Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...