Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್... ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಬಿಜೆಪಿ ಪ್ರತಿಭಟನೆಯಲ್ಲಿ ಯುವತಿಯ ಡ್ಯಾನ್ಸ್… ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಯುವತಿಯೊಬ್ಬರು ವೇದಿಕೆ ಮೇಲೆ ನೃತ್ಯ ಮಾಡಿದ ವಿಡಿಯೋವೊಂದು ಕಳೆದರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಪಶ್ಚಿಮ ಬಂಗಾಳ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆ ಪ್ರತಿಭಟನೆಯಲ್ಲಿ ಮಹಿಳೆಯರನ್ನು ತಂದು ಕುಣಿಸಲಾಗಿದೆ ಎಂದು ಅನೇಕರು ಆರೋಪಿಸಿದ್ದರು.

ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ (@SaketGokhale)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಇದು ಆರ್‌ಜಿ ಕರ್‌ ಘಟನೆ ಖಂಡಿಸಿ ಬಂಗಾಳದಲ್ಲಿ ಬಿಜೆಪಿ ಆಯೋಜಿಸಿದ ಪ್ರತಿಭಟನೆ ಎನ್ನಲಾಗುತ್ತಿದೆ. ಇದು “ಮಹಿಳೆಯರನ್ನು ಗೌರವಿಸುವ” ಬಿಜೆಪಿಯ ಕಲ್ಪನೆಯೇ? ಬಿಜೆಪಿಯ ಸ್ತ್ರೀದ್ವೇಷವಾದಿಗಳು ರಾಜಕೀಯ ಅಜೆಂಡಾಗಳಿಗಾಗಿ ಪ್ರತಿಭಟನೆಯನ್ನು ಹೈಜಾಕ್ ಮಾಡಿದರು. ಅವರಿಗೆ ಸಂತ್ರಸ್ತೆ ಅಥವಾ ಯಾವುದೇ ಮಹಿಳೆಯ ಬಗ್ಗೆ ಕಾಳಜಿಯಿಲ್ಲ” ಎಂದು ಬರೆದುಕೊಂಡಿದ್ದರು.

ಮತ್ತೊಬ್ಬರು ಭವಿಕಾ ಕಪೂರ್ (@BhavikaKapoor5) ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 26ರಂದು ವಿಡಿಯೋ ಹಂಚಿಕೊಂಡು “ಬಿಜೆಪಿ ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಪ್ರತಿಭಟಿಸಬಹುದು. ಆರ್‌ಜಿ ಕರ್ ಪ್ರಕರಣದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿನ್ನೆಲೆ ಬ್ಯಾನರ್‌ಗಳು “ನಮಗೆ ನ್ಯಾಯ ಬೇಕು” ಪ್ರತಿಭಟನೆಯ ಹಿಂದುತ್ವವಾದಿ ಶೈಲಿ” ಎಂದು ಬರೆದುಕೊಂಡಿದ್ದರು.

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾತೆ (@SupriyaShrinate)ಅವರು ಆಗಸ್ಟ್ 26ರಂದು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು ” ಇದು ನಿಜವಾಗಿಯೂ ಆರ್‌ಜಿ ಕರ್‌ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಾ?” ಎಂದು ಬರೆದುಕೊಂಡಿದ್ದರು. ನಂತರ ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ.

ಟಿಎಂಸಿ ನಾಯಕರು ಸೇರಿದಂತೆ ಇನ್ನೂ ಅನೇಕ ಜನರು ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌ಗಳಲ್ಲಿ ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ದ ಕಿಡಿಕಾರಿದ್ದರು.

ಆಗಸ್ಟ್ 26ರಂದು ಈ ಕುರಿತು ಸುದ್ದಿ ವರದಿ ಪ್ರಕಟಿಸಿದ್ದ ಇಂಡಿಯಾ ಟುಡೇ ಸುದ್ದಿ ವೆಬ್‌ಸೈಟ್‌ ” ಯುವತಿಯೊಬ್ಬಳು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಬಿಜೆಪಿಯ ಪ್ರತಿಭಟನೆಯದ್ದು ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಅದನ್ನು ಅಲ್ಲಗಳೆದಿದೆ” ಎಂದಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಪಿಜುಶ್ ಭೌಮಿಕ್’ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡು, ಆ ವಿಡಿಯೋವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದರು. ಅವರು ತಮ್ಮ ಪೋಸ್ಟ್‌ನಲ್ಲಿ ‘ದೇವಸ್ತುತಿ ದೇವನಾಥ್’ ಎಂಬ ನೃತ್ಯ ಶಿಕ್ಷಕಿಯ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ” ಎಂದು ಹೇಳಿದೆ.

ಮುಂದುವರೆದು “ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ವ್ಯಕ್ತಿ ಪಿಜುಶ್ ಭೌಮಿಕ್ ಅವರಿಗೆ ನಾವು ಕರೆ ಮಾಡಿದ್ದೇವೆ. ಅವರು ಆ ವಿಡಿಯೋ ಬಿಜೆಪಿ ಪ್ರತಿಭಟನೆಯದ್ದು ಎಂಬುವುದನ್ನು ಅಲ್ಲಗಳೆದಿದ್ದು, ಅದು ಗ್ರಾಮ ಹಬ್ಬದ ವಿಡಿಯೋ ಎಂಬುವುದಾಗಿ ಹೇಳಿದ್ದಾರೆ ಎಂದು” ಆಲ್ಟ್‌ ನ್ಯೂಸ್ ತಿಳಿಸಿದೆ.

“ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ನವದ್ವೀಪ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾರ್ ಬ್ರಹ್ಮನಗರದಲ್ಲಿ ಪ್ರತಿ ವರ್ಷ ‘ಮಾ ಮಾನಸ ಪೂಜೆ’ಯ ಸಮಯದಲ್ಲಿ ಸೇವಕ ಸಮಿತಿ ಎಂಬ ಸ್ಥಳೀಯ ಕ್ಲಬ್ ಗ್ರಾಮ ಹಬ್ಬವೊಂದನ್ನು ಆಯೋಜಿಸುತ್ತದೆ. ಚಾರ್ ಬ್ರಹ್ಮನಗರ ಪ್ರದೇಶವು ನವದ್ವೀಪ್ ಬ್ಲಾಕ್‌ನ ಸಿಎಮ್‌ಸಿಬಿ ಗ್ರಾಮ ಪಂಚಾಯಿತಿಗೆ ಒಳಪಟ್ಟಿದೆ. ಈ ಪಂಚಾಯತಿಯು ಪ್ರಸ್ತುತ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಶದಲ್ಲಿದೆ”.

“‘ಮಾ ಮಾನಸ’ ಹಾವುಗಳ ಹಿಂದೂ ಜಾನಪದ ದೇವತೆ. ಆಕೆಯನ್ನು ಶ್ರಾವಣ ಮಾಸದಲ್ಲಿ ಮುಖ್ಯವಾಗಿ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮಹಿಳೆಯರು ಪೂಜಿಸುತ್ತಾರೆ. ಆಗಸ್ಟ್ ತಿಂಗಳಲ್ಲಿ ಮಾನಸ ಪೂಜೆಯ ಸಮಯದಲ್ಲಿ ಬಂಗಾಳದ ಹಲವಾರು ಭಾಗಗಳಲ್ಲಿ ಗ್ರಾಮೀಣ ಹಬ್ಬಗಳನ್ನು ಆಯೋಜಿಸಲಾಗುತ್ತದೆ” ಎಂದು ಆಲ್ಟ್‌ ನ್ಯೂಸ್ ಹೇಳಿದೆ.

“ನಾವು ದೂರವಾಣಿ ಮೂಲಕ ಮಾತನಾಡಿದ ಪಿಜುಶ್ ಭೌಮಿಕ್ ಅವರು ಚಾರ್ ಬ್ರಹ್ಮನಗರದ ಹಬ್ಬ ಆಯೋಜಕರಲ್ಲಿ ಒಬ್ಬರು. ಅವರು ನೀಡಿರುವ ಮಾಹಿತಿಯಂತೆ ಈ ವರ್ಷದ ಆಗಸ್ಟ್ 17ರಂದು ಮಾ ಮಾನಸ ಪೂಜೆ ಇತ್ತು. ಈ ಪ್ರಯುಕ್ತ ಆಗಸ್ಟ್ 17ರಿಂದ 22ರವರೆಗೆ ಹಬ್ಬ ಆಯೋಜಿಸಿದ್ದೆವು. ಕಾರ್ಯಕ್ರಮದ ವೇದಿಕೆಯಲ್ಲಿ ಆರ್‌ಜಿ ಕರ್ ಆಸ್ಪತ್ರೆಯ ಘಟನೆ ಖಂಡಿಸಿ ಪೋಸ್ಟರ್‌ಗಳನ್ನು ಹಾಕಿದ್ದೆವು. ಅದೇ ವೇದಿಕೆಯಲ್ಲಿ ಆಗಸ್ಟ್ 19ರಂದು ಯುವತಿಯೊಬ್ಬರು ನೃತ್ಯ ಮಾಡಿದ್ದರು. ಅದರ ವಿಡಿಯೋ ವೈರಲ್ ಆಗಿದೆ” ಆಲ್ಟ್ ನ್ಯೂಸ್ ವಿವರಿಸಿದೆ.

ಒಟ್ಟಿನಲ್ಲಿ ಗ್ರಾಮ ಹಬ್ಬದ ವಿಡಿಯೋವನ್ನು ಬಿಜೆಪಿಯ ಪ್ರತಿಭಟನೆಯ ವಿಡಿಯೋ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಆರ್‌ಜಿ ಕರ್‌ ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆ ಖಂಡಿಸಿದ ಪೋಸ್ಟರ್‌ಗಳು ವೇದಿಕೆ ಮೇಲೆ ಇರುವುದರಿಂದ ಹಲವರು ತಪ್ಪು ತಿಳಿದುಕೊಂಡಿರಬಹುದು.

PC : altnews.in

ಆದರೆ, ವೈರಲ್ ವಿಡಿಯೋದಲ್ಲಿರುವ ವೇದಿಕೆಯಲ್ಲಿ “ಜೈ ಮಾ ಮಾನಸ. ಗಂಗಾನದಿಯ ದಡದಲ್ಲಿ ಮಾ ಮಾನಸ ಮತ್ತು ಬೆಹುಲಾ-ಲಖಿಂದರ್ ಮೇಳ. ದಿನಾಂಕ : 31 ಶ್ರಾವಣದಿಂದ ಐದು ದಿನಗಳು. ಸ್ಥಳ: ಚಾರ್ ಬ್ರಹ್ಮನಗರ ಸೇವಕ ಸಮಿತಿ ಮೈದಾನ ಮತ್ತು ಗಂಗಾ ನದಿ ದಂಡೆ. ಸೇವಕ ಸಮಿತಿಯಿಂದ ಆಯೋಜಿಸಲಾಗಿದೆ” ಎಂದು ಬ್ಯಾನರ್‌ ಹಾಕಿರುವುದು ನೋಡಬಹುದು. ಆ ಬ್ಯಾನರ್‌ನಲ್ಲಿ ಹಿಂದೂ ದೇವಿಯ ಫೋಟೋ ಕೂಡ ಇದೆ.

ಇದನ್ನೂ ಓದಿ : FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...