HomeUncategorizedFact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ.

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’, ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿದಾರರಿಗೆ ಮಾಸಿಕ 10 ಕೆ.ಜಿ ಅಕ್ಕಿ ವಿತರಿಸುವ ‘ಅನ್ನಭಾಗ್ಯ ಯೋಜನೆ’, ಮನೆಯ ಮಹಿಳಾ ಯಜಮಾನಿಗೆ ಮಾಸಿಕ 2 ಸಾವಿರ ರೂ. ಧನ ಸಹಾಯ ನೀಡುವ ‘ಗೃಹಲಕ್ಷಿ ಯೋಜನೆ’, 200 ಯೂನಿಟ್ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ ಯೋಜನೆ’ ಮತ್ತು ನಿರುದ್ಯೋಗಿ ಯುವಜನರಿಗೆ ಧನ ಸಹಾಯ ನೀಡುವ ‘ಯುವನಿಧಿ ಯೋಜನೆ’ ಪ್ರಸ್ತುತ ಜಾರಿಯಲ್ಲಿವೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಹಲವಾರು ಸುಳ್ಳು ಸುದ್ದಿಗಳು, ಊಹಾಪೋಹಗಳು ಪ್ರತಿದಿನ ಹರಿದಾಡುತ್ತಿರುತ್ತವೆ. ಈ ಕುರಿತು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : 1. ಜೂನ್ 11, 2023ರಂದು ರಾಜ್ಯ ಸರ್ಕಾರ ಮೊದಲ ಗ್ಯಾರಂಟಿ ಯೋಜನೆಯಾಗಿ ‘ ರಾಜ್ಯದ ಮಹಿಳೆಯರಿಗೆ ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸಿತ್ತು.

ಯೋಜನೆ ಪ್ರಾರಂಭಗೊಂಡು ಎರಡು ತಿಂಗಳ ಬಳಿಕ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿತ್ತು. ಈ ಕುರಿತು ಆಗಸ್ಟ್ 16, 2023ರಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಸ್ಪಷ್ಟನೆ ಕೊಟ್ಟಿದ್ದರು. “ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ” ಎಂದಿದ್ದರು.

ಪ್ರಸ್ತುತ (ಏಪ್ರಿಲ್ 2024ರಲ್ಲಿ) ಶಕ್ತಿ ಯೋಜನೆ ಯಶಸ್ವಿಯಾಗಿ ಮುಂದುವರೆಯುತ್ತಿದೆ. ರಾಜ್ಯದ ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

ಫೆಬ್ರವರಿ 16, 2024ರಂದು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಈ ಪೈಕಿ ಶಕ್ತಿ ಯೋಜನೆಗೆ 5,015 ಕೋಟಿ ನೀಡಿದ್ದಾರೆ.

ಬಜೆಟ್ ಮಂಡನೆ ವೇಳೆ 2023-24ರಲ್ಲಿ ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಿದ ಹಣದ ಲೆಕ್ಕವನ್ನೂ ಸಿಎಂ ನೀಡಿದ್ದಾರೆ. ಆರಂಭದಲ್ಲಿ 2,800 ಕೋಟಿ ರೂಪಾಯಿ ಹಣವನ್ನು ಸರ್ಕಾರ ಶಕ್ತಿ ಯೋಜನೆಗೆ ಮೀಸಲಿಟ್ಟಿತ್ತು. ಅವೆಲ್ಲವೂ ಖರ್ಚಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರುವುದು ಮತ್ತು ಪ್ರಸ್ತುತ ಶಕ್ತಿ ಯೋಜನೆ ಚಾಲ್ತಿಯಲ್ಲಿರುವುದರಿಂದ ಯೋಜನೆ ಸ್ಥಗಿತಗೊಳ್ಳಲಿದೆ ಎಂಬುವುದು ಸುಳ್ಳು ಎಂದು ಹೇಳಬಹುದು.

2. ಸರ್ಕಾರ ಎರಡನೆಯದಾಗಿ ಜಾರಿಗೊಳಿಸಿದ ಯೋಜನೆ ‘ಅನ್ನಭಾಗ್ಯ’

ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 2013ರಲ್ಲಿ ಜಾರಿಗೆ ತಂದ ಜನಪ್ರಿಯ ಯೋಜನೆಯಾಗಿದೆ. ಈ ಯೋಜನೆಯಡಿ ರಾಜ್ಯ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌, ಅಂತ್ಯೋದ್ಯಯ) ಪಡಿತರ ಚೀಟಿದಾರರಿಗೆ 10 ಕೆ.ಜಿ ಉಚಿತ ಅಕ್ಕಿ ವಿತರಿಸಲಾಗುತ್ತದೆ.

