Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...