Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...