2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನ್ನಭಾಗ್ಯ ಯೋಜನೆಗೆ ಮತ್ತೊಮ್ಮೆ ಮುನ್ನೆಲೆಗೆ ಬಂದಿತ್ತು. ಆರಂಭದಲ್ಲಿ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ಮುಂದಾಗಿದ್ದರು. ಆದರೆ, ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇದ್ದರೂ ನೀಡಿಲ್ಲ ಎಂದು ಆರೋಪಿಸಲಾಗಿದೆ. ಹಾಗಾಗಿ, 5 ಕೆ.ಜಿ ಅಕ್ಕಿ ಇನ್ನುಳಿದ 5 ಕೆ.ಜಿ ಬದಲು 170 ರೂ. ಹಣ ನೀಡಲು ಸರ್ಕಾರ ನಿರ್ಧಿರಿಸಿತ್ತು. ಅದರಂತೆ 5 ಕೆ.ಜಿ ಅಕ್ಕಿ ಮತ್ತು ಇನ್ನೈದು ಕೆ.ಜಿ ಅಕ್ಕಿಯ ಹಣ ನೀಡಲಾಗುತ್ತಿದೆ.

2024-25ನೇ ಸಾಲಿನ ಬಜೆಟ್‌ನಲ್ಲಿ ಅನ್ನಭಾಗ್ಯ ಯೋಜನೆಗೆ 8,079 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಮೀಸಲಿಟ್ಟಿದೆ. 2023-24ರಲ್ಲಿ ಯೋಜನೆಗೆ 2,900.12 ಕೋಟಿ ರೂಪಾಯಿ ಖರ್ಚಾಗಿದೆ (10,000 ಕೋಟಿ ಮೀಸಲು) (ಅಕ್ಕಿ ಕೊಡುವ ಪ್ಲ್ಯಾನ್ ಇತ್ತು. ಹೀಗಾಗಿ ಹಣ ನಿಗದಿ ಮಾಡಿರಲಿಲ್ಲ).

ಅನ್ನಭಾಗ್ಯ ಯೋಜನೆಯ ಅಕ್ಕಿಯಲ್ಲಿ 5 ಕೆ.ಜಿ ಕೇಂದ್ರ ಸರ್ಕಾರದ್ದು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಈಗಲೂ ಹೇಳುತ್ತಿದ್ದಾರೆ.

ಈ ಹೇಳಿಕೆಗಳನ್ನು ಸಿಎಂ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿದ್ದರೆ, ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಯಾಕೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

3. ಸರ್ಕಾರ ಮೂರನೆಯದಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ‘ಗೃಹಲಕ್ಷಿ. ಈ ಯೋಜನೆಯಡಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂಪಾಯಿ ನೀಡಲಾಗ್ತಿದೆ.

ಈ ಯೋಜನೆ ಎರಡೇ ತಿಂಗಳಿಗೆ ಸ್ಥಗಿತಗೊಂಡಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿತ್ತು. ಸರ್ಕಾರದ ಯೋಜನೆಯನ್ನು ವ್ಯಂಗ್ಯವಾಡಿತ್ತು.

ಈ ಕುರಿತು ಅಕ್ಟೋಬರ್ 10, 2023ರಂದು ಸ್ಪಷ್ಟನೆ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಫಲಾನುಭವಿಗಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ಹೆಸರಿನಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಸಮಸ್ಯೆಯಾಗಿದೆ ಎಂದಿದ್ದರು. ಯೋಜನೆಯ ಫಲಾನುಭವಿಗಳ ಕುರಿತು ಮಾಹಿತಿ ನೀಡಿದ್ದರು. ಪ್ರಸ್ತುತ (2024, ಏಪ್ರಿಲ್) ಗೃಹಲಕ್ಷಿ ಯೋಜನೆ ಮುಂದುವರೆಯುತ್ತಿದೆ.

