Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...