Homeನಿಜವೋ ಸುಳ್ಳೋFact check: ಸುಳ್ಳು ಸುದ್ದಿ ಟ್ವೀಟ್‌ ಮಾಡಿ ಮುಖಭಂಗಕ್ಕೊಳಗಾದ ಉತ್ತರ ಪ್ರದೇಶ ANI

Fact check: ಸುಳ್ಳು ಸುದ್ದಿ ಟ್ವೀಟ್‌ ಮಾಡಿ ಮುಖಭಂಗಕ್ಕೊಳಗಾದ ಉತ್ತರ ಪ್ರದೇಶ ANI

- Advertisement -
- Advertisement -

ಸೆಕ್ಟರ್ 5 ನೇ ಹರೋಲಾದ ಕೆಲವರು ತಬ್ಲಿಘಿ ಜಮಾತ್‌ ಜೊತೆ ಸಂಪರ್ಕ ಹೊಂದಿದ್ದರು. ಹಾಗಾಗಿ ಅವರಿಗೂ ಸೋಂಕು ಹರಡಿದ್ದು ಅವರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಗೌತಮ್‌ ಬುಧ್‌ ನಗರದ ಡಿಸಿಪಿ ಸಂಕಲ್ಪ ಶರ್ಮಾ ಹೇಳಿದ್ದಾರೆ ಎಂದು ಉತ್ತರ ಪ್ರದೇಶ ಟ್ವಿಟ್ಟರ್ ಹ್ಯಾಂಡಲ್ UP ANI ತಪ್ಪು ಸುದ್ದಿ ಪ್ರಸಾರ ಮಾಡಿದೆ.

ಕೂಡಲೇ ಗೌತಮ್‌ ಬುಧ್‌ ನಗರದ ಡಿಸಿಪಿ ಟ್ವಿಟ್ಟರ್‌ ಹ್ಯಾಂಡಲ್ ಟ್ವೀಟ್‌ ಮಾಡಿ “ಸೋಂಕು ಬಂದವರನ್ನು ಎಂದಿನಂತೆ ಕ್ವಾರಂಟೈನ್‌ ಮಾಡಿದ್ದೇವೆ. ಅದಕ್ಕೂ ತಬ್ಲಿಘಿ ಜಮಾತ್‌ಗೂ ಯಾವುದೇ ಸಂಬಂಧವಿಲ್ಲ. ನೀವು ತಪ್ಪು ವರದಿ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದ್ದೀರಿ ಎಂದು ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ANI ಉತ್ತರ ಪ್ರದೇಶ ತನ್ನ ಟ್ವೀಟ್‌ನಲ್ಲಿ, ಸೆಕ್ಟರ್ 5 ಹರೋಲಾದಲ್ಲಿ ನೋಯ್ಡಾದ ತಬ್ಲಿಘಿ ಜಮಾಅತ್ ಸದಸ್ಯರೊಂದಿಗೆ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡಿದ್ದೇವೆ ಎಂದು ವರದಿ ಮಾಡಿತ್ತು. ಆದರೆ ಯಾವಾಗ ಡಿಸಿಪಿಯವರು ಅವರಿಗೂ ತಬ್ಲಿಘ್‌ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ತನ್ನ ಟ್ವೀಟ್‌ ಅನ್ನು ANI ಉತ್ತರ ಪ್ರದೇಶ ಅಳಿಸಿದೆ.

 

ನಂತರ ANI UP ಅದನ್ನು ತಿದ್ದುಪಡಿ ಮಾಡಿದೆಯಾದರೂ ಆ ಹೊತ್ತಿಗೆ ಆ ಸುದ್ದಿಯೂ ಭಾರತದಾದ್ಯಂತ ಹಲವು ಮಾಧ್ಯಮಗಳಲ್ಲಿ ಹರಡಿಯಾಗಿತ್ತು.

ಮಾರ್ಚ್ ನಲ್ಲಿ ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಜಮಾಅತ್‌ನ ಹಲವಾರು ಸದಸ್ಯರಲ್ಲಿ, ಕೊರೊನ ವೈರಸ್ ಸೋಂಕು ಇರುವುದು ಪತ್ತೆಯಾಗಿತ್ತು. ಇದರ ನಂತರ ದೇಶದಾದ್ಯಂತ ಈ ಘಟನೆಯನ್ನು ಇಟ್ಟುಕೊಂಡು ಮುಸ್ಲಿಮರ ವಿರುದ್ದ ಮುಖ್ಯವಾಹಿನಿ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಅಭಿಯಾನವನ್ನು ಉದ್ದೇಶಪೂರ್ವಕವಾಗಿ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ANI ಉತ್ತರ ಪ್ರದೇಶದ ತಪ್ಪಿನಿಂದಾಗಿ ಬಾರಿ ಅಪಪ್ರಚಾರ ಉಂಟಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...