Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...