Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ...ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಇದು ಮಧ್ಯಪ್ರದೇಶದಲ್ಲಿ ನಡೆದ ಘಟನೆ ಎಂದು ಈ ವಿಡಿಯೋ ಕುರಿತು ಕೆಲ ಮುಖ್ಯ ವಾಹಿನಿ ಮಾಧ್ಯಮಗಳು ಕೂಡ ಸುದ್ದಿ ಮಾಡಿವೆ. ಅನೇಕ ಪ್ರಮುಖ ವ್ಯಕ್ತಿಗಳೇ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಲು ಸಿಸಿಟಿವಿ ಕ್ಯಾಮಾರದಲ್ಲಿ ರೆಕಾರ್ಡ್ ಆದ ದೃಶ್ಯದಂತಿದೆ.

“ರಾಜು ಎಂಬ 52 ವರ್ಷದ ವ್ಯಕ್ತಿ ತಡರಾತ್ರಿ ಮದ್ಯಪಾನ ಮಾಡಿ, ಇಸ್ಪೀಟ್ ಆಡಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಹರಡಿಕೊಂಡಿರುವ ಪೆಂಚ್ ಹುಲಿ ಅಭಯಾರಣ್ಯದಿಂದ ಅಲೆದಾಡುತ್ತಾ ಬಂದ ಹುಲಿ ರಸ್ತೆ ಮಧ್ಯೆ ಕುಳಿತಿತ್ತು. ಅದನ್ನು ದೊಡ್ಡ ಬೆಕ್ಕು ಎಂದುಕೊಂಡ ರಾಜು ತಲೆ ಸವರಿ ಮದ್ಯ ಕುಡಿಸಿದ್ದಾರೆ. ಕೊನೆಗೆ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹುಲಿಗೆ ಮದ್ಯ ಕುಡಿಸಿದ ರಾಜು ಸ್ಥಳೀಯ ಮಟ್ಟದಲ್ಲಿ ಹೀರೋ ಆಗಿದ್ದಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡ ಕೆಲವರು ಬರೆದುಕೊಂಡಿದ್ದಾರೆ.

@808constituent ಎಂಬ ಎಕ್ಸ್ ಬಳಕೆದಾರ ಅಕ್ಟೋಬರ್ 23, 2025ರಂದು ವೈರಲ್ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದರು. ಈ ವರದಿ ಬರೆಯುವ ಹೊತ್ತಿಗೆ ಆ ಪೋಸ್ಟ್ 68 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು. ಅವರು ಪೋಸ್ಟ್ ಮಾಡಿರುವ ವಿಡಿಯೋ ಈಗಲೂ ಎಕ್ಸ್‌ನಲ್ಲಿ ಇದೆ. ಎಕ್ಸ್‌ ಇದುವರೆಗೆ ವಿಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಸುದ್ದಿ ಪೋರ್ಟಲ್ ‘ಗ್ರೇಟರ್ ಆಂಧ್ರ ನ್ಯೂಸ್’ ಕೂಡ ಅಕ್ಟೋಬರ್ 29ರಂದು ವೈರಲ್ ವಿಡಿಯೋವನ್ನು ಹಂಚಿಕೊಂಡಿತ್ತು. ಇದೂ ಕೂಡ ಮಧ್ಯಪ್ರದೇಶದ ಪೆಂಚ್ ರಾಷ್ಟ್ರೀಯ ಉದ್ಯಾನವನದ ಸಿಸಿಟಿವಿ ದೃಶ್ಯ ಎಂದು ಹೇಳಿತ್ತು.

ರಿದ್ಧಿ ರಣಥಂಬೋರ್ ಸಫಾರಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ವೈರಲ್ ಕ್ಲಿಪ್ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿರುವುದರಿಂದ ನಾವು ಇದರ ಸತ್ಯಾಸತ್ಯತೆ ತಿಳಿಯಲು ಮುಂದಾದೆವು. ಮೊದಲು ನಾವು ಈ ವಿಡಿಯೋ ಕುರಿತು ಯಾವುದಾದರು ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯೇ ಎಂದು ಪರಿಶೀಲಿಸಿದೆವು.

