Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...