Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...