ಈ ವೇಳೆ ಕೆಲ ಕನ್ನಡ ಮಾಧ್ಯಮಗಳ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ. ಇತರ ಭಾಷೆಗಳ ಮಾಧ್ಯಮಗಳ ಪೇಜ್‌ಗಳಲ್ಲೂ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಆದರೂ, ನಮಗೆ ಆ ಮಾಧ್ಯಮಗಳ ಸುದ್ದಿಯ ನಿಖರತೆಯ ಬಗ್ಗೆ ಅನುಮಾನ ಮೂಡಿತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ಹುಡುಕಾಡಿದೆವು.

ಈ ವೇಳೆ ಆಲ್ಟ್ ನ್ಯೂಸ್, ಫ್ಯಾಕ್ಟ್‌ಲೀ ಸೇರಿದಂತೆ ಅನೇಕ ಫ್ಯಾಕ್ಟ್ ಚೆಕ್ ಸುದ್ದಿ ಸಂಸ್ಥೆಗಳು ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಲವಾರು ದೃಶ್ಯ ವ್ಯತ್ಯಾಸಗಳು ಕಂಡು ಬರುತ್ತವೆ. ಇದು ವಿಡಿಯೋವನ್ನು ಕೃತಕವಾಗಿ ರಚಿಸಿರುವುದನ್ನು ಸೂಚಿಸುತ್ತದೆ. ಉದಾಹರಣೆಗೆ : ಮನುಷ್ಯ ಹುಲಿಯನ್ನು ಮುದ್ದಿಸುತ್ತಿದ್ದಂತೆ, ಮದ್ಯದ ಬಾಟಲಿಯ ಕುತ್ತಿಗೆಯ ಗಾತ್ರ ಕಡಿಮೆಯಾಗುತ್ತದೆ ಮತ್ತು ನಂತರ ಅದರ ಮೂಲ ಗಾತ್ರಕ್ಕೆ ಮರಳುತ್ತದೆ. ಇದಲ್ಲದೆ, ಹಿಂದುಗಡೆ ಮನೆಯ ವರಾಂಡಾದಲ್ಲಿ ಕುಳಿತಿರುವ ಇಬ್ಬರು ವ್ಯಕ್ತಿಗಳ ಚಲನೆಯು ವಿರೂಪಗೊಂಡಂತೆ ಕಾಣುತ್ತದೆ. ಇದು ಕೃತಕವಾಗಿ ರಚಿಸಲಾದ ಕ್ಲಿಪ್‌ಗಳ ಮತ್ತೊಂದು ವಿಶಿಷ್ಟ ಲಕ್ಷಣವಾಗಿದೆ ಎಂದು ಅಲ್ಟ್‌ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ಕುರಿತು ಮಾಹಿತಿ ಪಡೆಯಲು ನಾವು ಪೆಂಚ್ ಹುಲಿ ಸಂರಕ್ಷಿತ ಅಭಯಾರಣ್ಯದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ನಮ್ಮ ಸಂಪರ್ಕಕ್ಕೆ ಅವರು ಸಿಕ್ಕಿಲ್ಲ. ಆದರೆ, ಅಕ್ಟೋಬರ್ 29ರಂದು ‘ದಿ ಸೂತ್ರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ವರದಿಯಲ್ಲಿ, “ಮೀಸಲು ಅರಣ್ಯ ಪ್ರದೇಶದ ಉಪ ನಿರ್ದೇಶಕ ರಜನೀಶ್ ಸಿಂಗ್ ಅವರು ವೈರಲ್ ವಿಡಿಯೋ ಪೆಂಚ್ ಅಭಯಾರಣ್ಯದ ಪ್ರದೇಶದ್ದು ಎಂಬುವುದನ್ನು ತಳ್ಳಿ ಹಾಕಿದ್ದನ್ನು ಉಲ್ಲೇಖಿಸಲಾಗಿದೆ ಎಂದು ಆಲ್ಟ್ ನ್ಯೂಸ್ ಹೇಳಿದೆ.

