Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್ ವಿಶೇಷ ಆರ್ಥಿಕ ವಲಯದಿಂದ ಪಡೆದ ವಿದ್ಯುತ್‌ಗಾಗಿ ಅದಾನಿ ಕಂಪನಿಗೆ ಕಸ್ಟಮ್ಸ್ ಸುಂಕ ವಿನಾಯಿತಿ ನೀಡಲು ಸುಪ್ರೀಂ ಅನುಮತಿ

ಮುಂದ್ರಾದಲ್ಲಿರುವ ತನ್ನ SEZ ಘಟಕದಿಂದ ದೇಶೀಯ ಸುಂಕ ಪ್ರದೇಶಕ್ಕೆ (DTA) ಸರಬರಾಜು ಮಾಡುವ ವಿದ್ಯುತ್ ಮೇಲಿನ ಕಸ್ಟಮ್ಸ್ ಸುಂಕವನ್ನು ವಿಧಿಸುವುದರಿಂದ ಅದಾನಿ ಪವರ್‌ಗೆ ವಿನಾಯಿತಿ ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್‌ನ ಜೂನ್ 28, 2019...

ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಶಾಸಕರು

ಬೀದರ್ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್...

ಅಮೆರಿಕಾ: ಭಾರತೀಯ ಮಹಿಳೆ ಶವವಾಗಿ ಪತ್ತೆ, ಮಾಜಿ ಗೆಳೆಯ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ

ಕಳೆದ ವಾರ ನಾಪತ್ತೆಯಾಗಿದ್ದ 27 ವರ್ಷದ ಭಾರತೀಯ ಮಹಿಳೆ ನಿಕಿತಾ ಗೋಡಿಶಾಲಾ ಅಮೆರಿಕಾದ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆಕೆಯ ಮಾಜಿ ಗೆಳೆಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತ ಆಕೆಯನ್ನು ಕೊಂದು ಭಾರತಕ್ಕೆ...

ಐಪಿಎಲ್ ಪ್ರಸಾರ ಅನಿರ್ದಿಷ್ಟಾವಧಿಗೆ ನಿಷೇಧಿಸಲು ಆದೇಶಿಸಿದ ಬಾಂಗ್ಲಾದೇಶ ಸರ್ಕಾರ

2026 ರ ಋತುವಿನ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ (ಐಪಿಎಲ್‌) ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೆಕೆಆರ್‌ ಕೈಬಿಟ್ಟ ಬಳಿಕ, ಐಪಿಎಲ್‌ ಪ್ರಸಾರ ಮತ್ತು ಪ್ರಚಾರದ ಮೇಲೆ ಬಾಂಗ್ಲಾದೇಶ ಸರ್ಕಾರ ಅನಿರ್ದಿಷ್ಟಾವಧಿ ನಿಷೇಧ ಹೇರಿದೆ. ಈ ನಿರ್ಧಾರವನ್ನು...

‘ನನ್ನನ್ನು ಸಂತೋಷಗೊಳಿಸುವುದು ಮುಖ್ಯ’: ಭಾರತದ ಮೇಲೆ ಸುಂಕ ಏರಿಸುವ ಬೆದರಿಕೆ ಹಾಕಿದ ಟ್ರಂಪ್

‘ರಷ್ಯಾದ ತೈಲ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡದಿದ್ದಲ್ಲಿ ಭಾರತದ ಮೇಲಿನ ಸುಂಕ ಹೆಚ್ಚಿಸುತ್ತೇವೆ’ ಎಂದು ಟ್ರಂಪ್ ಏರ್‌ಫೋರ್ಸ್ ಒನ್ ವಿಮಾನ ಪ್ರಯಾಣದ ವೇಳೆ ವರದಿಗಾರರೊಂದಿಗೆ ತಿಳಿಸಿದ್ದನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಪ್ರಕಟಿಸಿದೆ. ರಷ್ಯಾ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್-ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ್ದು ಯಾಕೆ?

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ಆದರೆ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್,...

ವೆನೆಜುವೆಲಾ-ಅಮೇರಿಕಾ ಸಂಘರ್ಷ: ಭಾರತದ ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು?

ಅಮೆರಿಕ ಮತ್ತು ವೆನೆಜುವೆಲಾ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಈ ಸಂಘರ್ಷವು ಭಾರತದ ತೈಲ ಆಮದು ಮಸೂದೆ ಮತ್ತು ವ್ಯಾಪಾರ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದೇ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ. ವೆನೆಜುವೆಲಾ ದೇಶದ ಅಧ್ಯಕ್ಷ...

ಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

ತಮ್ಮ ಮಾತೃ ಭಾಷೆ ಬಂಗಾಳಿಯಲ್ಲಿ ಮಾತನಾಡಿದ್ದಕ್ಕಾಗಿ ಬಾಂಗ್ಲಾದೇಶೀಯರು ಎಂದು ಶಂಕಿಸಿ ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಮೂವರು ವಲಸೆ ಕಾರ್ಮಿಕರ ಮೇಲೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕಾರ್ಮಿಕರು ತಮ್ಮ...

ವೆನೆಜುವೆಲಾ ದಾಳಿಯ ನಂತರ ಕೊಲಂಬಿಯಾ, ಕ್ಯೂಬಾ, ಮೆಕ್ಸಿಕೊ, ಗ್ರೀನ್‌ಲ್ಯಾಂಡ್‌ಗೆ ಟ್ರಂಪ್ ಬೆದರಿಕೆ

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡೊರೊ ಅವರನ್ನು ವಾಷಿಂಗ್ಟನ್ ಅಪಹರಿಸಿದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಮತ್ತು ಕ್ಯೂಬಾ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರನ್ನು...

ಯುಎಸ್‌| ಐತಿಹಾಸಿಕ ಪಾರ್ಸಿಪ್ಪಾನಿ ನಗರದ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಭಾರತೀಯ-ಅಮೆರಿಕನ್ ಪ್ರಜೆ ಪುಲ್ಕಿತ್ ದೇಸಾಯಿ

ಅಮೆರಿಕದ ನೌಕಾಪಡೆಯ ಅನುಭವಿ ಮತ್ತು ತಂತ್ರಜ್ಞಾನ ವೃತ್ತಿಪರ ಪುಲ್ಕಿತ್ ದೇಸಾಯಿ ಅವರು ನ್ಯೂಜೆರ್ಸಿಯ ಪಾರ್ಸಿಪ್ಪಾನಿಯ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಭಾರೀ ಪೈಪೋಟಿಯ ಸ್ಪರ್ಧೆಯ ಚುನಾವಣೆಯ ನಂತರ ಅಧಿಕಾರ ವಹಿಸಿಕೊಂಡ ಮೊದಲ ಭಾರತೀಯ-ಅಮೆರಿಕನ್...