Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...