋರ್ಟಲ್ ‘ಗ್ರೇಟರ್ ಆಂಧ್ರ ನ್ಯೂಸ್’ ಕೂಡ ಅಕ್ಟೋಬರ್ 29ರಂದು ವೈರಲ್ ವಿಡಿಯೋವನ್ನು ಹಂಚಿಕೊಂಡಿತ್ತು. ಇದೂ ಕೂಡ ಮಧ್ಯಪ್ರದೇಶದ ಪೆಂಚ್ ರಾಷ್ಟ್ರೀಯ ಉದ್ಯಾನವನದ ಸಿಸಿಟಿವಿ ದೃಶ್ಯ ಎಂದು ಹೇಳಿತ್ತು.

ರಿದ್ಧಿ ರಣಥಂಬೋರ್ ಸಫಾರಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವೈರಲ್ ಕ್ಲಿಪ್ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವುದರಿಂದ ನಾವು ಇದರ ಸತ್ಯಾಸತ್ಯತೆ ತಿಳಿಯಲು ಮುಂದಾದೆವು. ಮೊದಲು ನಾವು ಈ ವಿಡಿಯೋ ಕುರಿತು ಯಾವುದಾದರು ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯೇ ಎಂದು ಪರಿಶೀಲಿಸಿದೆವು.

ಈ ವೇಳೆ ಕೆಲ ಕನ್ನಡ ಮಾಧ್ಯಮಗಳ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ. ಇತರ ಭಾಷೆಗಳ ಮಾಧ್ಯಮಗಳ ಪೇಜ್‌ಗಳಲ್ಲೂ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಆದರೂ, ನಮಗೆ ಆ ಮಾಧ್ಯಮಗಳ ಸುದ್ದಿಯ ನಿಖರತೆಯ ಬಗ್ಗೆ ಅನುಮಾನ ಮೂಡಿತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಹುಡುಕಾಡಿದೆವು.

ಈ ವೇಳೆ ಆಲ್ಟ್ ನ್ಯೂಸ್, ಫ್ಯಾಕ್ಟ್‌ಲೀ ಸೇರಿದಂತೆ ಅನೇಕ ಫ್ಯಾಕ್ಟ್ ಚೆಕ್ ಸುದ್ದಿ ಸಂಸ್ಥೆಗಳು ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಲವಾರು ದೃಶ್ಯ ವ್ಯತ್ಯಾಸಗಳು ಕಂಡು ಬರುತ್ತವೆ. ಇದು ವಿಡಿಯೋವನ್ನು ಕೃತಕವಾಗಿ ರಚಿಸಿರುವುದನ್ನು ಸೂಚಿಸುತ್ತದೆ. ಉದಾಹರಣೆಗೆ : ಮನುಷ್ಯ ಹುಲಿಯನ್ನು ಮುದ್ದಿಸುತ್ತಿದ್ದಂತೆ, ಮದ್ಯದ ಬಾಟಲಿಯ ಕುತ್ತಿಗೆಯ ಗಾತ್ರ ಕಡಿಮೆಯಾಗುತ್ತದೆ ಮತ್ತು ನಂತರ ಅದರ ಮೂಲ ಗಾತ್ರಕ್ಕೆ ಮರಳುತ್ತದೆ. ಇದಲ್ಲದೆ, ಹಿಂದುಗಡೆ ಮನೆಯ ವರಾಂಡಾದಲ್ಲಿ ಕುಳಿತಿರುವ ಇಬ್ಬರು ವ್ಯಕ್ತಿಗಳ ಚಲನೆಯು ವಿರೂಪಗೊಂಡಂತೆ ಕಾಣುತ್ತದೆ. ಇದು ಕೃತಕವಾಗಿ ರಚಿಸಲಾದ ಕ್ಲಿಪ್‌ಗಳ ಮತ್ತೊಂದು ವಿಶಿಷ್ಟ ಲಕ್ಷಣವಾಗಿದೆ ಎಂದು ಅಲ್ಟ್‌ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆಯಲು ನಾವು ಪೆಂಚ್ ಹುಲಿ ಸಂರಕ್ಷಿತ ಅಭಯಾರಣ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಂಪರ್ಕಕ್ಕೆ ಅವರು ಸಿಕ್ಕಿಲ್ಲ. ಆದರೆ, ಅಕ್ಟೋಬರ್ 29ರಂದು ‘ದಿ ಸೂತ್ರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯಲ್ಲಿ, “ಮೀಸಲು ಅರಣ್ಯ ಪ್ರದೇಶದ ಉಪ ನಿರ್ದೇಶಕ ರಜನೀಶ್ ಸಿಂಗ್ ಅವರು ವೈರಲ್ ವಿಡಿಯೋ ಪೆಂಚ್ ಅಭಯಾರಣ್ಯದ ಪ್ರದೇಶದ್ದು ಎಂಬುವುದನ್ನು ತಳ್ಳಿ ಹಾಕಿದ್ದನ್ನು ಉಲ್ಲೇಖಿಸಲಾಗಿದೆ ಎಂದು ಆಲ್ಟ್ ನ್ಯೂಸ್ ಹೇಳಿದೆ.