ಪ್ರತಿ ಮನೆಗೆ ಸುಮಾರು 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆ ಮತ್ತು ಪದವೀದರ ನಿರುದ್ಯೋಗಿ ಯುವ ಜನರಿಗೆ ಮಾಸಿಕ 3 ಸಾವಿರ ರೂ. ಮತ್ತು ಡಿಪ್ಲೋಮಾ ಪದವೀದರರಿಗೆ ಮಾಸಿಕ 1,500 ನೀಡುವ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಎರಡೂ ಯೋಜನೆಗಳು ಪ್ರಸ್ತುತ ಜಾರಿಯಲ್ಲಿದೆ.

2024-25ನೇ ರಾಜ್ಯ ಬಜೆಟ್‌ನಲ್ಲಿ ಗೃಹಜ್ಯೋತಿ ಯೋಜನೆಗೆ 9,657 ಕೋಟಿ ರೂ. ಮತ್ತು ಯುವನಿಧಿ ಯೋಜನೆಗೆ 9,657 ಕೋಟಿ ರೂ. ಸರ್ಕಾರ ಮೀಸಲಿಟ್ಟಿದೆ. 2023-24ನೇ ಆರ್ಥಿಕ ವರ್ಷದಲ್ಲಿ ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂ. ಸರ್ಕಾರ ಮೀಸಲಿಟ್ಟಿತ್ತು. ಈ ಪೈಕಿ 2,900 ಕೋಟಿ ರೂ. ಖರ್ಚು ಮಾಡಿದೆ. ಯುವನಿಧಿ ಯೋಜನೆಗೆ 250 ಕೋಟಿ ರೂ. ಮೀಸಲಿಟ್ಟಿತ್ತು. ಈ ಯೋಜನೆಗೆ 2024ರ ಜನವರಿ 12ರಂದು ಚಾಲನೆ ನೀಡಿರುವ ಹಿನ್ನೆಲೆ ಹಣ ಖರ್ಚಾಗಿರಲಿಲ್ಲ.

ರಾಜ್ಯ ಸರ್ಕಾರದ ಗ್ಯಾರಂಟಿಗೆ ಕೇಂದ್ರ ಹಣ ನೀಡುತ್ತಿದೆಯಾ?

ರಾಜ್ಯ ಸರ್ಕಾರದ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಮಾತನಾಡುವಾಗ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, “ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ಸೇರಿ ರೂ.11,200 ಕೋಟಿ ಹಣವನ್ನೂ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದಿದ್ದಾರೆ.

ನಾವು ಈಗಾಗಲೇ ಹೇಳಿರುವಂತೆ 2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ 52 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆ. ಇದರ್ಥ ಗ್ಯಾರಂಟಿ ಯೋಜನೆಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದಾಗಿದೆ.

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳಲಿದೆಯಾ? 

ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಇತ್ತೀಚೆಗೆ ಹೇಳಿದ್ದಾರೆ.

ಮಾರ್ಚ್ 13, 2024ರಂದು ಉಡುಪಿ ಜಿಲ್ಲೆಯ ಕುಂಜಿಬೆಟ್ಟುವಿನ ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಬಿಜೆಪಿ ಅನಾವಶ್ಯಕ ಅಪಪ್ರಚಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ” ಎಂದಿದ್ದಾರೆ.

ಕೊನೆಯದಾಗಿ, ಜೂನ್ 11, 2023ರಲ್ಲಿ ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಅನೇಕ ಬಾರಿ ಬಿಜೆಪಿ ನಾಯಕರು ಗ್ಯಾರಂಟಿಗಳು ಸ್ಥಗಿತಗೊಳ್ಳಲಿವೆ ಎಂದು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಸ್ಥಗಿತಗೊಳ್ಳುವುದಿಲ್ಲ ಎಂದು ಸಿಎಂ ಆದಿಯಾಗಿ ಸರ್ಕಾರದ ಸಚಿವರೂ ಸ್ಪಷ್ಟನೆ ನೀಡುತ್ತಾ ಬಂದಿದ್ದಾರೆ. ಅದರಂತೆ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಾ ಬಂದರೂ, ಬಿಜೆಪಿ ನಾಯಕರು ಹೇಳಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಂಡಿಲ್ಲ. ಅಲ್ಲದೆ, ರಾಜ್ಯ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ 52 ಸಾವಿರ ಕೋಟಿ ರೂಪಾಯಿ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದೆ.

ಇದನ್ನೂ ಓದಿ : Fact Check: ಕರ್ನಾಟಕದ ಬರ ಪರಿಹಾರ ಕುರಿತು ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...