ನಮಗೆ ಲಭ್ಯವಾದ ಮಾಹಿತಿ, ವಿಡಿಯೋದಲ್ಲಿ ಕಾಣುವ ಕೆಲ ಸೂಕ್ಷ ವ್ಯತ್ಯಾಸಗಳಿಂದ ವೈರಲ್ ವಿಡಿಯೋ ಕೃತಕ ಬುದ್ದಿಮತ್ತೆ (ಎಐ) ಮೂಲಕ ಸೃಷ್ಟಿಸಿದ್ದು ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇನೆ. ಅಲ್ಲದೆ, ಅಕ್ಟೋಬರ್ 4ರಂದು ಪೆಂಚ್ ಅರಣ್ಯದಿಂದ ಹುಲಿ ತಪ್ಪಿಸಿಕೊಂಡ ಬಗ್ಗೆ ಎಲ್ಲೂ ಅಧಿಕೃತ ವರದಿಯಾಗಿಲ್ಲ ಎಂದು ಅಲ್ಟ್ ನ್ಯೂಸ್ ಹೇಳಿದೆ.

ವೈರಲ್ ವಿಡಿಯೋ ನಕಲಿ ಎಂದು ಪೆಂಚ್ ಟೈಗರ್ ರಿಸರ್ವ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂಬ ಭಾಸ್ಕರ್ ಇಂಗ್ಲಿಷ್ ವರದಿ ನಮಗೆ ಲಭ್ಯವಾಗಿದೆ ಎಂದು ಫ್ಯಾಕ್ಟ್‌ಚೆಕ್ ಸುದ್ದಿ ವೆಬ್‌ಸೈಟ್ ಫ್ಯಾಕ್ಟ್‌ಲೀ ಹೇಳಿದೆ.

ನಾವು ಪೆಂಚ್ ಹುಲಿ ಸಂರಕ್ಷಿತ ಪ್ರದೇಶದ ಉಪ ನಿರ್ದೇಶಕ ರಜನೀಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದಾಗ, ಅವರು ವೈರಲ್ ವಿಡಿಯೋ ನಕಲಿ ಎಂದು ದೃಢಪಡಿಸಿದ್ದಾರೆ. ಇತ್ತೀಚೆಗೆ ಹುಲಿಗೆ ಸಂಬಂಧಿಸಿದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ.

ಎಐ ವಿಷಯಗಳ ಪತ್ತೆ ಸಾಧನ ‘ಹೈವ್ ಮಾಡರೇಶನ್‌’ ಮೂಲಕ ನಾವು ವಿಡಿಯೋವನ್ನು ಪರಿಶೀಲಿಸಿದ್ದೇವೆ. ಅದು ವೈರಲ್ ವಿಡಿಯೋ ಶೇಕಡ 99ರಷ್ಟು ಎಐ ರಚಿತ ಎಂದು ಹೇಳಿದೆ. ವಿಡಿಯೋ ಕೃತವಾಗಿ ರಚಿತವಾಗಿದ್ದು ಎಂಬುವುದನ್ನು ಬಲವಾಗಿ ಹೇಳಿದೆ ಎಂದು ಫ್ಯಾಕ್ಟ್‌ಲೀ ತಿಳಿಸಿದೆ. ಹಾಗಾಗಿ, ವೈರಲ್ ವಿಡಿಯೋ ಎಐ ರಚಿತ ಎಂದಿದೆ.

FACT CHECK | ಆರ್‌ಎಸ್ಎಸ್ ಶತಮಾನೋತ್ಸವ ಪ್ರಯುಕ್ತ ನೆದರ್‌ಲ್ಯಾಂಡ್‌ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...