ನಮಗೆ ಲಭ್ಯವಾದ ಮಾಹಿತಿ, ವಿಡಿಯೋದಲ್ಲಿ ಕಾಣುವ ಕೆಲ ಸೂಕ್ಷ ವ್ಯತ್ಯಾಸಗಳಿಂದ ವೈರಲ್ ವಿಡಿಯೋ ಕೃತಕ ಬುದ್ದಿಮತ್ತೆ (ಎಐ) ಮೂಲಕ ಸೃಷ್ಟಿಸಿದ್ದು ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇನೆ. ಅಲ್ಲದೆ, ಅಕ್ಟೋಬರ್ 4ರಂದು ಪೆಂಚ್ ಅರಣ್ಯದಿಂದ ಹುಲಿ ತಪ್ಪಿಸಿಕೊಂಡ ಬಗ್ಗೆ ಎಲ್ಲೂ ಅಧಿಕೃತ ವರದಿಯಾಗಿಲ್ಲ ಎಂದು ಅಲ್ಟ್ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ನಕಲಿ ಎಂದು ಪೆಂಚ್ ಟೈಗರ್ ರಿಸರ್ವ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂಬ ಭಾಸ್ಕರ್ ಇಂಗ್ಲಿಷ್ ವರದಿ ನಮಗೆ ಲಭ್ಯವಾಗಿದೆ ಎಂದು ಫ್ಯಾಕ್ಟ್‌ಚೆಕ್ ಸುದ್ದಿ ವೆಬ್‌ಸೈಟ್ ಫ್ಯಾಕ್ಟ್‌ಲೀ ಹೇಳಿದೆ.

ನಾವು ಪೆಂಚ್ ಹುಲಿ ಸಂರಕ್ಷಿತ ಪ್ರದೇಶದ ಉಪ ನಿರ್ದೇಶಕ ರಜನೀಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಅವರು ವೈರಲ್ ವಿಡಿಯೋ ನಕಲಿ ಎಂದು ದೃಢಪಡಿಸಿದ್ದಾರೆ. ಇತ್ತೀಚೆಗೆ ಹುಲಿಗೆ ಸಂಬಂಧಿಸಿದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ.

ಎಐ ವಿಷಯಗಳ ಪತ್ತೆ ಸಾಧನ ‘ಹೈವ್ ಮಾಡರೇಶನ್‌’ ಮೂಲಕ ನಾವು ವಿಡಿಯೋವನ್ನು ಪರಿಶೀಲಿಸಿದ್ದೇವೆ. ಅದು ವೈರಲ್ ವಿಡಿಯೋ ಶೇಕಡ 99ರಷ್ಟು ಎಐ ರಚಿತ ಎಂದು ಹೇಳಿದೆ. ವಿಡಿಯೋ ಕೃತವಾಗಿ ರಚಿತವಾಗಿದ್ದು ಎಂಬುವುದನ್ನು ಬಲವಾಗಿ ಹೇಳಿದೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ. ಹಾಗಾಗಿ, ವೈರಲ್ ವಿಡಿಯೋ ಎಐ ರಚಿತ ಎಂದಿದೆ.

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...